Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಿದೇಶಿ ಪಾವತಿ ಹಗರಣ ಭೇದಿಸಿದ ಸಿಬಿಐ

ವಿದೇಶಿ ಪಾವತಿ ಹಗರಣ ಭೇದಿಸಿದ ಸಿಬಿಐ

ವಾರ್ತಾಭಾರತಿವಾರ್ತಾಭಾರತಿ15 May 2017 11:40 PM IST
share

ಹೊಸದಿಲ್ಲಿ, ಮೇ 15: 2,200 ಕೋಟಿ ರೂ.ಗೂ ಅಧಿಕ ಮೊತ್ತದ ಬೃಹತ್ ವಿದೇಶಿ ಪಾವತಿ ಹಗರಣವನ್ನು ತಾನು ಭೇದಿಸಿರುವುದಾಗಿ ಸಿಬಿಐ ಸೋಮವಾರ ಘೋಷಿಸಿದೆ. 2015-16ನೆ ಸಾಲಿನಲ್ಲಿ 13 ಕಂಪೆನಿಗಳು ಕೇವಲ 24.64 ಕೋಟಿ ರೂ. ವೌಲ್ಯದ ಆಮದಿಗೆ 2,200 ಕೋಟಿ ರೂ.ಯನ್ನು ವಿದೇಶಿ ಕಂಪೆನಿಗಳಿಗೆ ಪಾವತಿಸುವ ಮೂಲಕ ಭಾರೀ ಅಕ್ರಮವೆಸಗಿರುವುದಾಗಿ ಸಿಬಿಐ ಆರೋಪಿಸಿದೆ.

ಆಮದು ವೌಲ್ಯಕ್ಕಿಂತ ಅಧಿಕ ಮೊತ್ತದ ಪಾವತಿಗಳನ್ನು ಮಾಡುವ ಮೂಲಕ ಸ್ಟೆಲ್‌ಕೊನ್ ಇನ್‌ಫ್ರಾಟೆಲ್ ಲಿಮಿಟೆಡ್ (ಎಸ್‌ಐಪಿಎಲ್) ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿದೆ. 2015-16ರ ಅವಧಿಯಲ್ಲಿ ವಿದೇಶಿ ಕಂಪೆನಿಗಳಿಗೆ ದೊಡ್ಡ ಪ್ರಮಾಣದಲ್ಲಿ ಹಣ ಪಾವತಿಸಿದ್ದು ಇವುಗಳ ಪೈಕಿ ಹಲವು ಹಣ ವರ್ಗಾವಣೆಯ ವ್ಯವಹಾರಗಳು ಕಂಪೆನಿಯ ಪಂಜಾಬ್ ನ್ಯಾಶನಲ್ ಬ್ಯಾಂಕ್ ಖಾತೆಯಿಂದ ನಡೆಸಲ್ಪಟ್ಟಿದ್ದವು ಎಂದು ಅದು ಆಪಾದಿಸಿದೆ. ಒಟ್ಟಾರೆ ಈ ಅವಧಿಯಲ್ಲಿ ಎಸ್‌ಐಪಿಎಲ್ ಕಂಪೆನಿಯು ಆಮದು ವ್ಯವಹಾರಕ್ಕಾಗಿನ ತನ್ನ ಆರು ಬ್ಯಾಂಕ್ ಖಾತೆಗಳನ್ನು ಬಳಸಿಕೊಂಡು 680.12 ಕೋಟಿ ರೂ. ಪಾವತಿಸಿತ್ತು. ಆದರೆ ವಾಸ್ತವಿಕವಾಗಿ ಈ ಅವಧಿಯಲ್ಲಿ ಅದು ಕೇವಲ ಕಸ್ಟಮ್ಸ್ ಸುಂಕ ಸಹಿತವಾಗಿ 3.14 ಕೋಟಿ ರೂ. ವೌಲ್ಯದ ಸರಕುಗಳನ್ನು ಆಮದು ಮಾಡಿಕೊಂಡಿತ್ತು ಎಂದು ಸಿಬಿಐ ಆಪಾದಿಸಿದೆ.
ಹೆಚ್ಚುವರಿ 678.98 ಕೋಟಿ ರೂ.ಗಳನ್ನು ಎಸ್‌ಐಪಿಎಲ್ ಅಕ್ರಮವಾಗಿ ವಿದೇಶಕ್ಕೆ ವರ್ಗಾಯಿಸಿದೆಯೆಂದು ಸಿಬಿಐ ಎಫ್‌ಐಆರ್‌ನಲ್ಲಿ ತಿಳಿಸಿದೆ. ಇದೇ ರೀತಿಯ ಕಾರ್ಯವಿಧಾನವನ್ನು ಬಳಸಿಕೊಂಡು ಇತರ 12 ಕಂಪೆನಿಗಳು ಕೂಡಾ ನಕಲಿ ಆಮದು ದಾಖಲೆಗಳನ್ನು ಸಲ್ಲಿಸಿ 1,572.7 ಕೋಟಿ ರೂ. ಹಣವನ್ನು ವಿದೇಶಕ್ಕೆ ವರ್ಗಾಯಿಸಿರುವುದಾಗಿ ಸಿಬಿಐ ಎಫ್‌ಐಆರ್‌ನಲ್ಲಿ ಆರೋಪಿಸಿದೆ.
ಈ ಎಲ್ಲಾ ಕಂಪೆನಿಗಳು ನಕಲಿ ಅಥವಾ ಅಸ್ತಿತ್ವದಲ್ಲೇ ಇಲ್ಲದ ವಿಳಾಸಗಳನ್ನು ನೀಡಿ, ಭಾರತೀಯ ಆಮದು ಆಯೋಗದಲ್ಲಿ ನೋಂದಣಿಯನ್ನು ಮಾಡಿಸಿಕೊಂಡಿದ್ದವು. 2015 ಹಾಗೂ 2016ರಲ್ಲಿ ಮುಂಬೈ ಬಂದರು ಹಾಗೂ ಪೂರ್ವ ಮುಂಬೈನ ಜೆಎನ್‌ಪಿಟಿ ಬಂದರಿನ ಮೂಲಕ ವಿವಿಧ ಸರಕುಗಳನ್ನು ಆಮದು ಮಾಡಿಕೊಂಡಿದ್ದವು.
ಈ ಕಂಪೆನಿಗಳು ಬ್ಯಾಂಕುಗಳ ಮೂಲಕ 2,252.82 ಕೋಟಿ ರೂ.ಯನ್ನು ಪಾವತಿಸಿದ್ದರೂ, ಅವು ಕೇವಲ 24.64 ಕೋಟಿ ರೂ. ವೌಲ್ಯದ ಸರಕನ್ನು ಮಾತ್ರ ಆಮದು ಮಾಡಿಕೊಂಡಿದ್ದವು ಎಂದು ಸಿಬಿಐ ಎಫ್‌ಐಆರ್‌ನಲ್ಲಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X