Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಅನುರಾಗ್ ನಿಗೂಢ ಸಾವಿನ ಬಗ್ಗೆ ಯಾವುದೇ...

ಅನುರಾಗ್ ನಿಗೂಢ ಸಾವಿನ ಬಗ್ಗೆ ಯಾವುದೇ ತನಿಖೆಗೆ ಸಿದ್ಧ: ಸಚಿವ ಖಾದರ್

ವಾರ್ತಾಭಾರತಿವಾರ್ತಾಭಾರತಿ19 May 2017 7:55 PM IST
share
ಅನುರಾಗ್ ನಿಗೂಢ ಸಾವಿನ ಬಗ್ಗೆ ಯಾವುದೇ ತನಿಖೆಗೆ ಸಿದ್ಧ: ಸಚಿವ ಖಾದರ್

ಮಂಗಳೂರು, ಮೇ 19: ಲಕ್ನೋದಲ್ಲಿ ನಿಗೂಢವಾಗಿ ಮೃತ ಪಟ್ಟಿರುವ ಐಎಎಸ್ ಅಧಿಕಾರಿ ಅನುರಾಗ್ ತಿವಾರಿ ಸಾವಿನ ಬಗ್ಗೆ ಯಾವೂದೇ ರೀತಿಯ ತನಿಖೆಗೂ ಸರಕಾರ ಸಿದ್ಧವಿದೆ. ರಾಜ್ಯ ಸರಕಾರದ ವಿರುದ್ಧ ಮಾಡುತ್ತಿರುವ ಆರೋಪಗಳು ರಾಜಕೀಯ ಪ್ರೇರಿತ ಮತ್ತು ಆಧಾರರಹಿತ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ಹೇಳಿದ್ದಾರೆ.

  ಮಂಗಳೂರಿನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ಆಹಾರ ಮತ್ತು ನಾಗರಿಕ ಪೂರೈಕೆ ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯಲ್ಲಿ ಆಯುಕ್ತರಾಗಿದ್ದ ತಿವಾರಿ ಜನವರಿ 4ರಿಂದ 132 ದಿನಗಳ ಕಾಲ ಇಲಾಖೆಯಲ್ಲಿದ್ದರು. ಈ ಪೈಕಿ 37 ದಿನಗಳ ಕಾಲ ಮಾತ್ರ ಕರ್ತವ್ಯ ನಿರ್ವಹಿಸಿದ್ದಾರೆ. ಈ ಹಿಂದೆ ಅವರು ಬೀದರ್ ಜಿಲ್ಲೆಯ ಜಿಲ್ಲಾಧಿಕಾರಿಯಾಗಿದ್ದರು. ಉತ್ತರ ಪ್ರದೇಶದ ಚುನಾವಣೆಯಲ್ಲೂ ಕರ್ತವ್ಯ ನಿರ್ವಹಿಸಿದ್ದಾರೆ. ಇತ್ತೀಚೆಗೆ ಅವರು ಜೂನ್ 5ರವರೆಗೆ ರಜೆ ಕೋರಿದ್ದರು.ಆದರೆ ಅವರ ಸಾವು ಉತ್ತರ ಪ್ರದೇಶದ ಸರಕಾರಿ ಅತಿಥಿಗೃಹದ ಬಳಿ ನಡೆದಿದೆ ಎನ್ನಲಾಗಿದ್ದು, ಆ ಬಳಿಕ ಕರ್ನಾಟಕ ಸರಕಾರದ ವಿರುದ್ಧ ಆರೋಪಗಳನ್ನು ಮಾಡಲಾಗುತ್ತಿದೆ. ಆದರೆ ಈ ಆರೋಪಗಳ ಬಗ್ಗೆ ಅನುರಾಗ್ ತಿವಾರಿಯಾಗಲಿ, ಇಲಾಖೆಯವರಾಗಲಿ ತನ್ನ ಗಮನಕ್ಕೆ ತಂದಿಲ್ಲ. ಇವೆಲ್ಲಾ ಆಧಾರ ರಹಿತ ಆರೋಪಗಳಾಗಿವೆ. ಆದರೂ ವಿಪಕ್ಷಗಳು ಅಧಿಕಾರಿಯ ಸಾವಿನಲ್ಲೂ ರಾಜಕೀಯ ಮಾಡುತ್ತಿವೆ ಎಂದು ದೂರಿದರು.

 ತಿವಾರಿ ಸಾವಿನ ಪ್ರಕರಣದ ಸಿಬಿಐ ಮೂಲಕ ತನಿಖೆ ಮಾಡಲು ಕೇಂದ್ರ ಸರಕಾರಕ್ಕೆ ಅಧಿಕಾರವಿದೆ. ಮೃತದೇಹ ಪತ್ತೆಯಾದ ಪ್ರದೇಶದಲ್ಲಿ ಅವರ ಸಾವು ಹೇಗೆ ಸಂಭವಿಸಿದೆ ಎಂಬುದನ್ನು ಅಲ್ಲಿನ ರಾಜ್ಯ ಸರಕಾರ ಕ್ರಮ ಕೈ ಗೊಳ್ಳಬೇಕಾಗಿದೆ. ಉಳಿದಂತೆ ಕರ್ನಾಟಕ ಸರಕಾರದಿಂದ ಈ ಪ್ರಕರಣದ ತನಿಖೆಗೆ ಎಲ್ಲಾ ರೀತಿಯ ಸಹಕಾರ ನೀಡಲು ಸಿದ್ಧ ಎಂದು ಯು.ಟಿ.ಖಾದರ್ ತಿಳಿಸಿದರು.

ಆಹಾರ ಇಲಾಖೆಯಲ್ಲಿ ಯಾವ ಹಗರಣವೂ ನಡೆದಿಲ್ಲ

 ರಾಜ್ಯದ ಆಹಾರ ಮತ್ತು ನಾಗರಿಕ ಪೂರೈಕೆಯ ಇಲಾಖೆಯಲ್ಲಿ ಯಾವ ಹಗರಣವೂ ನಡೆದಿಲ್ಲ. ಈ ಬಗ್ಗೆ ಕೇಳಿಬರುತ್ತಿರುವ ಆರೋಪಗಳು ಆಧಾರ ರಹಿತವಾಗಿವೆ. ಅನುರಾಗ್ ಸಾವಿನ ಹಿನ್ನೆಲೆಯಲ್ಲಿ ಮಾಹಿತಿ ಕಲೆ ಹಾಕಲು ರಾಜ್ಯದಿಂದ ಏಳು ಮಂದಿ ಅಧಿಕಾರಿಗಳು ಉತ್ತರ ಪ್ರದೇಶಕ್ಕೆ ತೆರಳಿದ್ದಾರೆ ಎಂದು ಸಚಿವ ಯು.ಟಿ.ಖಾದರ್ ತಿಳಿಸಿದ್ದಾರೆ.

  ಸುದ್ದಿ ಗೋಷ್ಠಿಯಲ್ಲಿ ಕೆಪಿಸಿಸಿ ವೀಕ್ಷಕ ಬಿ.ನಾರಾಯಣ ರಾವ್, ಮಂಗಳೂರು ತಾಪಂ ಅಧ್ಯಕ್ಷ ಮುಹಮ್ಮದ್ ಮೋನು, ಜಿಲ್ಲಾ ಕಾಂಗ್ರೆಸ್ ಮುಖಂಡ ಟಿ.ಕೆ.ಸುಧೀರ್ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X