Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಕೃತಿ ಪರಿಚಯ
  4. ಇನ್ನಷ್ಟು ಮಾಗಬೇಕಾದ ಕತೆಗಳು

ಇನ್ನಷ್ಟು ಮಾಗಬೇಕಾದ ಕತೆಗಳು

ಈ ಹೊತ್ತಿನ ಹೊತ್ತಿಗೆ

ಕಾರುಣ್ಯಾಕಾರುಣ್ಯಾ20 May 2017 12:12 AM IST
share
ಇನ್ನಷ್ಟು ಮಾಗಬೇಕಾದ ಕತೆಗಳು

ಕಿರಣ್ ಕುಮಾರ್ ಹಳೇಹಳ್ಳಿ ಅವರ ಹದಿನೇಳು ಪುಟ್ಟ, ಮಧ್ಯಮ ಗಾತ್ರದ ಕಥೆಗಳ ಸಂಕಲನ ‘‘ಹಳೇ ಹಳ್ಳಿಯ ಹೊಸ ಕಥೆಗಳು’’. ಗ್ರಾಮೀಣ ಪರಿಸರದ ಹಿನ್ನೆಲೆಗಳೇ ಈ ಕತೆಯ ಹೆಗ್ಗಳಿಕೆಗಳು. ಸಂವೇದನಾಶೀಲ, ಉದಾರವಾದಿ ಮಾನವತಾ ವಾದವನ್ನು ನಂಬಿ ಬರೆದ ಕತೆಗಳು ಇವು. ಬೆನ್ನುಡಿ ಹೇಳುವಂತೆ ನವಿರು ಭಾವಗಳು, ಸಭ್ಯ ಭಾಷೆ ಹಾಗೂ ತೊಡಕಿಲ್ಲದ ನಿರೂಪಣೆಯು ಕೆಲವು ಸಲ ನವೋದಯ ಸಂದರ್ಭದ ಕಥೆಗಾರಿಕೆಯನ್ನು ನೆನಪಿಸುತ್ತವೆ. ಇಲ್ಲಿ ಒಟ್ಟು 18 ಕತೆಗಳಿವೆ. ಈಗಷ್ಟೇ ಕತಾ ಲೋಕಕ್ಕೆ ತೆರೆದುಕೊಂಡ ಮನಸ್ಸಿನ ಮುಗ್ಧತೆ ಪ್ರತೀ ಕತೆಗಳಲ್ಲೂ ಎದ್ದು ಕಾಣುತ್ತದೆ. ಜೀವಪರತೆ ಆತ್ಮೀಯವಾಗುತ್ತದೆ. ಲೇಖಕರು ಆಯ್ದುಕೊಳ್ಳುವ ವಸ್ತುಗಳೆಲ್ಲ ಇನ್ನಷ್ಟು ಅನು ಭವವನ್ನು, ತೀವ್ರತೆಯನ್ನು ಬೇಡುತ್ತವೆಯಾದರೂ, ಕತೆಗಾರನ ಕತೆ ಹೇಳುವ ಅವಸರ ಕೆಲವೊಮ್ಮೆ ಕತೆಯ ಆತ್ಮಕ್ಕೆ ಧಕ್ಕೆ ತರುತ್ತದೆ.
 ಒಂದು ಹೆಣ್ಣಿನ ಬದುಕು ತಾಯ್ತನದಲ್ಲೇ ಅರ್ಥಪೂರ್ಣ ವಾಗುತ್ತದೆ ಎನ್ನುವ ಸಮಾಜಕ್ಕೆ ಸವಾಲೊಡ್ಡುವಂತೆ, ಮಕ್ಕಳಿಲ್ಲದ ತಾಯಿಯೊಬ್ಬಳು ಶಾಲೆಯೊಂದನ್ನು ತೆರೆದು ನೂರಾರು ಮಕ್ಕಳಿಗೆ ಅಮ್ಮನಾಗುವ ಬಗೆ ಅತ್ಯಂತ ಸುಧಾರಣ ಮನಸ್ಸಿನಿಂದ ಹೊರಹೊಮ್ಮಿದ ಕತೆ. ಮನುಷ್ಯ ಮತ್ತು ಪ್ರಾಣಿಯ ನಡುವಿನ ಸಂಬಂಧವನ್ನು ಹೇಳುವ ಇನ್ನೊಂದು ಸರಳ ಕತೆ ‘ಬೆಕ್ಕು’. ಇಂದಿನ ರಾಜಕೀಯ, ಕೋಮುಗಲಭೆಗಳ ನಡುವೆ ಶಾಂತಿಯ ಕನಸು ಕಾಣುವ ವಿಶ್ವ ಮತ್ತು ಆತನ ಮುಂದಿರುವ ವಾಸ್ತವವನ್ನು ‘ವಿಶ್ವ ಕಂಡ ಕನಸು’ ಕತೆ ಹೇಳುತ್ತದೆ. ‘ಅರಿವು’ ಕತೆ ಮನುಷ್ಯ ನೊಳಗಿನ ಪರಿವರ್ತನೆಯ ಕನಸುಗಳನ್ನು ಹೊಂದಿದೆ. ಛಾಯಾ ಸಾಹಿತ್ಯ ಹೊರತಂದಿರುವ ಈ ಕೃತಿಯ ಒಟ್ಟು ಪುಟಗಳು 94. ಬೆಲೆ 60 ರೂಪಾಯಿ. ಆಸಕ್ತರು 9845394184 ದೂರವಾಣಿಯನ್ನು ಸಂಪರ್ಕಿಸಬಹುದು.

share
ಕಾರುಣ್ಯಾ
ಕಾರುಣ್ಯಾ
Next Story
X