Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಭಾರತ ಭಯೋತ್ಪಾದನೆಯ ಬಲಿಪಶು:...

ಭಾರತ ಭಯೋತ್ಪಾದನೆಯ ಬಲಿಪಶು: ಅರಬ್-ಇಸ್ಲಾಮಿಕ್-ಅಮೆರಿಕ ಶೃಂಗಸಭೆಯಲ್ಲಿ ಟ್ರಂಪ್

ವಾರ್ತಾಭಾರತಿವಾರ್ತಾಭಾರತಿ22 May 2017 7:16 PM IST
share
ಭಾರತ ಭಯೋತ್ಪಾದನೆಯ ಬಲಿಪಶು: ಅರಬ್-ಇಸ್ಲಾಮಿಕ್-ಅಮೆರಿಕ ಶೃಂಗಸಭೆಯಲ್ಲಿ ಟ್ರಂಪ್

ರಿಯಾದ್, ಮೇ 22: ಭಾರತ ಭಯೋತ್ಪಾದನೆಯ ಬಲಿಪಶುವಾಗಿದೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ ಹಾಗೂ ತಮ್ಮ ನೆಲದಲ್ಲಿ ಭಯೋತ್ಪಾದಕ ಗುಂಪುಗಳು ಆಶ್ರಯ ಪಡೆಯದಂತೆ ಖಾತರಿಪಡಿಸುವಂತೆ ಅವರು ದೇಶಗಳಿಗೆ ಕರೆ ನೀಡಿದ್ದಾರೆ.

ಇಲ್ಲಿ ರವಿವಾರ ಅರಬ್-ಇಸ್ಲಾಮಿಕ್-ಅಮೆರಿಕ ಶೃಂಗಸಭೆಯಲ್ಲಿ ಭಾಷಣ ಮಾಡಿದ ಟ್ರಂಪ್, ‘‘ಯುರೋಪ್‌ನ ದೇಶಗಳೂ ಅವರ್ಣನೀಯ ಭಯಾನಕತೆಯನ್ನು ಸಹಿಸಿಕೊಂಡಿವೆ. ಅದೇ ರೀತಿ ಆಫ್ರಿಕ ಮತ್ತು ದಕ್ಷಿಣ ಅಮೆರಿಕದ ದೇಶಗಳು, ಭಾರತ, ರಶ್ಯ, ಚೀನಾ, ಆಸ್ಟ್ರೇಲಿಯ ಮುಂತಾದ ದೇಶಗಳು ಭಯೋತ್ಪಾದನೆಯ ಬಲಿಪಶುಗಳಾಗಿವೆ’’ ಎಂದು ಹೇಳಿದರು.

ಈ ಶೃಂಗಸಭೆಯಲ್ಲಿ 50 ಮುಸ್ಲಿಮ್ ಬಾಹುಳ್ಯದ ದೇಶಗಳ ನಾಯಕರು ಭಾಗವಹಿಸುತ್ತಿದ್ದಾರೆ.

‘‘ತಮ್ಮ ನೆಲದಲ್ಲಿ ಭಯೋತ್ಪಾದಕರು ಆಶ್ರಯ ಪಡೆಯದಂತೆ ಪ್ರತಿಯೊಂದು ದೇಶ ಖಾತರಿಪಡಿಸಬೇಕು’’ ಎಂದು ಪಾಕಿಸ್ತಾನವನ್ನು ಹೆಸರಿಸದೆ ಅವರು ಹೇಳಿದರು.

ವಿದೇಶಿ ನೆಲದಲ್ಲಿ ತನ್ನ ಚೊಚ್ಚಲ ಭಾಷಣ ಮಾಡಿದ ಟ್ರಂಪ್, ಮಧ್ಯಪ್ರಾಚ್ಯದಿಂದ ಹೊರಹೊಮ್ಮುತ್ತಿರುವ ತೀವ್ರವಾದದ ವಿರುದ್ಧ ಹೋರಾಡುವಂತೆ ಅವರು ಈ ವಲಯದ ದೇಶಗಳಿಗೆ ಕರೆ ನೀಡಿದರು.

ಭಯೋತ್ಪಾದನೆಯ ವಿರುದ್ಧದ ಹೋರಾಟವನ್ನು ‘ಒಳ್ಳೆಯದು ಮತ್ತು ಕೆಟ್ಟದರ ನಡುವಿನ ಸಮರ’ ಎಂದು ಬಣ್ಣಿಸಿದ ಟ್ರಂಪ್, ಅದು ‘ಪಶ್ಚಿಮದ ದೇಶಗಳು ಮತ್ತು ಇಸ್ಲಾಮ್ ವಿರುದ್ಧದ ಹೋರಾಟವಲ್ಲ’ ಎಂದರು.

ಭಯೋತ್ಪಾದನೆಯನ್ನು ಮೂಲೋತ್ಪಾಟನೆಗೊಳಿಸುವ ನಿಟ್ಟಿನಲ್ಲಿ, ಈ ವಲಯದಲ್ಲಿ ಅಮೆರಿಕ ಯಾವ ಪಾತ್ರ ವಹಿಸಬೇಕೆಂಬುದನ್ನು ನಿರ್ಧರಿಸಬೇಕಾದ ಅಗತ್ಯವಿದೆ ಎಂದು ಟ್ರಂಪ್ ಹೇಳಿದರು.

ಉಗ್ರವಾದದ ವಿರುದ್ಧ ಜಾಗತಿಕ ಕೇಂದ್ರಕ್ಕೆ ಚಾಲನೆ

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಸೌದಿ ಅರೇಬಿಯದ ದೊರೆ ಸಲ್ಮಾನ್ ಬಿನ್ ಅಬ್ದುಲಝೀಝ್ ರವಿವಾರ ಉಗ್ರವಾದಿ ಸಿದ್ಧಾಂತದ ವಿರುದ್ಧ ಹೋರಾಡುವ ನೂತನ ಜಾಗತಿಕ ಕೇಂದ್ರವೊಂದನ್ನು ಉದ್ಘಾಟಿಸಿದರು.

ಕೇಂದ್ರದ ಪ್ರಧಾನ ಕಚೇರಿಯು ಸೌದಿ ಅರೇಬಿಯದ ರಾಜಧಾನಿ ರಿಯಾದ್‌ನಲ್ಲಿದ್ದು, ವಿಶೇಷವಾಗಿ ಇಂಟರ್‌ನೆಟ್‌ನಲ್ಲಿ ಮೂಲಭೂತವಾದಿ ಸಿದ್ಧಾಂತದ ವಿರುದ್ಧ ಹೋರಾಡುವುದು ಇದರ ಗುರಿಯಾಗಿದೆ.

ಭಯೋತ್ಪಾದನೆಗೆ ಹಣ ಪೂರೈಕೆ ವಿರುದ್ಧ ಹೋರಾಡುವ ಇನ್ನೊಂದು ಕೇಂದ್ರದ ಸ್ಥಾಪನೆಗಾಗಿ ಅಮೆರಿಕ ಮತ್ತು ಕೊಲ್ಲಿ ಸಹಕಾರ ಮಂಡಳಿ (ಜಿಸಿಸಿ)ಯ ಸದಸ್ಯ ದೇಶಗಳು ರವಿವಾರ ಇನ್ನೊಂದು ಒಪ್ಪಂದಕ್ಕೂ ಸಹಿ ಹಾಕಿವೆ.

ಟ್ರಂಪ್‌ರ 2 ದಿನಗಳ ಇಸ್ರೇಲ್ ಭೇಟಿ ಆರಂಭ

ಟೆಲ್ ಅವೀವ್ (ಇಸ್ರೇಲ್), ಮೇ 22: ಸೌದಿ ಅರೇಬಿಯ ಪ್ರವಾಸವನ್ನು ಮುಗಿಸಿರುವ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಸೋಮವಾರ ಎರಡು ದಿನಗಳ ಇಸ್ರೇಲ್ ಪ್ರವಾಸಕ್ಕಾಗಿ ಟೆಲ್ ಅವೀವ್‌ಗೆ ಆಗಮಿಸಿದ್ದಾರೆ.

ಟ್ರಂಪ್ ಮತ್ತು ಅಮೆರಿಕದ ಪ್ರಥಮ ಮಹಿಳೆ ಮೆಲಾನಿಯಾ ಟ್ರಂಪ್ ಏರ್‌ಫೋರ್ಸ್ ವನ್ ವಿಮಾನದಲ್ಲಿ ಸೌದಿ ಅರೇಬಿಯದಿಂದ ಹೊರಟು ಟೆಲ್ ಅವೀವ್ ಸಮೀದಪ ಲಾಡ್‌ನಲ್ಲಿರುವ ಬೆನ್ ಗುರಿಯಾನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X