Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ‘ರಜೆ ಕಡಿತ’ದ ರಾಜಕೀಯ!

‘ರಜೆ ಕಡಿತ’ದ ರಾಜಕೀಯ!

-ಕೇಶವರಾಮ ಅಡಪ, ಕಿನ್ನಿಗೋಳಿ-ಕೇಶವರಾಮ ಅಡಪ, ಕಿನ್ನಿಗೋಳಿ15 May 2017 11:57 PM IST
share

ಮಾನ್ಯರೆ, 

ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥರ ಸರಕಾರ ಇತ್ತೀಚೆಗೆ 15 ದಿನ ಸರಕಾರಿ ಕಚೇರಿಗಳ ಹಾಗೂ ಶಾಲೆಗಳ ರಜೆ ಕಡಿತಗೊಳಿಸಿದ್ದಕ್ಕಾಗಿ ಹೊಗಳಿಕೆಯ ಸುರಿಮಳೆಯಾಯಿತು ಹಾಗೂ ಇತರ ರಾಜ್ಯಗಳೂ ಅದನ್ನು ಅನುಸರಿಸಬೇಕು ಎಂದು ಕೆಲವರ ಬೇಡಿಕೆ ಬಂತು. ಆದರೆ ಇವರು ಇಲ್ಲಿ ಮೂಲ ವಿಷಯವನ್ನೇ ಸರಿಯಾಗಿ ಗಮನಿಸಿಲ್ಲ. ಉತ್ತರಪ್ರದೇಶದಲ್ಲಿ ಅಖಿಲೇಶ್ ಸರಕಾರ ಇರುವಾಗ ಶಾಲೆಗಳಿಗೆ ಹಾಗೂ ಸರಕಾರಿ ಕಚೇರಿಗಳಿಗೆ ಒಟ್ಟು 46 ರಜಾದಿನಗಳಿದ್ದವು. ಅವುಗಳಲ್ಲಿ ಯೋಗಿ ಕೇವಲ 15 ದಿನ ಕಡಿತಗೊಳಿಸಿದ್ದು. ಅಂದರೆ ಇನ್ನೂ 31 ದಿನಗಳ ರಜೆ ಉಳಿದುಕೊಂಡಿವೆ. ಇದಕ್ಕೆ ಹೋಲಿಸಿದರೆ ಕರ್ನಾಟಕದಲ್ಲಿ ಶಾಲೆಗಳಿಗೆ ಹಾಗೂ ಸರಕಾರಿ ಕಚೇರಿಗಳಿಗೆ ಒಟ್ಟು ರಜೆ ಇರುವುದು ಕೇವಲ 21 ದಿನ ಮಾತ್ರ. ಇದರಲ್ಲಿ ರವಿವಾರ ಬರುವ ಹಬ್ಬ ಹಾಗೂ ಬ್ಯಾಂಕುಗಳಿಗೆ ಮಾತ್ರ ಇರುವ ವಾರ್ಷಿಕ ಲೆಕ್ಕಾಚಾರ ರಜೆ ಸೇರಿಲ್ಲ. ಇದಕ್ಕೆ ಹೋಲಿಸಿದರೆ ಉತ್ತರ ಪ್ರದೇಶದಲ್ಲಿ ಇನ್ನೂ ಹತ್ತು ದಿನ ರಜೆ ಹೆಚ್ಚು ಇದೆ. ಈ ಹೆಚ್ಚಿನ ಹತ್ತು ದಿನ ರಜೆಗಳನ್ನೂ ಯೋಗಿ ಕಡಿಮೆ ಮಾಡಿದರೆ ಆಗ ಅವರನ್ನು ಸಮರ್ಥ ಆಡಳಿತಗಾರ ಎಂದು ಒಪ್ಪಬಹುದು.

ಒಂದು ವೇಳೆ ಉತ್ತರ ಪ್ರದೇಶದಲ್ಲಿ ಮೊದಲು ಬಿಜೆಪಿ ಆಡಳಿತವಿದ್ದು ಅವರು 46 ದಿನ ರಜೆ ಕೊಟ್ಟಿದ್ದರೆ ಹಾಗೂ ಅದನ್ನೇ ಕಾಂಗ್ರೆಸ್ ಅಥವಾ ಅಖಿಲೇಶ್-ಮಾಯಾವತಿ ಸರಕಾರ ಕಡಿತಗೊಳಿಸಿದ್ದರೆ ಸಂಘ ಪರಿವಾರದ ಪ್ರತಿಕ್ರಿಯೆ ಹೇಗಿರುತ್ತಿತ್ತು ಗೊತ್ತೇ? ಹಿಂದೂ ಸಂತರ ಹಾಗೂ ಗಣ್ಯರ ಜಯಂತಿಯ ರಜೆ ಕಡಿತಗೊಳಿಸಿ ರಾಜ್ಯ ಸರಕಾರ ಅಲ್ಪಸಂಖ್ಯಾತರ ತುಷ್ಟೀಕರಣಕ್ಕೆ ತೊಡಗಿದೆ ಹಾಗೂ ಹಿಂದೂ ಗಣ್ಯರ ರಜೆ ಕಡಿತದಿಂದ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದೆ ಎಂದು ಬೊಬ್ಬಿರಿಯುತ್ತಾ ಬೀದಿಗಿಳಿದು ಸರಕಾರಿ ಆಸ್ತಿ ನಾಶ ಮಾಡಿ ತಮ್ಮ ರೋಷ ತೋರಿಸದೆ ಬಿಡುತ್ತಿರಲಿಲ್ಲ. ಕೇರಳದಲ್ಲಿ ಓಣಂ ಹಬ್ಬವನ್ನು ಎಲ್ಲಾ ಮಲೆಯಾಳಿಗಳು ಬಲೀಂದ್ರನ ಮರಳುವಿಕೆಯ ದಿನವಾಗಿ ಆಚರಿಸಿದರೆ ಬಿಜೆಪಿ ಮತ್ತು ಆರೆಸ್ಸೆಸ್ಸಿನವರು ಓಣಂ ಹಬ್ಬವನ್ನು ‘ವಾಮನ ಜನ್ಮ ದಿನ’ವಾಗಿ ಆಚರಿಸಬೇಕು ಎಂದು ಕಿರುಚಾಡಿದ್ದು ಜನರಿಗೆ ನೆನಪಿದೆ. ಉತ್ತರ ಭಾರತದ ಬಿಜೆಪಿ ಆಡಳಿತದ ಕೆಲವು ರಾಜ್ಯಗಳಲ್ಲಿ ಪರಶುರಾಮ ಜಯಂತಿಯನ್ನೂ ಆಚರಿಸಲಾಗುತ್ತದೆ. ಗೋವನ್ನು ರಾಜಕೀಯ ಲಾಭಕ್ಕೆ ಬಳಸಿರುವ ಬಿಜೆಪಿ ಸದ್ಯದಲ್ಲಿಯೇ ಆ ರಾಜ್ಯಗಳಲ್ಲಿ ‘‘ಕಾಮಧೇನು ಜನ್ಮದಿನ’’ ಎಂದು ಒಂದು ಹೊಸ ರಜೆ ಘೋಷಿಸಿದರೆ ಆಶ್ಚರ್ಯವಿಲ್ಲ.

share
-ಕೇಶವರಾಮ ಅಡಪ, ಕಿನ್ನಿಗೋಳಿ
-ಕೇಶವರಾಮ ಅಡಪ, ಕಿನ್ನಿಗೋಳಿ
Next Story
X