Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಯಕ್ಷಗಾನವು ರಾಮಯಾಣ, ಮಹಾಭಾರತವನ್ನು ತನಗೆ...

ಯಕ್ಷಗಾನವು ರಾಮಯಾಣ, ಮಹಾಭಾರತವನ್ನು ತನಗೆ ಬೇಕಾದ ರೀತಿಯಲ್ಲಿ ಪುನರ್ ಕಟ್ಟಿಕೊಂಡಿದೆ: ಪುರುಷೋತ್ತಮ ಬಿಳಿಮಲೆ

ವಾರ್ತಾಭಾರತಿವಾರ್ತಾಭಾರತಿ21 May 2017 9:14 PM IST
share
ಯಕ್ಷಗಾನವು ರಾಮಯಾಣ, ಮಹಾಭಾರತವನ್ನು ತನಗೆ ಬೇಕಾದ ರೀತಿಯಲ್ಲಿ ಪುನರ್ ಕಟ್ಟಿಕೊಂಡಿದೆ: ಪುರುಷೋತ್ತಮ ಬಿಳಿಮಲೆ

ಉಡುಪಿ, ಮೇ 21: ಯಕ್ಷಗಾನವು ರಾಮಯಾಣ ಮತ್ತು ಮಹಾಭಾರತ ವನ್ನು ತನಗೆ ಬೇಕಾದ ರೀತಿಯಲ್ಲಿ ಪುನರ್ ಕಟ್ಟಿಕೊಂಡಿದೆ. ಒಂದು ಪಠ್ಯವನ್ನು ನೂರಾರು ಪಠ್ಯಗಳಾಗಿ ಒಡೆದು ಕಾಲ, ಸಮುದಾಯ, ಪ್ರದೇಶಕ್ಕೆ ಅನುಗುಣವಾಗಿ ಪುನರ್‌ ಸೃಷ್ಠಿಸಿಕೊಂಡ ಮಹಾಲೋಕ ಯಕ್ಷಗಾನ. ಇದನ್ನು ನಾವು ಜಗತ್ತಿನ ಇತರ ಭಾಗಗಳಿಗೆ ಬೌದ್ಧಿಕವಾಗಿ ಹೇಳುವಂತಹ ಕಾಲ ಸನ್ನಿಹಿತವಾಗಿದೆ ಎಂದು ಹಿರಿಯ ಜಾನಪದ ವಿದ್ವಾಂಸ ಪುರುಷೋತ್ತಮ ಬಿಳಿಮಲೆ ಹೇಳಿದ್ದಾರೆ.

ಉಡುಪಿ ಯಕ್ಷಗಾನ ಕಲಾರಂಗದ ವತಿಯಿಂದ ಉಡುಪಿ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ರವಿವಾರ ಆಯೋಜಿಸಲಾದ ಅಭಿನಂದನಾ ಸಮಾರಂಭದಲ್ಲಿ ತಲ್ಲೂರು ಕನಕಾ ಅಣ್ಣಯ್ಯ ಶೆಟ್ಟಿ ಸ್ಮಾರಕ ‘ಯಕ್ಷಗಾನ ವಿದ್ವಾಂಸ ಪ್ರಶಸ್ತಿ’ಯನ್ನು ಸ್ವೀಕರಿಸಿ ಅವರು ಮಾತನಾಡುತಿದ್ದರು.

ಯಕ್ಷಗಾನವು ಒಂದು ಕತೆಯನ್ನು ಮತ್ತೆ ಮತ್ತೆ ಕಟ್ಟುತ್ತಿರುತ್ತದೆ. ಪಠ್ಯಗಳ ವಿಸ್ತರಣೆಗೆ ಯಕ್ಷಗಾನ ಬಹಳ ದೊಡ್ಡ ಕೊಡುಗೆ ನೀಡಿದೆ. ತಮಿಳುನಾಡು, ಆಂಧ್ರಪ್ರದೇಶ, ಹಿಮಾಲಯದ ತಪ್ಪಲಿನ ಪ್ರದೇಶದಲ್ಲಿಯೂ ರಾಮಾಯಣ ಹಾಗೂ ಮಹಾ ಭಾರತವನ್ನು ಪುನರ್‌ಕಟ್ಟಿಕೊಳ್ಳಲಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.

ಯಕ್ಷಗಾನವನ್ನು ಕಲಾವಿದರು ದೊಡ್ಡ ಮಟ್ಟದಲ್ಲಿ ಬೆಳೆಸಿದ್ದಾರೆ. ಯಕ್ಷಗಾನ ಕ್ಷೇತ್ರದಲ್ಲಿ ಕೆಲಸ ಮಾಡುವ ವಿದ್ವಾಂಸರು ಈ ಕಲೆಯ ಮಹತ್ವವನ್ನು ವಿಶ್ವ ವೇದಿಕೆಯಲ್ಲಿ ಹೇಳಬೇಕಾಗಿದೆ. ಯಕ್ಷಗಾನಕ್ಕೆ ಎಲ್ಲರನ್ನು ಸೆಳಯುವ ಶಕ್ತಿ ಇದೆ. ಅದನ್ನು ಮುಟ್ಟಿಸುವ ಕೆಲಸ ನಾವು ಮಾಡಬೇಕು ಎಂದು ಅವರು ತಿಳಿಸಿದರು.

ಅಧ್ಯಕ್ಷತೆಯನ್ನು ಹಿರಿಯ ಸಂಸ್ಕೃತಿ ಚಿಂತಕ ಏರ್ಯ ಲಕ್ಷ್ಮಿನಾರಾಯಣ ಆಳ್ವ ವಹಿಸಿದ್ದರು. ಸಾಹಿತ್ಯ ವಿಮರ್ಶಕ ತಾಳ್ತಜೆ ವಸಂತ ಕುಮಾರ್ ಅಭಿನಂದನಾ ಭಾಷಣ ಮಾಡಿದರು. ತಲ್ಲೂರು ಫ್ಯಾಮಿಲಿ ಟ್ರಸ್ಟ್‌ನ ತಲ್ಲೂರು ಶಿವರಾಮ ಶೆಟ್ಟಿ, ಗಿರಿಜಾ ತಲ್ಲೂರು ಮುಖ್ಯ ಅತಿಥಿಗಳಾಗಿದ್ದರು.

ಕಲಾರಂಗದ ಉಪಾಧ್ಯಕ್ಷರಾದ ಗಂಗಾಧರ ರಾವ್, ಎಸ್.ವಿ.ಭಟ್ ಉಪಸ್ಥಿ ತರಿದ್ದರು. ಅಧ್ಯಕ್ಷ ಗಣೇಶ್ ರಾವ್ ಸ್ವಾಗತಿಸಿದರು. ನಾರಾಯಣ ಹೆಗಡೆ ಪ್ರಶಸ್ತಿ ಪತ್ರ ವಾಚಿಸಿದರು. ಕಾರ್ಯದರ್ಶಿ ಮುರಲಿ ಕಡೆಕಾರ್ ಕಾರ್ಯಕ್ರಮ ನಿರೂಪಿಸಿದರು.

ಯಕ್ಷಗಾನದ ಬಗ್ಗೆ ಹಿಂದಿಯಲ್ಲಿ ಪುಸ್ತಕ ರಚನೆ: ಯಕ್ಷಗಾನದ ಕುರಿತು ಹಿಂದಿಯಲ್ಲಿ ಪುಸ್ತಕ ರಚಿಸುವ ಕೆಲಸವನ್ನು ನಾನು ಮಾಡುತ್ತಿದ್ದೇನೆ. ಉತ್ತರ ಭಾರತದವರಿಗೆ ಯಕ್ಷಗಾನದ ಬಗ್ಗೆ ಏನು ತಿಳಿದಿಲ್ಲ. ಇಂಗ್ಲಿಷ್‌ನಲ್ಲಿ ಯಕ್ಷಗಾನ ಕುರಿತು ಈಗಾಗಲೇ ಪುಸ್ತಕ ರಚಿಸಲಾಗಿದೆ. ಆದರೆ ಹಿಂದಿಯಲ್ಲಿ ಈವರೆಗೆ ಬಂದಿಲ್ಲ. ಈ ಪ್ರಶಸ್ತಿಯಲ್ಲಿ ನೀಡಿರುವ ಹಣವನ್ನು ಹಿಂದಿಯಲ್ಲಿ ಹೊರತರುವ ಪುಸ್ತಕಕ್ಕೆ ವಿನಿಯೋಗಿಸಲಾಗುವುದು ಎಂದು ಪುರುಷೋತ್ತಮ ಬಿಳಿಮಲೆ ತಿಳಿಸಿದರು.

ಯಕ್ಷಗಾನ ನನ್ನ ಉಸಿರು. ನಾನು ಯಕ್ಷಗಾನ ಕಲಿತದ್ದು ಕಲಾವಿದನಾಗಬೇಕೆಂಬ ಕಾರಣಕ್ಕೆ ಅಲ್ಲ. ಕನ್ನಡೇತರರಿಗೆ ಯಕ್ಷಗಾನದ ಪರಿಚಯ ಮಾಡುವ ಉದ್ದೇಶದಿಂದ ಯಕ್ಷಗಾನದ ಜ್ಞಾನ ಸಂಪಾದಿಸಿದೆ ಎಂದು ಅವರು ಹೇಳಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X