Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆರೆಸ್ಸೆಸ್ಸಿಗರ ದಾಳಿಯನ್ನು ಸಿಪಿಎಂ...

ಆರೆಸ್ಸೆಸ್ಸಿಗರ ದಾಳಿಯನ್ನು ಸಿಪಿಎಂ ತಲೆಗೆ ಕಟ್ಟಿದ ಫೇಕ್ ಟ್ವೀಟ್: ಸಂಸದ ರಾಜೀವ್ ಚಂದ್ರಶೇಖರ್ ವಿರುದ್ಧ ದೂರು ದಾಖಲು

ವಾರ್ತಾಭಾರತಿವಾರ್ತಾಭಾರತಿ18 May 2017 9:46 AM IST
share
ಆರೆಸ್ಸೆಸ್ಸಿಗರ ದಾಳಿಯನ್ನು ಸಿಪಿಎಂ ತಲೆಗೆ ಕಟ್ಟಿದ ಫೇಕ್ ಟ್ವೀಟ್: ಸಂಸದ ರಾಜೀವ್ ಚಂದ್ರಶೇಖರ್ ವಿರುದ್ಧ ದೂರು ದಾಖಲು

ಹೊಸದಿಲ್ಲಿ, ಮೇ 18: ಕಣ್ಣೂರಿನಲ್ಲಿ ಆರೆಸ್ಸೆಸ್ ಕಾರ್ಯಕರ್ತರು ಆ್ಯಂಬುಲೆನ್ಸ್ ಒಂದರ ಮೇಲೆ ನಡೆಸಿದ ದಾಳಿಯನ್ನು ಸಿಪಿಎಂ ಕಾರ್ಯಕರ್ತರು ನಡೆಸಿದ ದಾಳಿಯೆಂದು ಹೇಳುವ ಫೇಕ್ ಟ್ವೀಟೊಂದನ್ನು ರಿಟ್ವೀಟ್ ಮಾಡಿದ ರಾಜ್ಯಸಭಾ ಸದಸ್ಯ ಹಾಗೂ ರಿಪಬ್ಲಿಕ್ ಟಿವಿ ಮತ್ತು ಏಷ್ಯಾನೆಟ್ ನ್ಯೂಸ್ ಮಾಲಕ ರಾಜೀವ್ ಚಂದ್ರಶೇಖರ್ ತೊಂದರೆಯಲ್ಲಿ ಸಿಲುಕಿದ್ದಾರೆ. ಇದೀಗ ಅವರ ವಿರುದ್ಧ ಐಪಿಸಿ ಸೆಕ್ಷನ್ 153(ಎ) ಅನ್ವಯ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಪೊಲೀಸ್ ದೂರು ದಾಖಲಿಸಲಾಗಿದೆ.

ಅವರು ರಿಟ್ವೀಟ್ ಮಾಡಿದ ಮೂಲ ಟ್ವೀಟನ್ನು ಜಯಕೃಷ್ಣನ್ @ಸಾವರ್ಕರ್5200 ಎಂಬವರು ಮೇ 13ರಂದು ಮಾಡಿದ್ದರು. ಆ್ಯಂಬುಲೆನ್ಸ್ ಒಂದು ಮಾರ್ಕ್ಸಿಸ್ಟರಿಂದ ದಾಳಿಗೀಡಾಗಿದ್ದು, ಅದರಲ್ಲಿ ಹತ್ಯೆಗೀಡಾಗಿದ್ದ ಆರೆಸ್ಸೆಸ್ ಕಾರ್ಯಕರ್ತ ಬಿಜು ಅವರ ಮೃತದೇಹ ಕೊಂಡೊಯ್ಯಲಾಗುತ್ತಿತ್ತು ಎಂದು ಅವರ ಟ್ವೀಟ್ ಹೇಳಿತ್ತು. ಈ ಟ್ವೀಟನ್ನು ರಾಜೀವ್ ಚಂದ್ರಶೇಖರ್ ರಿಟ್ವೀಟ್ ಮಾಡಿದ್ದರು.

ಕಣ್ಣೂರಿನಲ್ಲಿ ಶನಿವಾರ ನಡೆದ ಹರತಾಳ ಸಂದರ್ಭ ಆರೆಸ್ಸೆಸ್ ಕಾರ್ಯಕರ್ತರು ಈ ಆ್ಯಂಬುಲೆನ್ಸ್ ಮೇಲೆ ದಾಳಿ ನಡೆಸಿದ್ದರೆಂಬುದು ನಂತರದ ವರದಿಗಳಿಂದ ತಿಳಿದು ಬಂದಿತು. ತೃಕ್ಕರಿಪುರದ ರೋಗಿಯೊಬ್ಬರನ್ನು ಹೊತ್ತಿದ್ದ ಈ ಆ್ಯಂಬುಲೆನ್ಸ್ ಪರಿಯಾರಂ ಮೆಡಿಕಲ್ ಕಾಲೇಜು ಆವರಣ ಪ್ರವೇಶಿಸಿದಾಕ್ಷಣ ಅದರ ಮೇಲೆ ದಾಳಿ ನಡೆದಿತ್ತು. ಆಸ್ಪತ್ರೆಯ ಲಾಬಿಯಲ್ಲಿದ್ದ ಸಿಸಿಟಿವಿ ದೃಶ್ಯಾವಳಿಗಳಿಂದ ಕಂಡುಬಂದಂತೆ ಆರೆಸ್ಸೆಸ್ ಕಾರ್ಯಕರ್ತರ ದೊಡ್ಡ ಗುಂಪೊಂದು ಆ್ಯಂಬುಲೆನ್ಸ್ ಮೇಲೆ ದಾಳಿ ನಡೆಸಿತ್ತು. ಆಸ್ಪತ್ರೆಯ ಕ್ಯಾಶುವೆಲ್ಟಿ ವಿಭಾಗ ಕೂಡ ಈ ದಾಳಿಯಲ್ಲಿ ಹಾನಿಗೊಂಡಿತ್ತು. ತದನಂತರ ಕಣ್ಣೂರಿನ ಆ್ಯಂಬುಲೆನ್ಸ್ ಚಾಲಕರು ದಾಳಿಯ ವಿರುದ್ಧ ಪ್ರತಿಭಟನೆ ನಡೆಸಿದ್ದರು.

ಈ ಸಿಸಿಟಿವಿ ದೃಶ್ಯಾವಳಿ ಅಂತರ್ಜಾಲದಲ್ಲಿ ಹರಡಿದಾಗ ಜಯಕೃಷ್ಣನ್ ಅವರ ಟ್ವೀಟ್ ಮತ್ತು ರಾಜೀವ್ ಚಂದ್ರಶೇಖರ್ ಅವರ ರಿಟ್ವೀಟ್ ಕಾಣೆಯಾಗಿತ್ತು. ಆ ಒಂದು ದಿನದ ನಂತರ ಜಯಕೃಷ್ಣನ್ ಅವರ ಟ್ವಿಟ್ಟರ್ ಖಾತೆ ಕೂಡ ಮಾಯವಾಯಿತು. ಈ ಖಾತೆಯ ಹಿಂದೆ ನಿಜವಾಗಿಯೂ ಯಾರಿದ್ದಾರೆಂದು ಇನ್ನೂ ತಿಳಿದು ಬಂದಿಲ್ಲ.

ಬುಧವಾರ ಅವರ ವಿರುದ್ಧ ಎಸ್‌ಎಫ್‌ಐ ಕಾರ್ಯಕರ್ತರೊಬ್ಬರು ದೂರು ದಾಖಲಿಸಿದ ನಂತರ ರಾಜೀವ್ ಟ್ವೀಟೊಂದನ್ನು ಮಾಡಿ ‘‘ನನ್ನನ್ನು ಬೆದರಿಸುವ ಎಡರಂಗ ಸರಕಾರದ ಯತ್ನಗಳಿಂದ ವಿನೋದವುಂಟಾಗಿದೆ. ನಾನು ಹೆದರುವುದಿಲ್ಲ,’’ ಎಂದು ಹೇಳಿದ್ದಾರೆ.

ಕೇರಳ ರಾಜ್ಯ ಬಿಜೆಪಿ ಅಧ್ಯಕ್ಷ ಕುಮ್ಮನೊಮ್ ರಾಜಶೇಖರನ್ ಅವರ ವಿರುದ್ಧವೂ ಟ್ವಿಟ್ಟರಿನಲ್ಲಿ ವಿಡಿಯೋ ಮೂಲಕ ಸುಳ್ಳು ಸುದ್ದಿ ಹರಡಿಸಿದ ಆರೋಪದ ಮೇಲೆ ಸೆಕ್ಷನ್ 153(ಎ)ಪ್ರಕರಣ ದಾಖಲಾಗಿದೆ. ಕಳೆದ ಶನಿವಾರ ಅವರು ವೀಡಿಯೋ ಒಂದನ್ನು ಪೋಸ್ಟ್ ಮಾಡಿ ‘‘ಕಣ್ಣೂರು ಕಮ್ಯುನಿಸ್ಟರು ಆರೆಸ್ಸೆಸ್ ಕಾರ್ಯಕರ್ತ ಬಿಜು ಅವರ ಹತ್ಯೆಯನ್ನು ಸಂಭ್ರಮಿಸುತ್ತಿದ್ದಾರೆ’’ ಎಂದು ಬರೆದಿದ್ದರು. ಈ ವಿಡಿಯೋವನ್ನು ಶನಿವಾರವೇ ತೆಗೆಯಲಾಗಿತ್ತೆಂಬುದಕ್ಕೆ ಪುರಾವೆಯೊದಗಿಸುವಂತೆ ಸಿಪಿಎಂ ನಾಯಕರು ಹೇಳಿದ್ದರೂ ಅವರು ಇಲ್ಲಿಯ ತನಕ ಅದನ್ನು ಒದಗಿಸಿಲ್ಲ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X