Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅರಣ್ಯ ಭೂಮಿ ಹಕ್ಕು ಅರ್ಜಿಯನ್ನು ಕೂಡಲೇ...

ಅರಣ್ಯ ಭೂಮಿ ಹಕ್ಕು ಅರ್ಜಿಯನ್ನು ಕೂಡಲೇ ಸಮೀಕ್ಷೆ ನಡೆಸಿ: ಸಚಿವ ಕಾಗೋಡು ತಿಮ್ಮಪ್ಪ

ವಾರ್ತಾಭಾರತಿವಾರ್ತಾಭಾರತಿ15 May 2017 10:30 PM IST
share
ಅರಣ್ಯ ಭೂಮಿ ಹಕ್ಕು ಅರ್ಜಿಯನ್ನು ಕೂಡಲೇ ಸಮೀಕ್ಷೆ ನಡೆಸಿ: ಸಚಿವ ಕಾಗೋಡು ತಿಮ್ಮಪ್ಪ

ಶಿಕಾರಿಪುರ, ಮೇ 15: ಅರಣ್ಯ ಭೂಮಿ ಹಕ್ಕು ಅರ್ಜಿಯನ್ನು ಕೂಡಲೇ ಸಮೀಕ್ಷೆ ನಡೆಸಿ ಉಪವಿಭಾಗಾಧಿಕಾರಿಗೆ ಕಳುಹಿಸಿ, ಜಿಪಿಎಸ್ ಗೂಗಲ್ ಸರ್ಚ್ ಸಮೀಕ್ಷೆ ಎಂಬ ನೆಪವೊಡ್ಡಿ ತಡಮಾಡಬೇಡಿ, ಅಧಿಕಾರಿಗಳು ಅರ್ಹರನ್ನು ದಿಕ್ಕು ತಪ್ಪಿಸುತ್ತಿದ್ದು ಇದುವರೆಗೂ ಆಗಿದ್ದು. ಇದೀಗ ನನ್ನ ತಲೆ ಕೆಟ್ಟಿದೆ ವ್ಯಾಪ್ತಿ ಮೀರಿ ವರ್ತಿಸದಂತೆ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದ ಪರಿ ಇದು. 

ಸೋಮವಾರ ಇಲ್ಲಿನ ತಾ.ಪಂ ಸಭಾಂಗಣದಲ್ಲಿ ನಡೆದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಗೆ ದಿಡೀರ್ ಆಗಮಿಸಿದ ಅವರು, ಸಮಾಜ ಕಲ್ಯಾಣ ಇಲಾಖೆಯಲ್ಲಿ ಅರಣ್ಯ ಹಕ್ಕು ಅರ್ಜಿ ಎಷ್ಟು ಬಾಕಿಯುಳಿದಿದೆ ಎಂದು ಪ್ರಶ್ನಿದರು.

ತಾಲೂಕು ಸಮಾಜ ಕಲ್ಯಾಣಾಧಿಕಾರಿ ಶ್ರೀನಿವಾಸ್, ಹಲವು ಅರ್ಜಿ ಅರಣ್ಯ ಇಲಾಖೆ ಅಧಿಕಾರಿಗಳ ಬಳಿಯಿದ್ದು ಈಗಿರುವ ಅರ್ಜಿಗಳಿಗೆ ಜಿಪಿಎಸ್ ಸಮೀಕ್ಷೆಯಾಗದೆ ಬಾಕಿಯುಳಿದಿದೆ ಎಂದು ಸಮಜಾಯಿಷಿ ನೀಡಲು ಪ್ರಯತ್ನಿಸಿದಾಗ ತೀವ್ರ ಕೆಂಡಾಮಂಡಲವಾದ ಸಚಿವರು ಜಿಪಿಎಸ್ ಗೂಗಲ್ ಸರ್ಚ್  ಎಂದು ಅರ್ಜಿಗಳನ್ನು ಬಾಕಿಯುಳಿಸಿಕೊಂಡಿದ್ದೀರಾ ? ನಿಮಗೆ ಜಿಪಿಎಸ್ ಸಮೀಕ್ಷೆಗೆ ಸೂಚಿಸಿದವರ್ಯಾರು ಕಾನೂನಿನ ಬಗ್ಗೆ ಸ್ಪಷ್ಟವಾದ ಅರಿವುಂಟಾ ಜಿಪಿಎಸ್ ಗೂಗಲ್ ಸರ್ಚ್ ಎಂದು ವ್ಯಾಪ್ತಿ ಮೀರಿ ವರ್ತಿಸಬೇಡಿ ಈಗಾಗಲೇ ಸಾಗುವಳಿದಾರರು ಭೂಮಿ ಹಕ್ಕಿಗಾಗಿ ಹಲವು ವರ್ಷ ಕಾಲದಿಂದ ಕಾದು ಕುಳಿತಿದ್ದಾರೆ. ಇದೀಗ ಅರ್ಹರಿಗೆ ಭೂಮಿ ಹಕ್ಕು ನೀಡುವ ದೃಡ ನಿರ್ಧಾರ ಕೈಗೊಳ್ಳಲಾಗಿದೆ. ಇಂತಹ ಸಂದರ್ಭ ವಿವಿಧ ನೆಪವೊಡ್ಡಿ ಅರ್ಹರನ್ನು ದಿಕ್ಕು ತಪ್ಪಿಸಬೇಡಿ ಎಂದರು.

ತಾಲೂಕಿನಾದ್ಯಂತ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಿದಲ್ಲಿ ಟ್ಯಾಂಕರ್ ಮೂಲಕ ಅಗತ್ಯವಿರುವ ನೀರು ಸರಬರಾಜು ಮಾಡುವಂತೆ ತಿಳಿಸಿದ ಅವರು ಇದಕ್ಕೆ ಎಷ್ಟು ಹಣ ಖರ್ಚಾದರೂ ನೀಡುವುದಾಗಿ ತಿಳಿಸಿ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸುವಂತೆ ಸ್ಥಳದಲ್ಲಿದ್ದ ಶಾಸಕ ರಾಘವೇಂದ್ರರಿಗೆ ಸೂಚಿಸಿದರು.

  ತಾಲೂಕಿನ ಪ್ರಮುಖ ರಸ್ತೆ ಕಾಮಗಾರಿಗಳಿಗೆ ಸಮೀಪದಲ್ಲಿನ ಕೆರೆಯ ಮಣ್ಣನ್ನು ಬಳಸಿಕೊಂಡು ರೈತರ ಸಹಿತ ಸರ್ಕಾರದ ಹಣ ಉಳಿತಾಯಕ್ಕೆ ಕಳೆದ 2-3 ಸಭೆಯಲ್ಲಿ ಅಧಿಕಾರಿಗಳಿಗೆ ಸ್ಪಷ್ಟವಾದ ಸೂಚನೆಯನ್ನು ನೀಡಲಾಗಿದ್ದರೂ ಧಿಕ್ಕರಿಸಲಾಗುತ್ತಿದೆ ಸಭೆಯ ಗೌರವ ಹಾಗೂ ಜನಪ್ರತಿನಿಧಿಗಳ ಸೂಚನೆಗೆ ಬೆಲೆ ಇಲ್ಲವಾಗಿದೆ ಎಂದು ಜಿ.ಪಂ ಸದಸ್ಯ ನರಸಿಂಹನಾಯ್ಕ ತೀವ್ರವಾಗಿ ಆಕ್ಷೇಪಿಸಿದರು.

  ಕೆಡಿಪಿ ಸದಸ್ಯ ಉಮೇಶ ಮಾರವಳ್ಳಿ, ಸಿಆರ್‌ಎಫ್ ಕಾಮಗಾರಿಯ ಪ್ರತಿ ಚೆಕ್ ಮೆಸರ್‌ಮೆಂಟ್ ಬಿಡುಗಡೆ ಮಾಡುವಂತೆ ಆಗ್ರಹಿಸಿ ಹಲವೆಡೆ ಕಾಮಗಾರಿಯಲ್ಲಿ ಸೂಕ್ತ ಪ್ರಮಾಣ ಸಿಮೆಂಟ್ ಬಳಸದೆ ಅಳತೆಯಲ್ಲಿ ಹೆಚ್ಚಿನ ವ್ಯತ್ಯಾಸವಿದ್ದು ಈ ಬಗ್ಗೆ ದಾಖಲೆಯನ್ನು ಹೊಂದಿರುವುದಾಗಿ ತಿಳಿಸಿದರು. ಶಾಸಕ ರಾಘವೇಂದ್ರ ಕಾಮಗಾರಿ ಬಗ್ಗೆ ತನಿಖೆಯಾದಲ್ಲಿ ಕಪ್ಪುಚುಕ್ಕೆ ಇಲ್ಲದ ರೀತಿಯಲ್ಲಿ ಪಾರದರ್ಶಕವಾಗಿ ಅಧಿಕಾರಿಗಳು ನಿರ್ವಹಿಸುವಂತೆ ತಿಳಿಸಿದರು.
   ಈ ಸಂದರ್ಭ ತಾ.ಪಂ ಅಧ್ಯಕ್ಷ ಪರಮೇಶ್ವರಪ್ಪ, ಉಪಾಧ್ಯಕ್ಷೆ ರೂಪ, ಜಿ.ಪಂ ಸದಸ್ಯೆ ಮಮತಾಸಾಲಿ, ರೇಣುಕಾ, ಆರುಂಧತಿ, ಕೆಡಿಪಿ ಸದಸ್ಯ ಭಂಡಾರಿ ಮಾಲತೇಶ, ಉಮೇಶಪ್ಪ, ಹನುಮಂತಪ್ಪ ತಹಸೀಲ್ದಾರ್ ಶಿವಕುಮಾರ್. ಇಒ ಆನಂದಕುಮಾರ, ಸಹಾಯಕ ಕೃಷಿ ನಿರ್ದೇಶಕ ಪ್ರಭಾಕರ್, ತಾ.ವೈದ್ಯಾಧಿಕಾರಿ ಡಾ.ಮಂಜುನಾಥ ಸಹಿತ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X