Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿಯಲ್ಲಿ ಸಾವಯವ ಸಂತೆ: ಜಿಲ್ಲಾಧಿಕಾರಿ...

ಉಡುಪಿಯಲ್ಲಿ ಸಾವಯವ ಸಂತೆ: ಜಿಲ್ಲಾಧಿಕಾರಿ ಪ್ರಿಯಾಂಕ

ವಾರ್ತಾಭಾರತಿವಾರ್ತಾಭಾರತಿ20 May 2017 7:52 PM IST
share

ಉಡುಪಿ, ಮೇ 20: ಉಡುಪಿಯ ದೊಡ್ಡಣಗುಡ್ಡೆಯ ತೋಟಗಾರಿಕಾ ಇಲಾಖೆಯ ಆವರಣದಲ್ಲಿ ಸಾವಯವ ಉತ್ಪನ್ನಗಳ ಮಾರಾಟ ‘ಸಾವಯವ ಸಂತೆ’ಯನ್ನು ಜೂನ್ ತಿಂಗಳಲ್ಲಿ ಏರ್ಪಡಿಸಲಾಗುವುದು ಎಂದು ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ತಿಳಿಸಿದ್ದಾರೆ.

ಮಣಿಪಾಲದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಶನಿವಾರ ನಡೆದ ಸಾವಯವ ಸಂತೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು. ಪ್ರಸ್ತುತ ಸಾವಯವ ಉತ್ಪನ್ನಗಳಿಗೆ ಹೆಚ್ಚಿನ ಬೇಡಿಕೆ ಇದ್ದು, ಮಾರುಕಟ್ಟೆಯಲ್ಲಿ ನಕಲಿ ಸಾವಯವ ಉತ್ಪನ್ನಗಳ ಮಾರಾಟ ಮತ್ತು ಸಾವಯವ ಉತ್ಪನ್ನಗಳಿಗೆ ಹೆಚ್ಚಿನ ದರದಲ್ಲಿ ಮಾರಾಟ ಮಾಡುತ್ತಿರುವುದನ್ನು ತಡೆಯಲು, ಸಾವಯವ ಬೆಳೆ ಬೆಳೆ ಯುವ ರೈತರಿಗೆ ಉತ್ತೇಜನ ನೀಡಲು ಮತ್ತು ಜನತೆಗೆ ಉತ್ತಮ ಗುಣಮಟ್ಟದ ಸಾವಯವ ಉತ್ಪನ್ನಗಳನ್ನು ದೊರಕಿಸುವ ಉದ್ದೇಶದಿಂದ ಸಾವಯವ ಸಂತೆ ಆಯೋಜಿಸಲಾಗಿದೆ ಎಂದರು.

 ವಾರದ ಪ್ರತಿ ರವಿವಾರ ಸಂತೆ ನಡೆಯಲಿದ್ದು, ಬೇಡಿಕೆ ಅಧಿಕವಾಗಿದ್ದಲ್ಲಿ ವಾರದಲ್ಲಿ 2 ದಿನ ಸಂತೆ ನಡೆಸಲಾಗುವುದು. ಈ ಸಂತೆಯಲ್ಲಿ ಸಾವಯವ ಕೃಷಿಯಲ್ಲಿ ರೈತರು ಬೆಳೆದ ತರಕಾರಿ ಮತ್ತು ಇತರೆ ಉತ್ಪನ್ನಗಳನ್ನು ಮಾತ್ರ ಮಾರಾಟ ಮಾಡಲಾಗುವುದು. ಸಾವಯವ ಬೆಳೆ ಬೆಳೆಯುವ ನೊಂದಾಯಿತ ರೈತರು ತಮ್ಮ ಬೆಳೆಗಳನ್ನು ತಂದು ಮಾರಾಟ ಮಾಡಬಹುದು. ಯಾವುದೇ ಮಧ್ಯವರ್ತಿಗಳ ಹಾವಳಿಯಿಲ್ಲದೇ ನೇರವಾಗಿ ಗ್ರಾಹಕರಿಗೆ ಮಾರಾಟ ಮಾಡು ವುದರಿಂದ ರೈತರಿಗೆ ಹೆಚ್ಚಿನ ಲಾಭ ದೊರೆಯಲಿದೆ. ಅಲ್ಲದೇ ಗ್ರಾಹಕರಿಗೆ ತಾಜಾ ಮತ್ತು ಗುಣಮಟ್ಟದ ಸಾವಯವ ತರಕಾರಿ ದೊರೆಯಲಿದೆ ಎಂದು ಅವರು ತಿಳಿಸಿದರು.

 ಸಂತೆಯಲ್ಲಿ ಜಿಲ್ಲೆಯ ರೈತರು ಮಾತ್ರವಲ್ಲದೇ ಹೊರ ಜಿಲ್ಲೆಗಳಲ್ಲಿ ಬೆಳೆಯುವ ವಿಶಿಷ್ಟ ಸಾವಯವ ಉತ್ಪನ್ನಗಳ ಮಾರಾಟಕ್ಕೂ ಸಹ ಅವಕಾಶವಿದೆ. ಉಡುಪಿ ಸಾವಯವ ಮಾರಾಟ ಫೆೆಡರೇಷನ್ ವತಿಯಿಂದ ಮಾರಾಟಕ್ಕೆ ವ್ಯವಸ್ಥೆ ಮಾಡ ಲಾಗಿದೆ. ಆರೋಗ್ಯದ ದೃಷ್ಠಿಯಿಂದ ಸಾವಯವ ಉತ್ಪನ್ನಗಳ ಬಳಕೆ ಉತ್ತಮವಾ ಗಿದೆ ಎಂದು ಅವರು ಹೇಳಿದರು. ಸಂತೆ ಏರ್ಪಡಿಸಲು ರೈತರಿಗೆ ಎಲ್ಲಾ ರೀತಿಯ ನೆರವು ನೀಡುವಂತೆ ತೋಟಗಾರಿಕೆ ಮತ್ತು ಕೃಷಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ ಜಿಲ್ಲಾಧಿಕಾರಿ, ಉತ್ಪನ್ನಗಳ ಮಾರಾಟ ಮಾಡುವ ರೈತರು ತಮ್ಮ ಉತ್ಪನ್ನಗಳ ಕುರಿತು ಮಾಹಿತಿಯ್ನು ಇಲಾಖೆಗೆ ನೀಡಬೇಕು ಎಂದರು.

ಉಡುಪಿ ಜಿಲ್ಲಾ ಸಾವಯವ ಪೆಡರೇಷನ್ ಅಧ್ಯಕ್ಷ ದೇವದಾಸ ಹೆಬ್ಬಾರ್ ಮಾತನಾಡಿ, ಫೆಡರೇಷನ್ ವತಿಯಿಂದ ಈಗಾಗಲೇ ಸಾವಯವ ಕುಚ್ಚಿಗೆ ಅಕ್ಕಿ, ತೆಂಗಿನ ಎಣ್ಣೆ, ಗೇರು ಬೀಜಗಳ ಮಾರಾಟಕ್ಕೆ ವ್ಯವಸ್ಥೆಯಿದ್ದು, ಬೇರೆ ಜಿಲ್ಲೆಗಳಿಂದ ಲಭ್ಯವಿರುವ ಇತರೆ ಸಾವಯವ ಉತ್ಪನ್ನಗಳನ್ನು ಈ ಸಂತೆಯಲ್ಲಿ ಮಾರಾಟ ಮಾಡಲು ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು.

 ಸಭೆಯಲ್ಲಿ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಚಂದ್ರಶೇಖರ್ ನಾಯಕ್, ಬ್ರಹ್ಮಾವರ ಕೃಷಿ ವಿಜ್ಞಾನ ಕೇಂದ್ರದ ಸಂಶೋಧನಾ ನಿರ್ದೇಶಕ ಡಾ. ಹನು ಮಂತಪ್ಪ, ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಅಶೋಕ್ ಕುಮಾರ್ ಕೊಡ್ಗಿ, ತೋಟಗಾರಿಕೆ, ಪಶುಪಾಲನೆ ಹಾಗೂ ಇತರೆ ಇಲಾಖಾಧಿಕಾರಿಗಳು ಹಾಗೂ ರೈತರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X