ಕುಕ್ಕಾಜೆ: ಶೈನ್ ಗೈಸ್ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

ಬಂಟ್ವಾಳ, ಮೇ 21: ಶೈನ್ ಗೈಸ್ ಕುಕ್ಕಾಜೆ ಎಫ್.ಸಿ.ಸಿ.ಎ. (ರಿ) ಹಾಗೂ ಬಿ.ಸಿ.ರೋಡ್ ಪಾಲಿ ಕ್ಲಿನಿಕ್ ಮತ್ತು ಲೈಫ್ ಲೈನ್ ಹೆಲ್ತ್ ಕೇರ್ ಪ್ಲಸ್ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು 50 ಬಡ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ, ಕುಕ್ಕಾಜೆ ಶಾಲೆಯ ಎಸೆಸೆಲ್ಸಿ ಸಾಧಕರಿಗೆ ಸನ್ಮಾನ ಕಾರ್ಯಕ್ರಮವು ಇಂದು ಸರಕಾರಿ ಪ್ರಾಥಮಿಕ ಶಾಲೆ ಕುಕ್ಕಾಜೆಯಲ್ಲಿ ಮುಹಿಯುದ್ದೀನ್ ಜುಮಾ ಮಸೀದಿಯ ಅಧ್ಯಕ್ಷ ಕೆ.ಇಸ್ಮಾಯಿಲ್ ಅಧ್ಯಕ್ಷತೆಯಲ್ಲಿ ನಡೆಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾ ಪಂಚಾಯತ್ ಸದಸ್ಯ ಎಂ.ಎಸ್. ಮೊಹಮ್ಮದ್ ನೆರವೇರಿಸಿದರು. 2017ನೆ ಸಾಲಿನ ಎಸೆಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ಕುಕ್ಕಾಜೆ ಸರ್ಕಾರಿ ಫ್ರೌಢ ಶಾಲೆಯ ವಿದ್ಯಾರ್ಥಿಗಳಾದ ಇಮ್ತಿಯಾಝ್ ಅಹ್ಮದ್, ಹರ್ಷಿತಾ ಮತ್ತು ಪ್ರಗತಿ ಶಾಲೆಯ ವಿದ್ಯಾರ್ಥಿಗಳಾದ ಶ್ರೇಯಾ ಮತ್ತು ಆಯಿಷತ್ ಶಾನಿಯಾ ಅವರನ್ನು ಶಾಲು ಹೊದಿಸಿ ಸ್ಮರಣಿಕೆ ನೀಡಿ ಸನ್ಮಾನಿಸಿದರು.
ಕಾರ್ಯಕ್ರಮದಲ್ಲಿ ಡಾ. ಕರೋಲಿನ್ ಪಿ. ಡಿಸೋಜ ಆರೋಗ್ಯದ ಬಗ್ಗೆ ಮತ್ತು ಮಹಮ್ಮದ್ ರಫ್ಸೀರ್ ಶಿಕ್ಷಣದ ಬಗ್ಗೆ ಮಾತನಾಡಿದರು.
ಮುಖ್ಯ ಅಥಿತಿಗಳಾಗಿ ಬಂಟ್ವಾಳ ತಾ.ಪಂ. ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಅಬ್ಬಾಸ್ ಆಲಿ, ಇರಾ ಗ್ರಾ.ಪಂ. ಅಧ್ಯಕ್ಷ ಅಬ್ದುಲ್ ರಝಾಕ್ ಕುಕ್ಕಾಜೆ, ಡಾ. ಶ್ರೀನಾಥ್ ಪಿ.ಶೆಟ್ಟಿ, ಡಾ. ಉನೈಸಾ ಅಕ್ಬರ್, ಡಾ. ಮೊಹಮ್ಮದ್ ಮುಬಶಿರ್, ಸ್ಪೇರೋಮೀಟರಿ ಟೆಕ್ನಿಶಿಯನ್ ಸ್ವಪ್ನಿಲ್, ಸಿಪ್ಲಾ ಟೆರಿಟರಿ ಮ್ಯಾನೇಜರ್ ಸಜ್ಜಾದ್ ಮಂಚಿ, ಮಂಚಿ ಗ್ರಾ.ಪಂ. ಉಪಾಧ್ಯಕ್ಷ ಮೋಹನ್ ದಾಸ್, ಸದಸ್ಯ ಕೇಶವ ರಾವ್, ಬಂಟ್ವಾಳ ತಾ.ಪಂ. ಮಾಜಿ ಸದಸ್ಯ ಡಿ.ಕೆ.ಹಂಝ, ಕುಕ್ಕಾಜೆ ದ.ಕ.ಜಿ.ಪಂ.ಹಿ.ಪ್ರಾ.ಶಾಲೆಯ ಶಾಲಾಭಿವೃಧ್ಧಿ ಸಮಿತಿಯ ಅಧ್ಯಕ್ಷ ಹಮೀದ್ ಪುಚ್ಚೆಕೆರೆ, ನವಯುಗ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷ ಹಸೈನಾರ್ ಪಿ.ಕೆ., ಶರಫುಲ್ ಇಸ್ಲಾಂ ಕಮಿಟಿ ಅಧ್ಯಕ್ಷ ಹಂಝ ಕುರಿಯಪ್ಪಾಡಿ, ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ ಮುಖ್ಯಸ್ಥ ಫೈಝಲ್ ಮಂಚಿ, ಶೈನ್ ಗೈಸ್ ಅಧ್ಯಕ್ಷ ಗಫಾರ್ ಸಾಗರ್, ಮಾಜಿ ಅಧ್ಯಕ್ಷ ಇಬ್ರಾಹಿಂ ಎ.ಕೆ., ಕಾರ್ಯದರ್ಶಿ ನಿಝಾಮುದ್ದೀನ್, ಸಾಮಾಜಿಕ ಕಾರ್ಯಕರ್ತ ಆಶಿಕ್ ಕುಕ್ಕಾಜೆ ಮತ್ತಿತರ ಗಣ್ಯ ವ್ಯಕ್ತಿಗಳು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಶೈನ್ ಗೈಸ್ ಖಜಾಂಜಿ ಬಾತಿಷ ಕುಕ್ಕಾಜೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಶೈನ್ ಗೈಸ್ ಗೌರವಾಧ್ಯಕ್ಷ ನಝೀರ್ ಕುಕ್ಕಾಜೆ ಸ್ವಾಗತಿಸಿ, ವಂದಿಸಿದರು.







