Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬೊಫೋರ್ಸ್ ಹಗರಣದ ಮೂರು ದಶಕಗಳ ಬಳಿಕ ಮೊದಲ...

ಬೊಫೋರ್ಸ್ ಹಗರಣದ ಮೂರು ದಶಕಗಳ ಬಳಿಕ ಮೊದಲ ಬಾರಿಗೆ ಫಿರಂಗಿ ಪಡೆದ ಭಾರತೀಯ ಸೇನೆ

ವಾರ್ತಾಭಾರತಿವಾರ್ತಾಭಾರತಿ18 May 2017 9:12 PM IST
share
ಬೊಫೋರ್ಸ್ ಹಗರಣದ ಮೂರು ದಶಕಗಳ ಬಳಿಕ ಮೊದಲ ಬಾರಿಗೆ ಫಿರಂಗಿ ಪಡೆದ ಭಾರತೀಯ ಸೇನೆ

ಹೊಸದಿಲ್ಲಿ,ಮೇ 18: ಬೊಫೋರ್ಸ್ ಹಗರಣದ ಮೂರು ದಶಕಗಳ ಬಳಿಕ ಗುರುವಾರ ಮೊದಲ ಬಾರಿಗೆ ಭಾರತೀಯ ಸೇನೆಯು ಅಮೆರಿಕದಿಂದ ಎರಡು ಹೊಸ ಫಿರಂಗಿ ವ್ಯವಸ್ಥೆಗಳನ್ನು ಸ್ವೀಕರಿಸಿದೆ. ಈ ಎರಡು ಎಂ-777 ಲಘು ಹೋವಿಟ್ಝರ್‌ಗಳು ಭಾರತವು 145 ಫಿರಂಗಿಗಳ ಖರೀದಿಗಾಗಿ ಅಮೆರಿಕದೊಂದಿಗೆ ಸರಕಾರಿ ಮಟ್ಟದಲ್ಲಿ ಮಾಡಿಕೊಂಡಿ ರುವ 700 ಮಿ.ಡಾ.ಒಪ್ಪಂದದ ಭಾಗವಾಗಿವೆ.
ಸೇನೆಯು ತನ್ನ ಫಿರಂಗಿ ದಳವನ್ನು ಮೇಲ್ದರ್ಜೆಗೇರಿಸಲು ಬೃಹತ್ ಯೋಜನೆ ಯೊಂದನ್ನು ಹೊಂದಿದ್ದು, 22,000 ಕೋ.ರೂ.ಗಳ ಆಧುನೀಕರಣ ಯೋಜನೆಯಡಿ ಐದು ವಿಭಿನ್ನ ಮಾದರಿಗಳ ಫಿರಂಗಿಗಳ ಖರೀದಿ ಪ್ರಕ್ರಿಯೆಯಲ್ಲಿ ತೊಡಗಿಕೊಂಡಿದೆ. ಇಂದು ಬಂದಿರುವ ಎರಡು ಫಿರಂಗಿಗಳನ್ನು ಎತ್ತರದ ಪ್ರದೇಶಗಳಲ್ಲಿ ಚೀನಾದ ವಿರುದ್ಧ ರಕ್ಷಣಾ ವ್ಯವಸ್ಥೆಯನ್ನು ಬಲಗೊಳಿಸಲು ಬಳಸಲಾಗುವುದು. 155 ಮಿ.ಮೀ., 39-ಕ್ಯಾಲಿಬರ್‌ನ ಈ ಫಿರಂಗಿಗಳು ಗರಿಷ್ಠ 30 ಕಿ.ಮೀ.ದಾಳಿಯ ವ್ಯಾಪ್ತಿಯನ್ನು ಹೊಂದಿವೆ.
ಭಾರತವು ತಯಾರಕ ಬಿಎಇ ಸಿಸ್ಟಮ್ಸ್‌ನಿಂದ ನೇರವಾಗಿ 25 ಎಂ-777ಗಳನ್ನು ಆಮದು ಮಾಡಿಕೊಳ್ಳಲಿದ್ದು, ಉಳಿದ ಫಿರಂಗಿಗಳನ್ನು ಮಹಿಂದ್ರಾ ಡಿಫೆನ್ಸ್ ಸಿಸ್ಟಮ್ಸ್‌ನ ಸಹಭಾಗಿತ್ವದಲ್ಲಿ ದೇಶದಲ್ಲಿಯೇ ಜೋಡಣೆ ಮಾಡಲಾಗುತ್ತದೆ.
 ಭಾರತವು 1980ರ ದಶಕದಲ್ಲಿ ಕೊನೆಯ ಬಾರಿಗೆ ಫಿರಂಗಿಗಳನ್ನು ಆಮದು ಮಾಡಿಕೊಂಡಿತ್ತು. ಸ್ವೀಡನ್ನಿನಿಂದ ಬೊಫೋರ್ಸ್ ಗನ್‌ಗಳನ್ನು ಆಮದು ಮಾಡಿಕೊಂಡಿದ್ದ 1.4 ಶತಕೋಟಿ ಡಾ.ಗಳ ವ್ಯವಹಾರವು ಸ್ವೀಡಿಷ್ ಕಂಪನಿಯು ಉನ್ನತ ಭಾರತೀಯ ರಾಜಕಾರಣಿಗಳಿಗೆ 64 ಕೋ.ರೂ.ಗಳನ್ನು ಲಂಚವಾಗಿ ನೀಡಿತ್ತು ಎಂಬ ವರದಿಯ ಬಳಿಕ ವಿವಾದದ ಸುಳಿಯಲ್ಲಿ ಸಿಲುಕಿತ್ತು. ಅದು ಆಗಿನ ಪ್ರಧಾನಿ ರಾಜೀವ ಗಾಂಧಿಯವರನ್ನು ಮುಂದಿನ ಚುನಾವಣೆಯಲ್ಲಿ ಅಧಿಕಾರಕ್ಕೆ ಮರಳುವ ಅವಕಾಶದಿಂದ ವಂಚಿತರನ್ನಾಗಿಸಿತ್ತು. ಅಲ್ಲದೇ ರಕ್ಷಣಾ ಖರೀದಿಯ ಪ್ರಕ್ರಿಯೆಯನ್ನೂ ಗಣನೀಯವಾಗಿ ನಿಧಾನಗೊಳಿಸಿತ್ತು.
ಇತ್ತೀಚಿನ ದಿನಗಳಲ್ಲಿ ಭಾರತೀಯ ಸೇನೆಗಾಗಿ ಆಧುನಿಕ ಫಿರಂಗಿಗಳ ಖರೀದಿ ಪ್ರಕ್ರಿಯೆಯನ್ನು ತ್ವರಿತಗೊಳಿಸುವ ಪ್ರಯತ್ನಗಳು ನಡೆಯುತ್ತಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X