Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಪುಣೆ ತಂಡದ ಯಶಸ್ಸಿನ ರೂವಾರಿ ಮನೋಜ್...

ಪುಣೆ ತಂಡದ ಯಶಸ್ಸಿನ ರೂವಾರಿ ಮನೋಜ್ ತಿವಾರಿ

ವಾರ್ತಾಭಾರತಿವಾರ್ತಾಭಾರತಿ17 May 2017 11:39 PM IST
share
ಪುಣೆ ತಂಡದ ಯಶಸ್ಸಿನ ರೂವಾರಿ ಮನೋಜ್ ತಿವಾರಿ

 ಮುಂಬೈ, ಮೇ 17: ಬಂಗಾಳದ ಬ್ಯಾಟ್ಸ್‌ಮನ್ ಮನೋಜ್ ತಿವಾರಿಗೆ 2017ನೆ ವರ್ಷ ಅದೃಷ್ಟದಾಯಕವಾಗಿದೆ. ಫೆಬ್ರವರಿಯಲ್ಲಿ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದಿದ್ದ ಸೈಯದ್ ಮುಶ್ತಾಕ್ ಅಲಿ ಟ್ವೆಂಟಿ-20 ಫೈನಲ್‌ನಲ್ಲಿ ತಿವಾರಿ ನಾಯಕತ್ವದ ಉತ್ತರ ವಲಯ ತಂಡ ಪ್ರಶಸ್ತಿ ಜಯಿಸಿತ್ತು. ಕಳೆದ ವರ್ಷ ಗಾಯಗೊಂಡಿದ್ದ ಕಾರಣ ಐಪಿಎಲ್ ಟೂರ್ನಿಯಲ್ಲಿ ಆಡಿರಲಿಲ್ಲ. ಈ ವರ್ಷ ನಡೆದ ಐಪಿಎಲ್ ಆಟಗಾರರ ಹರಾಜಿನಲ್ಲಿ 50 ಲಕ್ಷ ರೂ. ಮೂಲಬೆಲೆ ಹೊಂದಿದ್ದ ತಿವಾರಿಯನ್ನು ಮೂರನೆ ಸುತ್ತಿನಲ್ಲಿ ಪುಣೆ ತಂಡ ಖರೀದಿಸಿತ್ತು.

ಮುಂಬೈ ಇಂಡಿಯನ್ಸ್ ವಿರುದ್ಧ ಮಂಗಳವಾರ ನಡೆದಿದ್ದ ಕ್ವಾಲಿಫೈಯರ್-1 ಪಂದ್ಯದಲ್ಲಿ ಪುಣೆ ತಂಡ 20 ರನ್ ಗಳಿಂದ ಜಯ ಸಾಧಿಸಲು ಪ್ರಮುಖ ಪಾತ್ರವಹಿಸಿರುವ ತಿವಾರಿ 12 ಇನಿಂಗ್ಸ್‌ಗಳಲ್ಲಿ ಒಟ್ಟು 317 ರನ್ ಗಳಿಸಿದ್ದಾರೆ. ಮುಂಬೈ ವಿರುದ್ಧದ ಪಂದ್ಯದಲ್ಲಿ ಪುಣೆ ತಂಡ 9 ರನ್‌ಗೆ 2 ವಿಕೆಟ್ ಕಳೆದುಕೊಂಡಿದ್ದಾಗ ಕ್ರೀಸ್‌ಗೆ ಇಳಿದಿದ್ದ ತಿವಾರಿ 58 ರನ್ ಗಳಿಸಿದ್ದಲ್ಲದೆ ಆರಂಭಿಕ ಆಟಗಾರ ಅಜಿಂಕ್ಯ ರಹಾನೆಯೊಂದಿಗೆ 3ನೆ ವಿಕೆಟ್‌ಗೆ 80 ರನ್ ಜೊತೆಯಾಟ ನಡೆಸಿ ತಂಡವನ್ನು ಆಧರಿಸಿದ್ದರು.

ಬಂಗಾಳ ಕ್ರಿಕೆಟ್ ವಲಯದಲ್ಲಿ ‘ಚೋಟಾ ದಾದಾ’ ಎಂದೇ ಖ್ಯಾತಿ ಪಡೆದಿರುವ ಮನೋಜ್ ತಿವಾರಿ 10 ವರ್ಷಗಳ ಹಿಂದೆ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದಿದ್ದ ಮುಂಬೈ ವಿರುದ್ಧದ ರಣಜಿ ಟ್ರೋಫಿ ಫೈನಲ್‌ನಲ್ಲಿ ಸೌರವ್ ಗಂಗುಲಿ ಜೊತೆಗೂಡಿ ಬಂಗಾಳಕ್ಕೆ ಮಹತ್ವದ ಗೆಲುವು ತಂದುಕೊಟ್ಟಿದ್ದರು. ಮೊದಲ ಇನಿಂಗ್ಸ್‌ನಲ್ಲಿ 42 ಹಾಗೂ ಎರಡನೆ ಇನಿಂಗ್ಸ್‌ನಲ್ಲಿ 94 ರನ್ ಗಳಿಸಿದ್ದ ತಿವಾರಿ ಆಯ್ಕೆಗಾರರ ಗಮನ ಸೆಳೆಯಲು ಯಶಸ್ವಿಯಾಗಿದ್ದರು.

ಬಾಂಗ್ಲಾದೇಶ ವಿರುದ್ಧ ಬಾಂಗ್ಲಾದಲ್ಲಿ ನಡೆದಿದ್ದ ಏಕದಿನ ಸರಣಿಗೆ ಆಯ್ಕೆಯಾಗಿದ್ದ ತಿವಾರಿ ನೆಟ್ ಪ್ರಾಕ್ಟೀಸ್‌ನ ವೇಳೆಯೇ ಗಾಯಗೊಂಡು ಚೊಚ್ಚಲ ಪಂದ್ಯ ಆಡುವುದರಿಂದ ವಂಚಿತರಾಗಿದ್ದರು. ತಿವಾರಿ 2008ರಲ್ಲಿ ಆಸ್ಟ್ರೇಲಿಯ ಹಾಗೂ ಶ್ರೀಲಂಕಾ ವಿರುದ್ಧದ ತ್ರಿಕೋನ ಸರಣಿಗೆ ಮತ್ತೊಮ್ಮೆ ತಂಡಕ್ಕೆ ಆಯ್ಕೆಯಾಗಿದ್ದರು. ಬ್ರಿಸ್ಬೇನ್‌ಗೆ ತಲುಪಿದ ಕೆಲವೇ ಗಂಟೆಗಳಲ್ಲಿ ಆಸ್ಟ್ರೇಲಿಯ ವಿರುದ್ಧ ಚೊಚ್ಚಲ ಪಂದ್ಯವನ್ನಾಡುವ ಅವಕಾಶ ಪಡೆದಿದ್ದ ತಿವಾರಿ ಅವರು ಬ್ರೆಟ್‌ಲೀ ಯಾರ್ಕರ್‌ನ್ನು ಎದುರಿಸಲಾಗದೇ ಕ್ಲೀನ್‌ಬೌಲ್ಡ್ ಆಗಿದ್ದರು.

ಆ ಬಳಿಕ ತಿವಾರಿ ಭಾರತ ತಂಡದಲ್ಲಿ ಹೆಚ್ಚು ಅವಕಾಶ ಪಡೆಯಲಿಲ್ಲ. ಕಳೆದ 9 ವರ್ಷಗಳಲ್ಲಿ ಕೇವಲ 12 ಏಕದಿನ ಪಂದ್ಯಗಳನ್ನು ಆಡಿದ್ದಾರೆ. 2015ರ ಜುಲೈನಲ್ಲಿ ಝಿಂಬಾಬ್ವೆ ವಿರುದ್ಧ ಕೊನೆಯ ಬಾರಿ ಏಕದಿನ ಪಂದ್ಯವನ್ನಾಡಿದ್ದರು. 2011ರಲ್ಲಿ ಈಡನ್‌ಗಾರ್ಡನ್ಸ್‌ನಲ್ಲಿ ವೆಸ್ಟ್‌ಇಂಡೀಸ್‌ನ ವಿರುದ್ಧ 100 ರನ್ ಗಳಿಸಿ ತಂಡಕ್ಕೆ ಗೆಲುವು ತಂದಿದ್ದರು. ಆದರೆ ಅವರ ಈ ಇನಿಂಗ್ಸ್‌ನಲ್ಲಿ ಯಾರೂ ನೆನಪಿಟ್ಟುಕೊಂಡಿಲ್ಲ.

ಐಪಿಎಲ್‌ನಲ್ಲಿ ಡೆಲ್ಲಿ ಡೇರ್ ಡೆವಿಲ್ಸ್ ಹಾಗೂ ಕೋಲ್ಕತಾ ನೈಟ್ ರೈಡರ್ಸ್ ತಂಡವನ್ನು ಪ್ರತಿನಿಧಿಸಿರುವ ತಿವಾರಿ 2012ರಲ್ಲಿ ಚೆನ್ನೈನಲ್ಲಿ ನಡೆದ ಚೆನ್ನೈ ವಿರುದ್ಧದ ಐಪಿಎಲ್ ಫೈನಲ್‌ನಲ್ಲಿ ಕೋಲ್ಕತಾದ ಪರ ಗೆಲುವಿನ ರನ್ ದಾಖಲಿಸಿದ್ದರು. ವಾಂಖೆಡೆ ಸ್ಟೇಡಿಯಂನಲ್ಲಿ ಮಂಗಳವಾರ ನಡೆದ ಐಪಿಎಲ್ ಕ್ವಾಲಿಫೈಯರ್-1ರಲ್ಲಿ ತಿವಾರಿ ತನ್ನ ಸಾಮರ್ಥ್ಯವನ್ನು ಮತ್ತೊಮ್ಮೆ ತೋರಿಸಿದ್ದಾರೆ.

ರೌಂಡ್‌ರಾಬಿನ್ ಲೀಗ್ ಹಂತದಲ್ಲಿ ಮುಂಬೈ ವಿರುದ್ಧ 13 ಎಸೆತಗಳಲ್ಲಿ 22 ರನ್ ಗಳಿಸಿದ್ದ ತಿವಾರಿ ಬೆಂಗಳೂರಿನಲ್ಲಿ ನಡೆದಿದ್ದ ಆರ್‌ಸಿಬಿ ವಿರುದ್ಧದ ಪಂದ್ಯದಲ್ಲಿ 11 ಎಸೆತಗಳಲ್ಲಿ 27 ರನ್ ಗಳಿಸಿದ್ದರು. ಮೊದಲ ನಾಲ್ಕು ಪಂದ್ಯಗಳಲ್ಲಿ 3ರಲ್ಲಿ ಸೋತಿದ್ದ ಪುಣೆ ತಂಡ ಗೆಲುವಿನ ಹಳಿಗೆ ಮರಳಲು ನೆರವಾಗಿದ್ದರು. ಆರ್‌ಸಿಬಿ ವಿರುದ್ಧದ ಪಂದ್ಯದ ಬಳಿಕ ಪುಣೆ ಕಳೆದ 11 ಪಂದ್ಯಗಳಲ್ಲಿ 9ರಲ್ಲಿ ಜಯ ಸಾಧಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X