Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಲಹಾಬಾದ್ ನಲ್ಲೊಂದು “ಅವಿವಾಹಿತ ಯುವಕರ...

ಅಲಹಾಬಾದ್ ನಲ್ಲೊಂದು “ಅವಿವಾಹಿತ ಯುವಕರ ಗ್ರಾಮ”!

ವಾರ್ತಾಭಾರತಿವಾರ್ತಾಭಾರತಿ17 May 2017 6:48 PM IST
share
ಅಲಹಾಬಾದ್ ನಲ್ಲೊಂದು “ಅವಿವಾಹಿತ ಯುವಕರ ಗ್ರಾಮ”!

ಅಲಹಾಬಾದ್, ಮೇ 17: ಇಲ್ಲಿನ ಬಾರಾ ತೆಹ್ಸಿಲ್ ನ ಶ್ರೀ ತಾರಾ ಮಜ್ರಾ ಎನ್ನುವ ಗ್ರಾಮ “ಅವಿವಾಹಿತರ ಗ್ರಾಮ” ಎಂದೇ ಕುಖ್ಯಾತಿ ಗಳಿಸಿದೆ. ಈ ಗ್ರಾಮದ ಯುವಕರನ್ನು ಮದುವೆಯಾಗಲು ಯಾವ ಯುವತಿಯೂ ಮುಂದಾಗುವುದಿಲ್ಲ. ಕೇವಲ ಈ ಗ್ರಾಮ ಮಾತ್ರವಲ್ಲದೆ ಸಮೀಪದ ಪ್ರತಾಪಗಢ, ಕೌಶಾಂಭಿ ಹಾಗೂ ಚಿತ್ರಕೂಟದ ಯುವತಿಯರೂ ಮಜ್ರಾ ಗ್ರಾಮದ ಯುವಕರನ್ನು ಮದುವೆಯಾಗುವುದಕ್ಕೆ ಒಪ್ಪುವುದಿಲ್ಲ. ಇದಕ್ಕೆ ಕಾರಣ ಯುವಕರ ಸಮಸ್ಯೆಯಲ್ಲ. ಬದಲಾಗಿ, ಈ ಗ್ರಾಮದಲ್ಲಿ ವಿದ್ಯುತ್, ನೀರು ಸೇರಿದಂತೆ ಮೂಲಭೂತ ಸೌಕರ್ಯಗಳ ಕೊರತೆ.

ಬಾರಾ ತೆಹ್ಸಿಲ್ ನಿಂದ 5 ಕಿ.ಮೀ. ದೂರದಲ್ಲಿರುವ ತಾರಾ ಮಜ್ರಾ ಗ್ರಾಮದಲ್ಲಿ ಸುಮಾರು 1,000 ಮಂದಿ ವಾಸಿಸುತ್ತಿದ್ದಾರೆ. ಆದರೆ ನೀರು, ವಿದ್ಯುತ್ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯಗಳಿಂದ ಈ ಗ್ರಾಮ ವಂಚಿತವಾಗಿದೆ. ದೇಶ ಸ್ವಾತಂತ್ರ್ಯಗೊಂಡ ನಂತರದಿಂದಲೂ ಈ ಗ್ರಾಮಸ್ಥರು ಮೂಲಭೂತ ಸೌಕರ್ಯಗಳ ತಮ್ಮ ಗ್ರಾಮಕ್ಕೆ ತಲುಪಲಿದೆ ಎನ್ನುವ ನಿರೀಕ್ಷೆಯಲ್ಲೇ ಇದ್ದಾರೆ.

ಗ್ರಾಮಕ್ಕೆ ಒಂದೇ ಕೈಪಂಪ್ ಇದ್ದು, ಅದನ್ನೂ ಗ್ರಾಮಸ್ಥರೇ ಹಣ ಹಾಕಿ 2002ರಲ್ಲಿ ನಿರ್ಮಿಸಿದ್ದರು. ಗ್ರಾಮದಲ್ಲೊಂದು ಬಾವಿಯಿದ್ದು, ಅದರ ನೀರೂ ಕುಡಿಯಲು ಯೋಗ್ಯವಲ್ಲದ ಕಾರಣ, ಈ ಕೈಪಂಪ್ ಬಿಟ್ಟರೆ ಗ್ರಾಮಸ್ಥರಿಗೆ ಬೇರೆ ಕುಡಿಯುವ ನೀರಿನ ಮೂಲವಿಲ್ಲ.

ಮೂಲಭೂತ ಸೌಕರ್ಯಗಳಿಲ್ಲದ ಈ ಗ್ರಾಮಕ್ಕೆ ಮದುವೆಯಾಗಿ ಬರಲು ಯಾವ ಯುವತಿಯರೂ ಒಪ್ಪದ ಕಾರಣ ಯುವಕರಿಗೆ ವಧು ಅನ್ವೇಷಣೆಯೇ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ವರದಕ್ಷಿಣೆ ರೂಪದಲ್ಲಿ ಕೆಲ ವಿವಾಹಿತರಿಗೆ ನೀಡಲಾದ ಟಿವಿ, ಫ್ರಿಜ್, ಫ್ಯಾನ್ ಹಾಗೂ ಕೂಲರ್ ಗಳು ಧೂಳು ತಿನ್ನುತ್ತಾ ಮೂಲೆಯಲ್ಲಿ ಬಿದ್ದಿದೆ. ಅನೇಕ ಮಂದಿ ಈ ಗ್ರಾಮವನ್ನು ಇದೀಗಾಗಲೇ ತೊರೆದಿದ್ದು, ಸದ್ಯ ಇಲ್ಲಿರುವವರೂ ಕೂಡ ತೊರೆಯುವ ಆಲೋಚನೆಯಲ್ಲಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X