Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಖಾಸಗಿ ಸಹಭಾಗಿತ್ವದಲ್ಲಿ...

ಖಾಸಗಿ ಸಹಭಾಗಿತ್ವದಲ್ಲಿ ಕೌಶಲ್ಯಾಭಿವೃದ್ಧಿ ವಿವಿ: ಸಚಿವ ರಾಯರೆಡ್ಡಿ

ವಾರ್ತಾಭಾರತಿವಾರ್ತಾಭಾರತಿ21 May 2017 9:24 PM IST
share
ಖಾಸಗಿ ಸಹಭಾಗಿತ್ವದಲ್ಲಿ ಕೌಶಲ್ಯಾಭಿವೃದ್ಧಿ ವಿವಿ: ಸಚಿವ ರಾಯರೆಡ್ಡಿ

ಬೆಂಗಳೂರು, ಮೇ 21: ನಿರುದ್ಯೋಗ ನಿವಾರಣೆ ದೃಷ್ಟಿಯಿಂದ ಪ್ರಸಕ್ತ ಸಾಲಿನಲ್ಲೆ ಕರ್ನಾಟಕ ರಾಜ್ಯದಲ್ಲಿ ಕೌಶಲ್ಯಾಭಿವೃದ್ಧಿಗಾಗಿ ನೂತನ ಕೌಶಲ್ಯ ವಿಶ್ವವಿದ್ಯಾಲಯವನ್ನು ಆರಂಭಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಘೋಷಿಸಿದ್ದಾರೆ.

ರವಿವಾರ ರಾಮಯ್ಯ ಸಮೂಹ ಸಂಸ್ಥೆಗಳ ನೂತನ ಲಾಂಛನ, ಸಂಸ್ಥೆಯ ಸಂಸ್ಥಾಪಕ ರಾಮಯ್ಯನವರ ಪುತ್ಥಳಿ ಅನಾವರಣ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಕೌಶಲ್ಯಾಭಿವೃದ್ಧಿ ಬಹಳ ಮುಖ್ಯ. ಹೀಗಾಗಿ ಕೌಶಲ್ಯಾಭಿವೃದ್ಧಿಗೆ ಖಾಸಗಿ ಸಹಭಾಗಿತ್ವದಲ್ಲಿ ಪ್ರತ್ಯೇಕ ವಿವಿ ಆರಂಭಿಸಲಾಗುವುದು ಎಂದರು.

ಕೌಶಲ್ಯಾಭಿವೃದ್ಧಿಗೆ ನೂತನ ಕೌಶಲ್ಯ ವಿವಿ ಕಾರ್ಯಾರಂಭ ಸಂಬಂಧ ಈಗಾಗಲೇ ಟಾಟಾ ಸಂಸ್ಥೆಯೊಂದಿಗೆ ಎರಡು-ಮೂರು ಸುತ್ತಿನ ಸಮಾಲೋಚನೆ ನಡೆಸಲಾಗಿದೆ ಎಂದ ಅವರು, ಎಲ್ಲವೂ ಅಂತಿಮಗೊಂಡರೆ ಪ್ರಸಕ್ತ ಸಾಲಿನಿಂದಲೇ ನೂತನ ವಿಶ್ವ ವಿದ್ಯಾಲಯ ಕಾರ್ಯಾರಂಭ ಮಾಡಲಾಗಿದೆ ಎಂದರು.

 ರಾಜ್ಯದಲ್ಲಿ 217 ಎಂಜಿನಿಯರಿಂಗ್ ಕಾಲೇಜುಗಳಿದ್ದು, 4 ಲಕ್ಷ ವಿದ್ಯಾರ್ಥಿಗಳು ಎಂಜಿನಿಯರಿಂಗ್ ಕಲಿಯುತ್ತಿದ್ದಾರೆ. ಆ ಪೈಕಿ ವಾರ್ಷಿಕ 80ಸಾವಿರ ಎಂಜಿನಿಯರಿಂಗ್ ಪದವೀಧರರು ಹೊರ ಬರುತ್ತಿದ್ದಾರೆ. ಆದರೆ, ಶೇ.4ರಿಂದ 5ರಷ್ಟು ಮಂದಿಗಷ್ಟೇ ಉದ್ಯೋಗ ಸಿಗುತ್ತಿದೆ. ಉಳಿದವರು ನಿರುದ್ಯೋಗಿಗಳಾಗುತ್ತಿದ್ದಾರೆಂದು ಹೇಳಿದರು.

ಎಲ್ಲರಿಗೂ ಉದ್ಯೋಗ ಒದಗಿಸಲು ಕೌಶಲ್ಯಾಭಿವೃದ್ಧಿಗೆ ಹೆಚ್ಚಿನ ಗಮನ ನೀಡಬೇಕಿದೆ. ಮಾತ್ರವಲ್ಲ ಎಲ್ಲ ವರ್ಗದವರಿಗೂ ಗುಣಮಟ್ಟದ ಶಿಕ್ಷಣ ನೀಡಲು ಕ್ರಮ ಕೈಗೊಳ್ಳಬೇಕೆಂದ ಅವರು, ಕೇಂದ್ರ ಸರಕಾರ ಉನ್ನತ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ನೀಡಬೇಕೆಂದು ಆಗ್ರಹಿಸಿದರು.

ಬಡವರಿಗೆ ಆದ್ಯತೆ ನೀಡಿ: ಬಡ-ಮಧ್ಯಮ ವರ್ಗದವರಿಗೆ ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ರಾಮಯ್ಯ ಸಂಸ್ಥೆ ಸೇವೆ ಅನನ್ಯ. ಈ ಸಂಸ್ಥೆ ಬಡವರಿಗೆ ಉತ್ತಮ ಶಿಕ್ಷಣ ಮತ್ತು ಆರೋಗ್ಯ ಸೇವೆ ಕಲ್ಪಿಸಲು ಮತ್ತಷ್ಟು ಆಸ್ಥೆ ವಹಿಸಬೇಕೆಂದು ರಾಯರೆಡ್ಡಿ ಮನವಿ ಮಾಡಿದರು.

 ಖಾಸಗಿ ಸಂಸ್ಥೆಯವರು ಬಂಡವಾಳ ಹೂಡಿ ಶಿಕ್ಷಣ ಸಂಸ್ಥೆ ಆರಂಭಿಸಿರುತ್ತಾರೆ. ಅವರ ಕಷ್ಟಗಳ ಬಗ್ಗೆ ನಮಗೂ ಗೊತ್ತಿದೆ. ಆದರೂ, ಬಡವರು ಮತ್ತು ಆಶಕ್ತರಿಗೆ ನೆರವು ನೀಡಬೇಕು. ಆ ನಿಟ್ಟಿನಲ್ಲಿ ಎಂ.ಎಸ್.ರಾಮಯ್ಯ ಸಮೂಹ ಸಂಸ್ಥೆಗಳು ಬಡ ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸಹಾಯಾಸ್ತ ಚಾಚಬೇಕೆಂದು ಕೋರಿದರು.

ಉನ್ನತ ಶಿಕ್ಷಣ ಕ್ಷೇತ್ರಕ್ಕೆ ರಾಜ್ಯ ಸರಕಾರ ವಿಶೇಷ ಆದ್ಯತೆ ನೀಡಿದ್ದು, ಒಟ್ಟಾರೆ 24 ಸಾವಿರ ಕೋಟಿ ರೂ.ಅನುದಾನ ಮೀಸಲಿಟ್ಟಿದೆ. ಅಲ್ಲದೆ, ಅಂಬೇಡ್ಕರ್ ಸ್ಕೂಲ್ ಆಫ್ ಎಕಾಮಿಕ್ಸ್ ಆರಂಭಿಸುತ್ತಿದೆ. ಅದೇ ರೀತಿಯಲ್ಲಿ ಕೇಂದ್ರ ಸರಕಾರ ಶಿಕ್ಷಣ ಕೇಂದ್ರಕ್ಕೆ ಹೆಚ್ಚಿನ ಅನುದಾನ ಒದಗಿಸಬೇಕು ಎಂದರು.

‘ರಾಜ್ಯದ ಸರಕಾರಿ ಕಾಲೇಜುಗಳಲ್ಲಿ ಬಿಎ, ಬಿಕಾಂ, ಬಿಎಸ್ಸಿ ಸೇರಿದಂತೆ ಪದವಿ ವಿದ್ಯಾರ್ಥಿಗಳಿಗೆ ಜುಲೈನಲ್ಲಿ ಉಚಿತವಾಗಿ ಲ್ಯಾಪ್‌ಟಾಪ್ ನೀಡಲಾಗುವುದು. ಅಲ್ಲದೆ, ಉಚಿತ ವೈ-ಫೈ ಹಾಗೂ ಗ್ರಂಥಾಲಯ ಸೇರಿದಂತೆ ಮೂಲಸೌಲಭ್ಯ ಕಲ್ಪಿಸಲು ಒತ್ತು ನೀಡಲಾಗುತ್ತಿದೆ’

-ಬಸವರಾಜ ರಾಯರೆಡ್ಡಿ ಉನ್ನತ ಶಿಕ್ಷಣ ಸಚಿವ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X