Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಿಮಾನವಾಹಕ ನೌಕೆ ಗೊರ್ಷಕೊವ್‌ನ ವೆಚ್ಚ...

ವಿಮಾನವಾಹಕ ನೌಕೆ ಗೊರ್ಷಕೊವ್‌ನ ವೆಚ್ಚ ಏರಿಕೆಯನ್ನು ಒಪ್ಪಿಕೊಂಡಿದ್ದೇಕೆ ಎನ್ನುವುದನ್ನು ಬಹಿರಂಗಗೊಳಿಸಿ:ಸಿಐಸಿ

ವಾರ್ತಾಭಾರತಿವಾರ್ತಾಭಾರತಿ21 May 2017 7:43 PM IST
share
ವಿಮಾನವಾಹಕ ನೌಕೆ ಗೊರ್ಷಕೊವ್‌ನ ವೆಚ್ಚ ಏರಿಕೆಯನ್ನು ಒಪ್ಪಿಕೊಂಡಿದ್ದೇಕೆ ಎನ್ನುವುದನ್ನು ಬಹಿರಂಗಗೊಳಿಸಿ:ಸಿಐಸಿ

ಹೊಸದಿಲ್ಲಿ,ಮೇ 21: ರಷ್ಯಾದಿಂದ ನವೀಕೃತ ವಿಮಾನ ವಾಹಕ ನೌಕೆ ಅಡ್ಮಿರಲ್ ಗೊರ್ಷಕೊವ್ ಅನ್ನು ನಿಗದಿಯಾಗಿದ್ದ ಬೆಲೆಗಿಂತ ಹೆಚ್ಚಿನ ಮೊತ್ತಕ್ಕೆ ಭಾರತವು ಒಪ್ಪಿಕೊಂಡಿ ದ್ದೇಕೆ ಎನ್ನುವುದನ್ನು ಬಹಿರಂಗಗೊಳಿಸಬೇಕು ಎನ್ನುವುದನ್ನು ಕೇಂದ್ರ ಮಾಹಿತಿ ಆಯೋಗ (ಸಿಐಸಿ)ವು ಎತ್ತಿ ಹಿಡಿದಿದೆ. ಅಲ್ಲದೆ ಹೊಸ ಯುದ್ಧನೌಕೆಯನ್ನು ಖರೀದಿಸುವ ಬದಲಿಗೆ ನವೀಕೃತ ನೌಕೆಯನ್ನು ದೇಶವು ಆಯ್ಕೆ ಮಾಡಿಕೊಂಡಿದ್ದೇಕೆ ಎನ್ನುವುದನ್ನು ಬಹಿರಂಗ ಗೊಳಿಸುವಂತೆ ಅದು ರಕ್ಷಣಾ ಸಚಿವಾಲಯಕ್ಕೂ ನಿರ್ದೇಶ ನೀಡಿದೆ.

ಭಾರತೀಯ ನೌಕಾಪಡೆಗೆ ಸೇರ್ಪಡೆಗೊಂಡ ಬಳಿಕ ಐಎನ್‌ಎಸ್ ವಿಕ್ರಮಾದಿತ್ಯ ಎಂದು ನಾಮಕರಣಗೊಂಡಿರುವ ರಷ್ಯದ ಅಡ್ಮಿರಲ್ ಗೊರ್ಷಕೊವ್ ಅನ್ನು 974 ಮಿ.ಡಾ. ಗಳಿಗೆ ಖರೀದಿಸುವ ಒಪ್ಪಂದಕ್ಕೆ 2004ರಲ್ಲಿ ಆಗಿನ ಎನ್‌ಡಿಎ ಸರಕಾರವು ಸಹಿ ಹಾಕಿತ್ತು. ರಷ್ಯಾ ಅಂತಿಮವಾಗಿ 2010ರಲ್ಲಿ ಈ ಮೊತ್ತವನ್ನು 2.35 ಶತಕೋಟಿ ಡಾ.ಗಳಿಗೆ ಹೆಚ್ಚಿಸಿತ್ತು.

ಪರಿವರ್ತನೆ ಮತ್ತು ನವೀಕರಣ ವೆಚ್ಚಗಳು ಸೇರಿದಂತೆ ಈಗ 30 ವರ್ಷಗಳಷ್ಟು ಹಳೆಯದಾಗಿರುವ ನೌಕೆಯ ಮೇಲೆ ಮಾಡಲಾಗಿರುವ ‘ನಿವ್ವಳ ಅಂತಿಮ ವೆಚ್ಚ ’ವನ್ನು ಹಾಗೂ ಭಾರತದಿಂದ ಹಣ ಪಾವತಿಯ ದಿನಾಂಕಗಳನ್ನು ಬಹಿರಂಗಗೊಳಿಸುವಂತೆ ಆಯೋಗವು ಭಾರತೀಯ ನೌಕಾಪಡೆಗೆ ನಿರ್ದೇಶ ನಿಡಿದೆ.

ಈ ಕುರಿತ ಮಾಹಿತಿಗಳನ್ನು ರಕ್ಷಣಾ ಸಚಿವಾಲಯವು ಒದಗಿಸಬೇಕಾಗುತ್ತದೆ ಎಂದು ಹೇಳುವ ಮೂಲಕ ಆಯೋಗದ ದಾರಿ ತಪ್ಪಿಸಲು ನೌಕಾಪಡೆಯು ಪ್ರಯತ್ನಿಸುತ್ತಿದ್ದರೆ, ನೌಕೆಗೆ ಸಂಬಂಧಿಸಿದ ಎಲ್ಲ ಕಡತಗಳು ನೌಕಾಪಡೆಯ ಕೇಂದ್ರ ಕಚೇರಿಯಲ್ಲಿವೆ ಮತ್ತು ವಿವರಗಳನ್ನು ಬಹಿರಂಗಗೊಳಿಸುವಂತೆ ಅದಕ್ಕೆ ಸೂಚಿಸಲಾಗಿದೆ ಎಂದು ರಕ್ಷಣಾ ಸಚಿವಾಲಯವು ಸ್ಪಷ್ಟಪಡಿಸಿತ್ತು.

ರಷ್ಯದ ಬೇಡಿಕೆಯಂತೆ ವೆಚ್ಚ ಪರಿಷ್ಕರಣೆಗೆ ಒಪ್ಪಿಗೆಗೆ ಸಂಬಂಧಿಸಿದ ಕಡತ ಟಿಪ್ಪಣಿ ಗಳು, ಪತ್ರ ವ್ಯವಹಾರಗಳು ಮತ್ತು ದಾಖಲೆಗಳನ್ನು ಬಹಿರಂಗಗೊಳಿಸುವಂತೆ ಕೇಂದ್ರ ಮಾಹಿತಿ ಆಯುಕ್ತ ಅಮಿತಾವ್ ಭಟ್ಟಾಚಾರ್ಯ ಅವರು ನೌಕಾಪಡೆಗೆ ನಿರ್ದೇಶ ನೀಡಿ ದ್ದಾರೆ.

44,500 ಟನ್ ತೂಕದ ಈ ವಿಮಾನ ವಾಹಕ ನೌಕೆಯ ಖರೀದಿಗೆ ಸಂಬಂಧಿಸಿದಂತೆ ಹಲವಾರು ಮಾಹಿತಿಗಳನ್ನು ಕೋರಿ ಮಾಹಿತಿ ಹಕ್ಕು ಕಾರ್ಯಕರ್ತ ಸುಭಾಷ್ ಅಗರವಾಲ್ ಅವರು ಆರ್‌ಟಿಐ ಕಾಯ್ದೆಯಡಿ ಅರ್ಜಿ ಸಲ್ಲಿಸಿದ್ದರು.

ಅಂದಿನ ಸೋವಿಯತ್ ರಷ್ಯಾ 1987,ಡಿ.20ರಂದು ಅಡ್ಮಿರಲ್ ಗೊರ್ಷಕೊವ್ ಅನ್ನು ಕಾರ್ಯಾರಂಭಗೊಳಿಸಿತ್ತು ಮತ್ತು 1996ರಲ್ಲಿ ಅದನ್ನು ಸೇವೆಯಿಂದ ಹಿಂದೆಗೆದು ಕೊಂಡಿತ್ತು.

ಈ ನೌಕೆಯು 30ಕ್ಕೂ ಅಧಿಕ ಯುದ್ಧ ವಿಮಾನಗಳನ್ನು ಹೊತ್ತೊಯ್ಯುವ ಸಾಮರ್ಥ್ಯ ಹೊಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X