Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೋಲ್‌ಮಾಲ್: ಮಾಜಿ ಕಲ್ಲಿದ್ದಲು...

ಕೋಲ್‌ಮಾಲ್: ಮಾಜಿ ಕಲ್ಲಿದ್ದಲು ಕಾರ್ಯದರ್ಶಿ, ಇಬ್ಬರು ಅಧಿಕಾರಿಗಳಿಗೆ ಎರಡು ವರ್ಷ ಜೈಲುಶಿಕ್ಷೆ

ವಾರ್ತಾಭಾರತಿವಾರ್ತಾಭಾರತಿ22 May 2017 6:47 PM IST
share
ಕೋಲ್‌ಮಾಲ್: ಮಾಜಿ ಕಲ್ಲಿದ್ದಲು ಕಾರ್ಯದರ್ಶಿ, ಇಬ್ಬರು ಅಧಿಕಾರಿಗಳಿಗೆ ಎರಡು ವರ್ಷ ಜೈಲುಶಿಕ್ಷೆ

ಹೊಸದಿಲ್ಲಿ,ಮೇ 22: ಮಧ್ಯಪ್ರದೇಶದ ಖಾಸಗಿ ಕಂಪನಿಯೊಂದಕ್ಕೆ ಕಲ್ಲಿದ್ದಲು ಗಣಿ ಹಂಚಿಕೆಗೆ ಸಂಬಂಧಿಸಿದ ಕಲ್ಲಿದ್ದಲು ಹಗರಣ ಪ್ರಕರಣವೊಂದರಲ್ಲಿ ಮಾಜಿ ಕಲ್ಲಿದ್ದಲು ಕಾರ್ಯದರ್ಶಿ ಎಚ್.ಸಿ.ಗುಪ್ತಾ ಮತ್ತು ಇತರ ಇಬ್ಬರು ಮಾಜಿ ಐಎಎಸ್ ಅಧಿಕಾರಿಗಳಾದ ಕೆ.ಎಸ್.ಕ್ರೋಫಾ ಮತು ಕೆ.ಸಿ.ಸಮಾರಿಯಾ ಅವರಿಗೆ ಸೋಮವಾರ ಇಲ್ಲಿಯ ವಿಶೇಷ ಸಿಬಿಐ ನ್ಯಾಯಾಲಯವು ತಲಾ ಎರಡು ವರ್ಷಗಳ ಜೈಲುಶಿಕ್ಷೆಯನ್ನು ವಿಧಿಸಿದೆ. ಇದು ಹಿರಿಯ ಅಧಿಕಾರಿಗಳನ್ನು ದೋಷಿಗಳೆಂದು ಘೋಷಿಸಿರುವ ಮೊದಲ ಕಲ್ಲಿದ್ದಲು ಹಗರಣ ಪ್ರಕರಣವಾಗಿದೆ.

ಜೈಲುಶಿಕ್ಷೆಯ ಜೊತೆಗೆ ಈ ಮೂವರಿಗೂ ತಲಾ ಒಂದು ಲಕ್ಷ ರೂ.ಗಳ ದಂಡವನ್ನೂ ವಿಧಿಸಲಾಗಿದೆ.
ಇವರ ಜೊತೆಗೆ ಖಾಸಗಿ ಕಂಪನಿ ಕಮಲ್ ಸ್ಪಾಂಜ್ ಸ್ಟೀಲ್ ಆ್ಯಂಡ್ ಪವರ್ ಲಿ.ಗೆ ಒಂದು ಕೋ.ರೂ.ದಂಡವನ್ನು ವಿಧಿಸಿರುವ ನ್ಯಾಯಾಲಯವು, ಅದರ ಆಡಳಿತ ನಿರ್ದೇಶಕ ಪವನ್ ಕುಮಾರ್ ಅಹ್ಲುವಾಲಿಯಾಗೆ ಮೂರು ವರ್ಷಗಳ ಜೈಲು ಶಿಕ್ಷೆ ಮತ್ತು 30 ಲ.ರೂ.ಗಳ ದಂಡ ವಿಧಿಸಿದೆ.

ಎಲ್ಲ ದೋಷಿಗಳಿಗೂ ಉಚ್ಚ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಲು ಅನುಕೂಲ ವಾಗುವಂತೆ ಜಾಮೀನು ಮಂಜೂರು ಮಾಡಲಾಗಿದೆ.
ಮಧ್ಯಪ್ರದೇಶದ ಥೇಸ್ಗೋರಾ-ಬಿ ರುದ್ರಪುರಿ ಕಲ್ಲಿದ್ದಲು ಗಣಿ ಹಂಚಿಕೆಯಲ್ಲಿನ ಅಕ್ರಮಗಳಿಗಾಗಿ ಗುಪ್ತಾ, ಕ್ರೋಫಾ ಮತ್ತು ಸಮಾರಿಯಾ ತಪ್ಪಿತಸ್ಥರೆಂದು ನ್ಯಾಯಾಲಯ ವು ಮೇ 19ರಂದು ಘೋಷಿಸಿತ್ತು. ವಂಚನೆ ಮತ್ತು ಇತರ ಅಪರಾಧಗಳಿಗಾಗಿ ಕಂಪನಿ ಮತ್ತು ಅಹ್ಲುವಾಲಿಯಾರನ್ನೂ ತಪ್ಪಿತಸ್ಥರೆಂದು ಅದು ಎತ್ತಿ ಹಿಡಿದಿತ್ತು. ಆದರೆ ಚಾರ್ಟರ್ಡ್ ಅಕೌಂಟಂಟ್ ಅಮಿತ್ ಗೋಯಲ್ ಅವರನ್ನು ನ್ಯಾಯಾಲಯವು ಖುಲಾಸೆಗೊಳಿಸಿತ್ತು.

ಸಿಬಿಐ 2012,ಅಕ್ಟೋಬರ್‌ನಲ್ಲಿ ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಿತ್ತಾದರೂ 2014,ಮಾ.27ರಂದು ಮುಕ್ತಾಯ ವರದಿಯನ್ನು ಸಲ್ಲಿಸಿತ್ತು. 2014,ಅ.13ರಂದು ಈ ವರದಿಯನ್ನು ತಿರಸ್ಕರಿಸಿದ್ದ ನ್ಯಾಯಾಲಯವು ಗುಪ್ತಾ ಮತ್ತು ಇತರ ಆರೋಪಿಗಳಿಗೆ ಸಮನ್ಸ್ ಹೊರಡಿಸಿತ್ತು.

ಕಂಪನಿಯು ತನ್ನ ನಿವ್ವಳ ವೌಲ್ಯ ಮತ್ತು ಹಾಲಿ ಸಾಮರ್ಥ್ಯದ ಬಗ್ಗೆ ತಪ್ಪು ಮಾಹಿತಿ ಗಳನ್ನು ನೀಡಿದೆ ಎಂದು ಆರೋಪಿಸಿದ್ದ ಸಿಬಿಐ, ಕಂಪನಿಗೆ ಕಲ್ಲಿದ್ದಲು ಗಣಿಯನ್ನು ಮಂಜೂರು ಮಾಡುವಂತೆ ರಾಜ್ಯ ಸರಕಾರವು ಶಿಫಾರಸು ಮಾಡಿರಲಿಲ್ಲ ಎಂದು ಹೇಳಿತ್ತು.

ಕಲ್ಲಿದ್ದಲು ಗಣಿಗಾರಿಕೆ ಹಕ್ಕುಗಳ ಕನಿಷ್ಠ 40 ಪ್ರಕರಣಗಳಿಗೆ ಒಪ್ಪಿಗೆ ನೀಡಿದ್ದ ಪರಿಶೀಲನಾ ಸಮಿತಿಯ ಅಧ್ಯಕ್ಷರಾಗಿದ್ದ ಗುಪ್ತಾ ಈ ಬೃಹತ್ ಹಗರಣದಲ್ಲಿ ಪ್ರಮುಖ ಆರೋಪಿಯಾಗಿದ್ದಾರೆ ಎಂದು ಆರೋಪಿಸಲಾಗಿತ್ತು.

ಕಳೆದ ವರ್ಷದ ಅ.14ರಂದು ಆರೋಪಿಗಳ ವಿರುದ್ಧ ಆರೋಪಗಳನ್ನು ರೂಪಿಸಿದ್ದ ನ್ಯಾಯಾಲಯವು ಗುಪ್ತಾ ಅವರು ಕಲ್ಲಿದ್ದಲು ಸಚಿವಾಲಯವನ್ನೂ ಹೊಂದಿದ್ದ ಆಗಿನ ಪ್ರಧಾನಿ ಮನಮೋಹನ ಸಿಂಗ್ ಅವರನ್ನು ಕಲ್ಲಿದ್ದಲು ಗಣಿ ಹಂಚಿಕೆ ವಿಷಯದಲ್ಲಿ 'ಕತ್ತಲಲ್ಲಿರಿಸಿದ್ದರು ' ಹಾಗೂ ಕಾನೂನು ಮತ್ತು ತನ್ನಲ್ಲಿರಿಸಲಾಗಿದ್ದ ನಂಬಿಕೆಯನ್ನು ಉಲ್ಲಂಘಿಸಿದ್ದರು ಎಂಬ ಅಭಿಪ್ರಾಯ ವ್ಯಕ್ತಪಡಿಸಿತ್ತು.

ಗುಪ್ತಾ ವಿರುದ್ಧ ಇನ್ನೂ 10 ಪ್ರತ್ಯೇಕ ಕಲ್ಲಿದ್ದಲು ಹಗರಣ ಪ್ರಕರಣಗಳು ಬಾಕಿಯಿವೆ. ಈ ಎಲ್ಲ ಪ್ರಕರಣಗಳ ಜಂಟಿ ವಿಚಾರಣೆಯನ್ನು ಕೋರಿ ಅವರು ಸಲ್ಲಿಸಿದ್ದ ಅರ್ಜಿಯನ್ನು ಕಳೆದ ವರ್ಷ ಸರ್ವೋಚ್ಚ ನ್ಯಾಯಾಲಯವು ವಜಾಗೊಳಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X