Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬೆಳ್ತಂಗಡಿ: ಸಮಾಲೋಚನಾ ಸಭೆ, 'ಸ್ವಚ್ಛತಾ...

ಬೆಳ್ತಂಗಡಿ: ಸಮಾಲೋಚನಾ ಸಭೆ, 'ಸ್ವಚ್ಛತಾ ನೀತಿ 2017'- ಮಾಹಿತಿ ಶಿಬಿರ

ವಾರ್ತಾಭಾರತಿವಾರ್ತಾಭಾರತಿ18 May 2017 10:10 PM IST
share
ಬೆಳ್ತಂಗಡಿ: ಸಮಾಲೋಚನಾ ಸಭೆ, ಸ್ವಚ್ಛತಾ ನೀತಿ 2017- ಮಾಹಿತಿ ಶಿಬಿರ

ಬೆಳ್ತಂಗಡಿ, ಮೇ 18: ಜಿಪಂ ಮಂಗಳೂರು, ನೆರಿಯ ಗ್ರಾಪಂ ಸಹಭಾಗಿತ್ವದಲ್ಲಿ ನಡೆದ ಅಭಿವೃದ್ಧಿ ಕಾರ್ಯಕ್ರಮಗಳ ಸಮಾ ಲೋಚನಾ ಸಭೆ ಮತ್ತು ಸ್ವಚ್ಛತಾ ನೀತಿ 2017 ಮಾಹಿತಿ ಶಿಬಿರದಲ್ಲಿ ದ.ಕ. ಜಿ.ಪಂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ ಎಂ. ಆರ್. ರವಿ ಭಾಗವಹಿಸಿ, ಸ್ಥಳೀಯರ ಅಹವಾಲುಗಳನ್ನು ಸ್ವೀಕರಿಸಿ, ವಿವಿಧ ಇಲಾಖಾ ಅಭಿವೃದ್ಧಿ ಅನುದಾನಗಳ ಕಾಮಗಾರಿಗಳ ಶೀಘ್ರವಾಗಿ ನಡೆಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಗುರುವಾರ ಸೂಚನೆ ನೀಡಿದರು.

ಮೂಲಭೂತ ಸೌಕರ್ಯ ವಂಚಿತ ಬಾಂಜಾರು ಮಲೆಯಲ್ಲಿ ವಿವಿಧ ಇಲಾಖಾ ಅನುದಾನಗಳ ಅಭಿವೃದ್ದಿ ಸಮಾಲೋಚನಾ ಸಭೆಯಲ್ಲಿ ಸ್ಥಳೀಯರ ಬೇಡಿಕೆಯನ್ನು ಆಲಿಸಿದರು. ಆದಿವಾಸಿಗಳಿಗೆ ಇಲಾಖೆಯಿಂದ ಪೌಷ್ಠಿಕ ಆಹಾರಗಳ ಸಾಮಾಗ್ರಿಗಳನ್ನು ಕಕ್ಕಿಂಜೆಯಿಂದ ಖಾಸಾಗಿ ಬಾಡಿಗೆ ವಾಹನದಲ್ಲಿ ಕೊಂಡೊಯ್ಯಬೇಕಾಗಿದೆ. ಇದನ್ನು ಇಲ್ಲಿಯೇ ವಿತರಿಸುವಂತೆ ಸ್ಥಳೀಯರು ಒತ್ತಾಯಿಸಿದರು. ಅಂಗನವಾಡಿಯ ಮೂಲಕವೇ ನೀಡಲಾಗುತ್ತಿದೆ. ಅದನ್ನು ಅಲ್ಲಿಂದಲೇ ಪಡೆದುಕೊಳ್ಳಬೇಕಾಗುತ್ತದೆ ಎಂದು ಇಲಾಖಾಧಿಕಾರಿಗಳು ತಿಳಿಸಿದರು.

ರಸ್ತೆ ಅಭಿವೃದ್ಧಿಗೆ ಒಂದು ಕೋ. ರೂ. ವೆಚ್ಚದ ಕಾಂಕ್ರೀಟಿಕರಣಕ್ಕೆ ಅನುದಾನ ಮಂಜೂರಾಗಿದ್ದು, ಅದರಲ್ಲಿಲ್ಲಿ 30 ಲಕ್ಷದ ಕಾಮಗಾರಿ ಆಗಿದೆ. ಉಳಿದ ಕಾಮಗಾರಿಯನ್ನು ತಕ್ಷಣ ಮಾಡುವಂತೆ ಒತ್ತಾಯಿಸಿದರು.

ಪ್ರಕೃತಿದತ್ತವಾದ ನೀರನ್ನು ಬೇಸಿಗೆಯಲ್ಲಿ ಟ್ಯಾಂಕಿನಲ್ಲಿ ಸಂಗ್ರಹಿಸಿ ಕುಡಿಯುವ ನೀರನ್ನು ಬಳಕೆ ಮಾಡಲಾಗುತ್ತಿತ್ತು. ಕಳೆದ 3 ವರ್ಷಗಳಿಂದ ಸಮರ್ಪಕವಾಗಿಲ್ಲದ ಕಾರಣ ಟ್ಯಾಂಕಿಗೆ ಸಂಪರ್ಕಿಸಲಾಗುವ ಪೈಪ್‌ಗಳನ್ನು ಸರಿಪಡಿಸುವಂತೆ ಒತ್ತಾಯಿಸಿದರು.

ಇದಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಸಿಇಒ ಅಧಿಕಾರಿಗಳಿಗೆ ಸೂಚಿಸಿದರು. ಬಾಂಜಾರುಮಲೆ ನಿವಾಸಿಗಳು ವಿದ್ಯುತ್ ಸಂಪರ್ಕದ ಬೇಡಿಕೆ ಮುಂದಿಟ್ಟು, ಈ ಹಿಂದೆ ನಡೆಸಿದ ಸರ್ವೆ ಬಗ್ಗೆ ವಿಚಾರಿಸಿದಾಗ ಡಿಪಿಆರ್ ಯೋಜನೆಯಲ್ಲಿ 50 ಕುಟುಂಬಗಳಿಗೆ ತಲಾ 50 ಸಾವಿರದ ಸೋಲಾರ್ ಪ್ಲಾಂಟ್ ವಿತರಣೆ ಪ್ರಸ್ತಾವನೆ ಸಲ್ಲಿಸಲಾಗಿದ್ದು ಈಗಾಗಲೇ ಮಂಜೂರು ಆಗಿದೆ. ದಟ್ಟ ಕಾಡು ಪ್ರದೇಶ ಆಗಿರುವುದರಿಂದ ಶಾಶ್ವತ ವಿದ್ಯುತ್ ಸಂಪರ್ಕದ ನಿರ್ವಹಣೆ ಕಷ್ಟ. ಅದನ್ನು ಮಾಡಿಲು ಇಲಾಖೆ ಸಿದ್ದವಿದೆ. ನಿರ್ವಹಣೆ ಮಾತ್ರ ಕಷ್ಟವಾಗುತ್ತದೆ ಎಂದು ಮೆಸ್ಕಾಂ ಇಲಾಖಾಧಿಕಾರಿಗಳು ಉತ್ತರಿಸಿದರು.

ಇದೇ ಸಂದರ್ಭ 4 ಮಂದಿ ಫಲಾನುಭವಿಗಳಿಗೆ ಮನೆ ದುರಸ್ತಿ ಬಗ್ಗೆ ಚೆಕ್ ವಿತರಣೆ ಮಾಡಲಾಯಿತು. ಸ್ಥಳೀಯರು ಡಿಸಿ ಕಟ್ಟೆ ಅಭಿವೃದ್ಧಿ ಪಡಿಸುವಂತೆ ಒತ್ತಾಯಿಸಿದರು. ಸಂಬಂಧಪಟ್ಟ ಅಧಿಕಾರಿಗಳಿಗೆ ಪ್ರಸ್ತಾವನೆ ಸಲ್ಲಿಸುವಂತೆ ಸಿಇಒ ತಿಳಿಸಿದರು.

ಜಿಪಂ ಸದಸ್ಯೆ ನಮಿತಾ, ತಾಪಂ ಸದಸ್ಯರಾದ ಸೆಬಾಸ್ಟಿನ್, ಕೊರಗಪ್ಪ ಗೌಡ, ನೆರಿಯ ಗ್ರಾಪಂ ಅಧ್ಯಕ್ಷ ಮಹಮ್ಮದ್, ಅಶ್ರಫ್, ಬಾಬು ಗೌಡ, ಚಾರ್ಮಾಡಿ ಗ್ರಾಪಂ ಅಧ್ಯಕ್ಷೆ ಶೈಲಜಾ, ಉಪಾಧ್ಯಕ್ಷೆ ಲೀಲಾವತಿ, ಸದಸ್ಯ ಉಮೇಶ ಗೌಡ, ಡಿಎಚ್‌ಓ ಡಾ ರಾಮಕೃಷ್ಣ ರಾವ್, ಉಪ ಕಾರ್ಯದರ್ಶಿ ಎನ್. ಆರ್. ಉಮೇಶ್, ತಾಪಂ ಕಾರ್ಯನಿರ್ವಾಹಣಾಧಿಕಾರಿ ಸಿ. ಆರ್. ನರೇಂದ್ರ, ಸಮಾಜ ಕಲ್ಯಾಣಾಧಿಕಾರಿ ಮೋಹನ್, ಐಟಿಡಿಪಿಯ ಹೇಮಲತಾ, ಪಿಡಿಓಗಳಾದ ಪ್ರಕಾಶ್ ಶೆಟ್ಟಿ, ಅಜಿತ್, ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು. 

ಚಾರ್ಮಾಡಿ ಗ್ರಾಪಂನ ಚಿಬಿದ್ರೆಯ ಕೆರೆ ಅಭಿವೃದ್ಧಿ ಯೋಜನೆಯಲ್ಲಿ ಜಿಪಂ ಅನುದಾನದಡಿಯಲ್ಲಿ ನರೇಗಾ ಮೂಲಕ 2 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಕೆರೆಯನ್ನು ವೀಕ್ಷಿಸಿದರು. ಬಳಿಕ ಚಾರ್ಮಾಡಿ ಗ್ರಾಮದ ಬಜಿಲ್‌ಮಾರ್ ಎಂಬಲ್ಲಿ ನಿರ್ಮಾಣವಾಗಿಲಿರುವ ಕಿಂಡಿ ಆಣೆಕಟ್ಟಿಗೆ ಶಿಲಾನ್ಯಾಸ ನೆರವೇರಿಸಿದರು. ಬಳಿಕ ಸಂಜೆ ಗುರುವಾಯನಕೆರೆಯ ಕೆರೆಯನ್ನು ಅಭಿವೃದ್ಧಿ ಪಡಿಸುವ ಬಗ್ಗೆ ವೀಕ್ಷಿಸಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X