Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಶರಪೋವಾಗೆ ಫ್ರೆಂಚ್ ಓಪನ್...

ಶರಪೋವಾಗೆ ಫ್ರೆಂಚ್ ಓಪನ್ ವೈರ್ಲ್ಡ್‌ಕಾರ್ಡ್ ನಿರಾಕರಣೆ

ವಾರ್ತಾಭಾರತಿವಾರ್ತಾಭಾರತಿ17 May 2017 11:58 PM IST
share
ಶರಪೋವಾಗೆ ಫ್ರೆಂಚ್ ಓಪನ್ ವೈರ್ಲ್ಡ್‌ಕಾರ್ಡ್ ನಿರಾಕರಣೆ

ಪ್ಯಾರಿಸ್, ಮೇ 17: ಫ್ರೆಂಚ್ ಟೆನಿಸ್ ಫೆಡರೇಶನ್ ಎರಡು ಬಾರಿಯ ಚಾಂಪಿಯನ್ ಮರಿಯಾ ಶರಪೋವಾಗೆ ವೈರ್ಲ್ಡ್‌ಕಾರ್ಡ್ ನಿರಾಕರಿಸಿದ ಹಿನ್ನೆಲೆಯಲ್ಲಿ ಈ ವರ್ಷದ ಫ್ರೆಂಚ್ ಓಪನ್‌ನಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಎಫ್‌ಎಫ್‌ಟಿ ಅಧ್ಯಕ್ಷ ಬೆರ್ನಾರ್ಡ್ ತಿಳಿಸಿದ್ದಾರೆ.

  ‘‘ವಿಶ್ವದ ಮಾಜಿ ನಂ.1 ಆಟಗಾರ್ತಿ ಶರಪೋವಾ 15 ತಿಂಗಳ ಡೋಪಿಂಗ್ ನಿಷೇಧದ ಶಿಕ್ಷೆಯನ್ನು ಪೂರೈಸಿ ಕಳೆದ ತಿಂಗಳಷ್ಟೇ ಸಕ್ರಿಯ ಟೆನಿಸ್‌ಗೆ ವಾಪಸಾಗಿದ್ದಾರೆ. ಅವರು ಸತತ ಎರಡನೆ ಬಾರಿ ಫ್ರೆಂಚ್ ಓಪನ್‌ನಿಂದ ವಂಚಿತರಾಗಲಿದ್ದಾರೆ. 2012 ಹಾಗೂ 2014ರಲ್ಲಿ ಚಾಂಪಿಯನ್ ಆಗಿರುವ ಶರಪೋವಾರ ಸಾಧನೆಯನ್ನು ಯಾರೂ ಕಡೆಗಣಿಸುವಂತಿಲ್ಲ. ಆದರೆ, ಅವರಿಗೆ ವೈರ್ಲ್ಡ್‌ಕಾರ್ಡ್ ನೀಡಲು ಸಾಧ್ಯವಿಲ್ಲ. ಗಾಯದಿಂದ ಚೇತರಿಸಿಕೊಂಡು ವಾಪಸಾಗುವ ಆಟಗಾರರಿಗೆ ವೈರ್ಲ್ಡ್‌ಕಾರ್ಡ್ ನೀಡಲಾಗುತ್ತದೆ. ಡೋಪಿಂಗ್ ಬ್ಯಾನ್‌ನಿಂದ ಮರಳಿದವರಿಗೆ ಅದನ್ನು ನೀಡಲಾಗುವುದಿಲ್ಲ’’ ಎಂದು ಬೆರ್ನಾರ್ಡ್ ತಿಳಿಸಿದ್ದಾರೆ.

ಐದು ಬಾರಿಯ ಗ್ರಾನ್‌ಸ್ಲಾಮ್ ಚಾಂಪಿಯನ್ ಶರಪೋವಾಗೆ ನಿಷೇಧಿತ ಉದ್ದೀಪನಾ ದ್ರವ್ಯ ಮೆಲ್ಡೋನಿಯಂ ಸ್ವೀಕರಿಸಿದ್ದಕ್ಕಾಗಿ ಅಂತಾರಾಷ್ಟ್ರೀಯ ಟೆನಿಸ್ ಸಂಸ್ಥೆ ಎರಡು ವರ್ಷ ನಿಷೇಧ ಹೇರಿತ್ತು. ಕ್ರೀಡಾ ವ್ಯಾಜ್ಯ ಇತ್ಯರ್ಥ ನ್ಯಾಯಾಲಯ ನಿಷೇಧದ ಅವಧಿಯನ್ನು 15 ತಿಂಗಳಿಗೆ ಕಡಿತಗೊಳಿಸಿತ್ತು. ಎ.26 ರಂದು ನಿಷೇಧದ ಅವಧಿ ಕೊನೆಗೊಂಡ ಬಳಿಕ ರಶ್ಯದ ಆಟಗಾರ್ತಿ ಶರಪೋವಾ ಸ್ಟಟ್‌ಗರ್ಟ್ ಓಪನ್‌ನಲ್ಲಿ ಸ್ಪರ್ಧಿಸಿದ್ದರು. ಆ ಟೂರ್ನಿಯಲ್ಲಿ ಸೆಮಿ ಫೈನಲ್‌ಗೆ ತಲುಪಿದ್ದರು. ಮ್ಯಾಡ್ರಿಡ್ ಓಪನ್‌ನಲ್ಲಿ ಅಂತಿಮ 32ರ ಸುತ್ತಿಗೆ ತೇರ್ಗಡೆಯಾಗಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X