Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸಾರ್ವಜನಿಕ ಉದ್ಯಮ ಖಾಸಗೀಕರಣ ಖಂಡಿಸಿ ಮೇ...

ಸಾರ್ವಜನಿಕ ಉದ್ಯಮ ಖಾಸಗೀಕರಣ ಖಂಡಿಸಿ ಮೇ 30 ರಂದು ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ17 May 2017 7:44 PM IST
share

ಬೆಂಗಳೂರು, ಮೇ 17: ಸಾರ್ವಜನಿಕ ವಲಯವನ್ನು ಖಾಸಗೀಕರಣ ಮಾಡಲು ಮುಂದಾಗಿರುವ ಕೇಂದ್ರ ಸರಕಾರ ಕ್ರಮವನ್ನು ಖಂಡಿಸಿ ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ವತಿಯಿಂದ ಮೇ 30 ರಂದು ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದೆ.

ದೇಶದಲ್ಲಿ ಸಾರ್ವಜನಿಕ ಉದ್ಯಮಗಳಿಂದ ವಾರ್ಷಿಕ ಸಾವಿರಾರು ಕೋಟಿ ರೂ.ಗಳಷ್ಟು ಆದಾಯ ಪಡೆಯುತ್ತಿದ್ದರೂ, ಕೇಂದ್ರ ಸರಕಾರ ಇದನ್ನು ಖಾಸಗೀಕರಣ ಮಾಡಲು ಮುಂದಾಗಿದೆ. ಈಗಾಗಲೇ ಯುಪಿಎ ಸರಕಾರದ ಆಡಳಿತದಲ್ಲಿ ಶೇ 49.5ರಷ್ಟು ಸಾರ್ವಜನಿಕ ಉದ್ಯಮದ ಷೇರನ್ನು ಖಾಸಗಿಯವರಿಗೆ ನೀಡಲಾಗಿದೆ. ಇದೀಗ ಮೋದಿ ಸರಕಾರ ಮೇ ಆರಂಭದಿಂದ ಶೇ.26 ರಷ್ಟು ಷೇರನ್ನು ಖಾಸಗಿಯವರಿಗೆ ವಹಿಸಲು ಮುಂದಾಗಿದ್ದು, ಒಟ್ಟಾರೆಯಾಗಿ ಶೇ.72 ರಷ್ಟು ಸಾರ್ವಜನಿಕ ಕ್ಷೇತ್ರವನ್ನು ಖಾಸಗೀಕರಣ ಮಾಡಲು ಮುಂದಾಗಿದ್ದಾರೆ ಎಂದು ಸಿಐಟಿಯು ಅಧ್ಯಕ್ಷೆ ಎಸ್.ವರಲಕ್ಷ್ಮಿ ತಿಳಿಸಿದರು.
 
ರಾಜ್ಯದ ಮೂರು ಬಿಇಎಂಎಲ್ ಘಟಕಗಳು ಸೇರಿದಂತೆ ದೇಶದ 4 ಉತ್ಪಾದನಾ ಘಟಕಗಳನ್ನು ರಕ್ಷಣಾ ಸಚಿವಾಲಯದಡಿಯಲ್ಲಿ 1964 ರಲ್ಲಿ ಆರಂಭಿಸಲಾಯಿತು. ಅಂದಿನಿಂದ ಸಂಸ್ಥೆಯು ರಕ್ಷಣಾ ಪಡೆಗಳಿಗೆ ಬೃಹತ್ ಟ್ರಕ್ಕುಗಳು, ಗಣಿಗಾರಿಕೆ ಅಗತ್ಯವಿರುವ ಬೃಹತ್ ಯಂತ್ರೋಪಕರಣಗಳು, ಭಾರತೀಯ ರೈಲ್ವೆಗೆ ಅಗತ್ಯವಿರುವ ರೈಲು ಬೋಗಿಗಳು, ಮೆಟ್ರೋ ಕೋಚ್‌ಗಳನ್ನು ನಿರ್ಮಿಸಿ ಕೊಟ್ಟಿದೆ. ಬೆಮೆಲ್‌ನಿಂದ ದೇಶಕ್ಕೆ ಅಗತ್ಯವಾದ ಯಂತ್ರೋಪಕರಣಗಳನ್ನು ತಯಾರಿಸಿ ಕೊಟ್ಟು, ಆಮದು ಮಾಡಿಕೊಳ್ಳುವ ಹಂಗಿನಿಂದ ಪಾರು ಮಾಡಿದೆ. ಆದರೆ, ಇದೀಗ ಈ ಸಂಸ್ಥೆಯನ್ನು ಖಾಸಗಿಯವರಿಗೆ ಒಪ್ಪಿಸಲು ಮುಂದಾಗಿದ್ದಾರೆ ಎಂದು ಅವರು ಆರೋಪಿಸಿದರು. 


ಸಾರ್ವಜನಿಕ ಉದ್ಯಮದ ಖಾಸಗೀಕರಣವನ್ನು ರಾಜ್ಯ ಸರಕಾರ ಖಂಡಿಸಿ ಅಧಿಸೂಚನೆ ಹೊರಡಿಸಬೇಕು ಎಂದು ಆಗ್ರಹಿಸಿದ ಅವರು, ಕೇವಲ 250 ಕಾರ್ಮಿಕರನ್ನು ಹೊಂದಿರುವ ಕೇರಳ ಸರಕಾರ ಖಾಸಗೀಕರಣವನ್ನು ವಿರೋಧಿಸಿ ಅಧಿಸೂಚನೆ ಹೊರಡಿಸಿದೆ. ಅದೇ ರೀತಿ ತಮಿಳುನಾಡು ಸೇರಿದಂತೆ ಹಲವು ರಾಜ್ಯ ಸರಕಾಗಳು ಕೇಂದ್ರ ಸರಕಾರದ ನಿರ್ಧಾರವನ್ನು ವಿರೋಧಿಸಿವೆ. 50-60 ಸಾವಿರ ಕಾರ್ಮಿಕರಿರುವ ರಾಜ್ಯದಲ್ಲಿ ಕೇಂದ್ರ ಸರಕಾರದ ಆದೇಶವನ್ನು ವಿರೋಧಿಸಲು ಮುಂದಾಗುತ್ತಿಲ್ಲ ಎಂದು ಅವರು ಕಿಡಿಕಾರಿದರು.

ಕೇಂದ್ರ ಸರಕಾರದ ನಿರ್ಧಾರವನ್ನು ಖಂಡಿಸಿ ಮೇ 30 ರಂದು ಬೆಂಗಳೂರು, ಮೈಸೂರು, ಕೆಜಿಎಫ್ ಮತ್ತು ಶಿವಮೊಗ್ಗದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು. ಸರಕಾರ ಮುಂದಿನ ದಿನಗಳಲ್ಲಿ ನಿರ್ಧಾರ ಬದಲಿಸಲಿಲ್ಲ ಎಂದಾದರೆ ಕರ್ನಾಟಕ ಬಂದ್‌ಗೆ ಮುಂದಾಗಬೇಕಾಗುತ್ತದೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಎಐಟಿಯುಸಿ ಮುಖಂಡ ಅನಂತ ಸುಬ್ಬಾರಾವ್, ಐಎನ್‌ಟಿಯುಸಿ ಮುಖಂಡ ಕೆ.ಪುಟ್ಟಸ್ವಾಮಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X