Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಾವು, ಹಲಸು ಜಿಲ್ಲೆಯ ಬಡವರ ಪ್ರಮುಖ...

ಮಾವು, ಹಲಸು ಜಿಲ್ಲೆಯ ಬಡವರ ಪ್ರಮುಖ ಆಹಾರವಾಗಿತ್ತು : ಬಿ.ರಮಾನಾಥ ರೈ

ಕದ್ರಿಯಲ್ಲಿ ಮಾವು-ಹಲಸು ಮೇಳ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ20 May 2017 12:18 AM IST
share
ಮಾವು, ಹಲಸು ಜಿಲ್ಲೆಯ ಬಡವರ ಪ್ರಮುಖ ಆಹಾರವಾಗಿತ್ತು : ಬಿ.ರಮಾನಾಥ ರೈ

   
  
   
  

ಮಂಗಳೂರು, ಮೇ19: ಮಾವು, ಹಲಸು ಜಿಲ್ಲೆಯಲ್ಲಿ ಭೂ ಸುಧಾರಣೆ ಜಾರಿಯಾಗುವವರೆಗೂ ಬಡವರ ಪ್ರಮುಖ ಆಹಾರವಾಗಿತ್ತು ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ರಾಜ್ಯ ಪರಿಸರ, ಅರಣ್ಯ ಸಚಿವ ಬಿ.ರಮಾನಾಥ ರೈ ತಿಳಿಸಿದರು.

ಜಿಲ್ಲಾ ಪಂಚಾಯತ್ ತೋಟಗಾರಿಕಾ ಇಲಾಖೆ ಹಾಗೂ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮದ ವತಿಯಿಂದ ನಗರದ ಕದ್ರಿ ಪಾರ್ಕಿನಲ್ಲಿಂದು ವಿವಿಧ ಮಾವು ಹಾಗೂ ಹಲಸುಗಳ ವೈವಿಧ್ಯ ತಳಿಗಳ ಅಪೂರ್ವ ಮೇಳ ಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ರಾಜ್ಯ ಪರಿಸರ,ಅರಣ್ಯ ಸಚಿವ ಬಿ.ರಮಾನಾಥ ರೈ ಚಾಲನೆ ನೀಡಿ ಮಾತನಾಡಿದರು.

ದಕ್ಷಿಣ ಕನ್ನಡ ಜಿಲ್ಲೆ ಹಲವು ವರ್ಷಗಳ ಹಿಂದೆ ಹಲಸು ಬೆಳೆಯುವ ರಾಜ್ಯದ ಪ್ರಮುಖ ಜಿಲ್ಲೆಯಾಗಿತ್ತು. ಮತ್ತೆ ಜಿಲ್ಲೆಯಲ್ಲಿ ಹಲಸು ಬೆಳೆಗೆ ಮಹತ್ವ ನೀಡಬೇಕಾಗಿದೆ. ಗೇಣಿದಾರರು ಮತ್ತು ಒಕ್ಕಲುಗಳು ಇದ್ದ ಸಂದರ್ಭದಲ್ಲಿ ಬೆಳೆದ ಬೆಳೆಯನ್ನು ಗೇಣಿ ನೀಡಲು ಕೊಟ್ಟು ಭೂಮಿಯ ಹಕ್ಕಿಲ್ಲದೆ ಇದ್ದಾಗ ಹಲಸು ಬಡವರ ಪ್ರಮುಖ ಆಹಾರವಾಗಿತ್ತು. ಮಾವು ಲಾಭದಾಯಕ ತೋಟಗಾರಿಕಾ ಬೆಳೆಯಾಗಿದೆ. ಈ ಬೆಳೆಯ ಅಭಿವೃದ್ಧಿ ದೃಷ್ಟಿಯಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಈ ರೀತಿಯ ಮಾವು, ಹಲಸು ಮೇಳ ಮಾಡುತ್ತಿರುವುದು ಉತ್ತಮ ಪ್ರಯತ್ನ ಎಂದರು.

ಬೆಳೆಗಾರರ ನಡುವೆ ಮಧ್ಯವರ್ತಿಗಳ ವ್ಯವಹಾರಗಳಿಲ್ಲದೆ ನೇರವಾಗಿ ಮಾರಾಟ ಮಾಡುವ ವ್ಯವಸ್ಥೆ ಮೇಳದಲ್ಲಿ ನಡೆಯುತ್ತಿದೆ ಎಂದು ರಮಾನಾಥ ರೈ ತಿಳಿಸಿದರು.

ರಾಜ್ಯದಲ್ಲಿ ಶೇ 20 ಮಾವು ಬೆಳೆಗೆ ಹಾನಿ:- ರಾಜ್ಯದಲ್ಲಿ ಮಳೆಯ ಕೊರತೆಯಿಂದ ಹಾಗೂ ಅಕಾಲಿಕ ಮಳೆಯಿಂದ ಶೇ 20ರಷ್ಟು ಮಾವು ಬೆಳೆಗೆ ಹಾನಿಯಾಗಿದೆ ಎಂದು ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮ ಅಧ್ಯಕ್ಷ ಎಲ್.ಗೋಪಾಲಕೃಷ್ಣ ತಿಳಿಸಿದ್ದಾರೆ.

ಬೆಳೆಗಾರನಿಂದ ನೇರವಾಗಿ ಬಳಕೆದಾರನಿಗೆ ಎನ್ನುವ ದೃಷ್ಟಿಯಿಂದ ಈ ಮೇಳವನ್ನು ರಾಜ್ಯಾದ್ಯಂತ ಹಮ್ಮಿಕೊಳ್ಳಲಾಗಿದೆ. ರಾಜ್ಯದಲ್ಲಿ ಮಾವು ಬೆಳೆಯನ್ನು ಅಭಿವೃದ್ಧಿ ಪಡಿಸಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಮಾರಾಟ ಮಾಡುವ ನಿಟ್ಟಿನಲ್ಲಿ ಮಾವು ಅಭಿವೃದ್ಧಿ ನಿಗಮ ಕಾರ್ಯಪ್ರವೃತ್ತವಾಗಿದೆ ಎಂದು ಗೋಪಾಲಕೃಷ್ಣ ತಿಳಿಸಿದರು.

ಮೇಳ ಇಂದಿನಿಂದ ಆರಂಭಗೊಂಡು ಮೇ 25ರವರೆಗೆ ನಡೆಯಲಿದೆ. ಮೇಳದಲ್ಲಿ ಚಂದ್ರ ಹಲಸು, ಸ್ವರ್ಣ ಹಲಸು, ತೂಬುಗೆರೆ ಹಲಸು, ರುದ್ರಾಕ್ಷಿ ಹಲಸು, ಸಕ್ಕರೆ ಪಟ್ನ, ಭೈರಸಂದ್ರ ಹಲಸುಗಳ ತಳಿಗಳು ಬಾದಾಮಿ, ಮಲ್ಲಿಕಾ, ಆಪೂಸು, ರಸಪೂರಿ, ನೀಲಂ,ಮಲ್ ಗೋವಾ, ನೀಲಂ,ಬಂಗನ್ ಪಳ್ಳಿ,ಸಕ್ಕರೆ ಗುತ್ತಿ,ಪಯಿರಿ ಮೊದಲಾದ ತಳಿಗಳ ಹಣ್ಣುಗಳು ಗ್ರಾಹಕರನ್ನು ಸೆಳೆದವು.

ಸಮಾರಂಭದಲ್ಲಿ ಸರಕಾರದ ಮುಖ್ಯ ಸಚೇತಕ ಐವನ್ ಡಿ ಸೋಜ, ವಿಧಾನ ಪರಿಷತ್ ಸದಸ್ಯ ಎಚ್.ಎಂ.ರೇವಣ್ಣ, ಜಿ.ಪಂ.ಸದಸ್ಯ ಎಂ.ಎಸ್.ಮುಹಮ್ಮದ್, ಮಾವು ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಡಾ.ಕದಿರೇ ಗೌಡ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಉಮೇಶ್ , ತೋಟಗಾರಿಕಾ ಉಪನಿರ್ದೇಶಕ ಯೋಗೇಶ್ ಎಚ್.ಆರ್ ಮೊದಲಾದವರು ಉಪಸ್ಥಿತರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X