Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ರಿಯಾದ್‌ಗೆ ಆಗಮಿಸಿದ ಡೊನಾಲ್ಡ್ ಟ್ರಂಪ್

ರಿಯಾದ್‌ಗೆ ಆಗಮಿಸಿದ ಡೊನಾಲ್ಡ್ ಟ್ರಂಪ್

ವಾರ್ತಾಭಾರತಿವಾರ್ತಾಭಾರತಿ20 May 2017 8:06 PM IST
share
ರಿಯಾದ್‌ಗೆ ಆಗಮಿಸಿದ ಡೊನಾಲ್ಡ್ ಟ್ರಂಪ್

ರಿಯಾದ್, ಮೇ 20: ಅಮೆರಿಕ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ತನ್ನ ಪ್ರಪ್ರಥಮ ವಿದೇಶ ಪ್ರವಾಸದಲ್ಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೌದಿ ಅರೆಬಿಯದ ರಾಜಧಾನಿ ರಿಯಾದ್‌ಗೆ ಆಗಮಿಸಿದ್ದಾರೆ.

ಮುಸ್ಲಿಮ್ ಸಮುದಾಯದೊಂದಿಗಿನ ತನ್ನ ಬಾಂಧವ್ಯವನ್ನು ಮರು ರೂಪಿಸುವ ಯತ್ನವಾಗಿ ಹಮ್ಮಿಕೊಂಡಿರುವ ಈ ಪ್ರವಾಸದಲ್ಲಿ ವಿವಿಧ ನಾಯಕರೊಂದಿಗೆ ಚರ್ಚೆ ನಡೆಸಲಿರುವ ಟ್ರಂಪ್, ರವಿವಾರ ರಿಯಾದ್‌ನಲ್ಲಿ ಸುಮಾರು 50 ಅರಬ್ ಮತ್ತು ಮುಸ್ಲಿಮ್ ನಾಯಕರನ್ನುದ್ದೇಶಿಸಿ ಇಸ್ಲಾಂ ಬಗ್ಗೆ ಉಪನ್ಯಾಸ ನೀಡಲಿದ್ದಾರೆ.

ಅಮೆರಿಕದ ಹಿತಾಸಕ್ತಿಯನ್ನು ಬಲವಾಗಿ ಸಂರಕ್ಷಿಸಲಾಗುವುದು ಎಂದು ಸೌದಿ ಅರೆಬಿಯಾ ಪ್ರವಾಸ ಆರಂಭಿಸುವ ಮುನ್ನ ಟ್ರಂಪ್ ಟ್ವೀಟ್ ಮಾಡಿದ್ದಾರೆ. ಎಂಟು ದಿನಗಳಾವಧಿಯ ಈ ಮಧ್ಯಪ್ರಾಚ್ಯ ಮತ್ತು ಯುರೋಪ್ ರಾಷ್ಟ್ರಗಳ ಪ್ರವಾಸ ಟ್ರಂಪ್ ಅವರಿಗೆದುರಾಗಿರುವ ಪ್ರಮುಖ ರಾಜತಾಂತ್ರಿಕ ಪರೀಕ್ಷೆಯಾಗಿದೆ. ಮಾಜಿ ಅಧ್ಯಕ್ಷ ಒಬಾಮಾ ಇರಾನ್ ಬಗ್ಗೆ ಹೆಚ್ಚಿನ ಒಲವು ಹೊಂದಿದ್ದರು ಎಂದು ಅರಬ್ ದೇಶಗಳು ಅನುಮಾನ ಹೊಂದಿದ್ದವು. ಆದರೆ ಟ್ರಂಪ್ ಇರಾನ್ ವಿರುದ್ಧ ಕಠಿಣ ನಿಲುವು ತಳೆಯುವ ನಿರೀಕ್ಷೆಯಿದೆ. ಕೊಲ್ಲಿ ಮಿತ್ರರಾಷ್ಟ್ರದ ಜೊತೆಗಿನ ತನ್ನ ತನ್ನ ಸಾಂಪ್ರದಾಯಿಕ ಸಂಬಂಧವನ್ನು ಗಟ್ಟಿಗೊಳಿಸುವ ಉದ್ದೇಶದಿಂದ ಈ ಪ್ರವಾಸದಲ್ಲಿ ಮಾನವ ಹಕ್ಕು ವಿಷಯದ ಬಗ್ಗೆ ಹೆಚ್ಚು ಗಮನ ನೀಡದೆ, ಹೊಸ ಶಸ್ತ್ರಾಸ್ತ್ರ ಒಪ್ಪಂದದ ಘೋಷಣೆಯನ್ನು ನಿರೀಕ್ಷಿಸಲಾಗಿದೆ.

  ಟ್ರಂಪ್ ಇರಾನ್ ಬಗ್ಗೆ ಕಠಿಣ ನಿಲುವು ತಳೆಯಲಿದ್ದಾರೆ . ಅಲ್ಲದೆ ಅವರು ನೀಡಲಿರುವ ಉಪನ್ಯಾಸದಲ್ಲಿ ಪ್ರಜಾಪ್ರಭುತ್ವ ಮತ್ತು ಮಾನವ ಹಕ್ಕು ಕುರಿತು ಪ್ರಸ್ತಾವನೆ ಇರುವುದಿಲ್ಲ ಎಂದು ವಿದೇಶ ವ್ಯವಹಾರ ಸಮಿತಿಯ ಹಿರಿಯ ಸದಸ್ಯ ಫಿಲಿಪ್ ಗೋರ್ಡನ್ ತಿಳಿಸಿದ್ದಾರೆ. ಇರಾನ್ ಬೆಂಬಲಿತ ಲೆಬನಾನ್‌ನ ಬಂಡುಗೋರ ಮುಖಂಡ ಹೆಝ್‌ಬುಲ್ಲಾನನ್ನು 'ಕಪ್ಪುಪಟ್ಟಿ' ಗೆ ಸೇರಿಸಿರುವುದಾಗಿ ಅಮೆರಿಕ ಮತ್ತು ರಿಯಾದ್ ಹೊರಡಿಸಿದ ಜಂಟಿ ಘೋಷಣೆಯಲ್ಲಿ ತಿಳಿಸಲಾಗಿದೆ.

ಈ ಮಧ್ಯೆ, ರಿಯಾದ್‌ನ ನೈರುತ್ಯ ಪ್ರಾಂತ್ಯದಲ್ಲಿ ಯೆಮೆನ್ ಬಂಡುಗೋರರು ಉಡಾಯಿಸಿದ ಪ್ರಕ್ಷೇಪಕ ಕ್ಷಿಪಣಿಯನ್ನು ಹೊಡೆದುುಳಿಸಿರುವುದಾಗಿ ಸೌದಿ ಅರೆಬಿಯ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X