Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಂಗೀತ ಆಸ್ವಾದನೆಯಿಂದ ಮಾನಸಿಕ ಆರೋಗ್ಯ...

ಸಂಗೀತ ಆಸ್ವಾದನೆಯಿಂದ ಮಾನಸಿಕ ಆರೋಗ್ಯ ವೃದ್ಧಿ-ಡಾ ಶ್ರೀಪತಿ ರಾವ್

ವಾರ್ತಾಭಾರತಿವಾರ್ತಾಭಾರತಿ19 May 2017 6:33 PM IST
share
ಸಂಗೀತ ಆಸ್ವಾದನೆಯಿಂದ ಮಾನಸಿಕ ಆರೋಗ್ಯ ವೃದ್ಧಿ-ಡಾ ಶ್ರೀಪತಿ ರಾವ್

ಪುತ್ತೂರು, ಮೇ 19: ಸಂಗೀತ ಕಾರ್ಯಕ್ರಮಗಳನ್ನು ನೋಡುವುದು ಮತ್ತು ಅದನ್ನು ಆಸ್ವಾದಿಸುವುದರಿಂದ ಮನಸ್ಸಿಗೆ ನೆಮ್ಮದಿ ಕೊಡುವುದರ ಜೊತೆಗೆ ಮಾನಸಿಕ ಆರೋಗ್ಯ ವೃದ್ಧಿಯಾಗಲಿದೆ ಎಂದು ಪುತ್ತೂರು ಪ್ರಗತಿ ಆಸ್ಪತ್ರೆಯ ವೈದ್ಯಕೀಯ ಮತ್ತು ಹೃದ್ರೋಗ ತಜ್ಞ ಡಾ ಶ್ರೀಪತಿ ರಾವ್ ಹೇಳಿದರು.

ಅವರು ಗುರುವಾರ ಪುತ್ತೂರಿನ ಕೊಂಬೆಟ್ಟು ಸಾಧನಾ ಸಂಗೀತ ಪ್ರತಿಷ್ಠಾನ ಮತ್ತು ಕರ್ನಾಟಕ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರ ಸಹಯೋಗದಲ್ಲಿ ಮೇ. 18, 19, 20ರಂದು 3 ದಿನಗಳ ಕಾಲ ನಡೆಯಲಿರುವ ಕರ್ನಾಟಕ ಶಾಸ್ತ್ರೀಯ ಸಂಗೀತ ಶಿಬಿರ ಗಣೇಶಸ್ತುತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸಂಗೀತ ಪ್ರತಿಯೋರ್ವ ವ್ಯಕ್ತಿಯಲ್ಲೂ ವಿಶೇಷವಾದ ಪ್ರಭಾವವನ್ನು ಬೀರುತ್ತದೆ, ಅದರಲ್ಲಿನ ತನ್ಮತೆಯತೆ, ಆನಂದ ಮನುಷ್ಯನನ್ನು ಬೇರೊಂದು ಲೋಕಕ್ಕೆ ಕೊಂಡೊಯ್ಯುತ್ತದೆ, ಆ ಮೂಲಕ ಅದು ಮನಸ್ಸಿಗೆ ಇಂಪು ಕೊಡುತ್ತದೆ, ಮಾನಸಿಕ ಆರೋಗ್ಯವನ್ನು ಹಿಡಿತದಲ್ಲಿ ಹಿಡಿದುಕೊಳ್ಳುತ್ತದೆ ಎಂದ ಅವರು ಸಾಧನಾ ಸಂಗೀತ ಶಾಲೆ ಯುವ ಪ್ರತಿಭೆಗಳನ್ನು ಹೊರ ತರುವಲ್ಲಿ ಮಾಡುವ ಸಾಧನೆ ಪ್ರಶಂಸನೀಯವಾದುದು ಎಂದರು.  

ಶಿಬಿರದ ಸಂಪನ್ಮೂಲ ವ್ಯಕ್ತಿ, ಖ್ಯಾತ ಸಂಗೀತ ಕಲಾವಿದೆ, ವಿದುಷಿ ಸುಚಿತ್ರಾ ಹೊಳ್ಳ ಮಾತನಾಡಿ ಸಂಗೀತ ಕಾರ್ಯಕ್ರಮಗಳಲ್ಲಿ ವೈವಿದ್ಯತೆಯನ್ನು ಮೂಡಿಸುವ ಉದ್ದೇಶದಿಂದ ಹೊಸ ಹೊಸ ರಾಗಗಳ ಪರಿಚಯ ಮತ್ತು ಹೊಸ ಹೊಸ ಅಪರೂಪದ ಕೃತಿಗಳ ಪರಿಚಯ ಮಾಡುವುದು ಈ ಶಿಬಿರದ ಉದ್ದೇಶವಾಗಿದೆ ಎಂದ ಅವರು 2004ರಲ್ಲಿ ಪ್ರಾರಂಭಗೊಂಡ ಸಂಸ್ಥೆ ಈ ಎತ್ತರಕ್ಕೆ ಬೆಳೆದು ನಿಂತಿದೆ, 2014ರಲ್ಲಿ ಸರಣಿ ಸಂಗೀತ ಕಾರ್ಯಕ್ರಮ ಆರಂಭಿಸಿದ್ದು, ಆ ವಿದ್ಯಾರ್ಥಿಗಳಿಗೂ ಈ ಶಿಬಿರ ಅತ್ಯಂತ ಪ್ರಯೋಜನಕಾರಿ ಆಗಿ ಪರಿಣಮಿಸಿದೆ ಎಂದರು.

ಪುತ್ತೂರು ಕೀರ್ತನಾ ಡೆವಲಪರ್ಸ್‌ ಮಾಲಕರಾದ ಶ್ರೀಮತಿ ವೀಣಾ ಪಿ.ಎಸ್. ವರ್ಮ ಶಿಬಿರವನ್ನು ಉದ್ಘಾಟಿಸಿ ಮಾತನಾಡಿ ಸಂಸ್ಥೆಯ ಮೂಲಕ ಇನ್ನಷ್ಟು ಪ್ರತಿಭೆಗಳು ಹೊರ ಬರಲಿ ಎಂದು ಶುಭ ಹಾರೈಸಿದರು.  ಸಾಧನಾ ಸಂಗೀತ ಪ್ರತಿಷ್ಠಾನದ ಅಧ್ಯಕ್ಷ ರಾಮಚಂದ್ರ ಹೊಳ್ಳ ಮಾತನಾಡಿ ಶಿಬಿರಾರ್ಥಿಗಳು ಇದರ ಪ್ರಯೋಜನವನ್ನು ಸರಿಯಾಗಿ ಪಡೆದುಕೊಂಡು ಸಂಗೀತ ಜ್ಞಾನವನ್ನು ವೃದ್ಧಿಸಬೇಕು ಎಂದರು.  

120 ವಿದ್ಯಾರ್ಥಿಗಳು ಭಾಗಿ:
ಶಿಬಿರದಲ್ಲಿ ಉಡುಪಿ, ಮಂಗಳೂರು, ಬೆಳ್ತಂಗಡಿ, ಬಂಟ್ವಾಳ, ಪುತ್ತೂರು ತಾಲ್ಲೂಕು ವ್ಯಾಪ್ತಿಯಿಂದ ಆಗಮಿಸಿದ 120 ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಶಿಬಿರಾರ್ಥಿಗಳಾದ ವೈಷ್ಣವಿ ರೈಯವರ ಪ್ರಾರ್ಥನೆಯೊಂದಿಗೆ ಆರಂಭವಾದ ಕಾರ್ಯಕ್ರಮದಲ್ಲಿ ವೈಷ್ಣವಿ ಆಚಾರ್ಯ ಸ್ವಾಗತಿಸಿ, ತೇಜಸ್ವಿನಿ ಕುಕ್ಕಿಲ ವಂದಿಸಿದರು. ಪ್ರಿಯಂವದ ಕಾರ್ಯಕ್ರಮ ನಿರೂಪಿಸಿದರು.

ಸಂಗೀತ ಕಾರ್ಯಕ್ರಮ:
ಶಿಬಿರ ಮಧ್ಯೆ ಮಧ್ಯಾಹ್ನ 1-30ರಿಂದ ಕಾಸರಗೋಡು ವಿದುಷಿ ಶ್ರೀಮತಿ ಉಷಾ ಈಶ್ವರ ಭಟ್‌ರವರು ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟರು. ವಯೋಲಿನ್‌ನಲ್ಲಿ ವಿದ್ವಾನ್ ಚೇತನ್ ಸಿ. ಮೈಸೂರು, ಮೃದಂಗದಲ್ಲಿ ವಿದ್ವಾನ್ ವಸಂತಕೃಷ್ಣ ಕಾಂಚನ, ಘಟಂ-ವಿದ್ವಾನ್ ಕೊಟ್ಟಾಯಂ ಉನ್ನಿಕೃಷ್ಣನ್ ಸಹಕರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X