Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನಗರದ ಸ್ವಚ್ಛತೆಗೆ ಮತ್ತಷ್ಟು ಯಂತ್ರಗಳ...

ನಗರದ ಸ್ವಚ್ಛತೆಗೆ ಮತ್ತಷ್ಟು ಯಂತ್ರಗಳ ಖರೀದಿ: ಜಾರ್ಜ್

ಯಾಂತ್ರಿಕ ಕಸ ಗುಡಿಸುವ ಯಂತ್ರಗಳ ಲೋಕಾರ್ಪಣೆ

ವಾರ್ತಾಭಾರತಿವಾರ್ತಾಭಾರತಿ22 May 2017 7:55 PM IST
share
ನಗರದ ಸ್ವಚ್ಛತೆಗೆ ಮತ್ತಷ್ಟು ಯಂತ್ರಗಳ ಖರೀದಿ: ಜಾರ್ಜ್

ಬೆಂಗಳೂರು, ಮೇ 22: ನಗರದ ಸ್ವಚ್ಛತೆಗೆ ಮುಖ್ಯಮಂತ್ರಿಗಳ ನಗರೋತ್ಥಾನ ಯೋಜನೆಯ 50 ಕೋಟಿ ರೂ.ಅನುದಾನದಡಿ ಖರೀದಿಸಿರುವ ಯಾಂತ್ರಿಕ ಕಸ ಗುಡಿಸುವ ಎಂಟು ಯಂತ್ರಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಚಾಲನೆ ನೀಡಿದರು.

ಸೋಮವಾರ ಇಲ್ಲಿನ ವಿಧಾನಸೌಧದ ಆವರಣದಲ್ಲಿನ ವೈಭವೊಪೇತ ಮೆಟ್ಟಿಲುಗಳ ಬಳಿ ಏರ್ಪಡಿಸಿದ್ದ ಸರಳ ಸಮಾರಂಭದಲ್ಲಿ ಸಿಎಂ ಸಿದ್ಧರಾಮಯ್ಯ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್, ಮೇಯರ್ ಪದ್ಮಾವತಿ, ಉಪ ಮೇಯರ್ ಆನಂದ್, ಮೇಲ್ಮನೆ ಸದಸ್ಯ ಕೆ.ಗೋವಿಂದರಾಜ್, ಆಯುಕ್ತ ಮಂಜುನಾಥ್ ಪ್ರಸಾದ್ ನೂತನ ಯಂತ್ರಗಳಿಗೆ ಹಸಿರು ನಿಶಾನೆ ತೋರಿಸಿದರು.

ಈ ವೇಳೆ ಮಾತನಾಡಿದ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್, ದೊಡ್ಡ ಗಾತ್ರದ ಯಾಂತ್ರಿಕ ಕಸ ಗುಡಿಸುವ 8 ಯಂತ್ರಗಳು ಮತ್ತು ಸಣ್ಣ ಗಾತ್ರದ ಒಂದು ಯಂತ್ರ ಸೇರಿದಂತೆ ಒಟ್ಟು 9ಕಸ ಗುಡಿಸುವ ಯಂತ್ರಗಳನ್ನು ಖರೀದಿಸಲಾಗಿದೆ ಎಂದರು.

ಒಂದೊಂದು ಯಂತ್ರವೂ ನೂರು ಮಂದಿ ಪೌರಕಾರ್ಮಿಕರು ಮಾಡುವಂತಹ ಕೆಲಸವನ್ನು ಮಾಡುತ್ತದೆ. ನಗರದ ಹೊರ ವರ್ತುಲ ರಸ್ತೆ, ಮೇಲ್ಸೇತುವೆಗಳ ಮೇಲೆ ಈ ಯಂತ್ರಗಳ ಮೂಲಕ ಕಸ ಗುಡಿಸಲಾಗುವುದು. ಒಂದು ಯಂತ್ರ ಪ್ರತಿದಿನ 50 ಕಿ.ಮೀ ಉದ್ದದ ರಸ್ತೆಯನ್ನು ಶುಚಿಗೊಳಿಸುವ ಸಾಮರ್ಥ್ಯ ಹೊಂದಿದೆ ಎಂದು ಮಾಹಿತಿ ನೀಡಿದರು.

ಈ ಯಂತ್ರಗಳ ಮೂಲಕ ಕಸ ಗುಡಿಸುವ ಕಾರ್ಯಾಚರಣೆಯನ್ನು ಗಮನಿಸಿ ಯಶಸ್ವಿಯಾದರೆ ಮತ್ತಷ್ಟು ಯಂತ್ರಗಳನ್ನು ಖರೀದಿ ಮಾಡಲಾಗುವುದು ಎಂದ ಅವರು, ಆರೋಗ್ಯಕರ ಮತ್ತು ಸ್ವಚ್ಛ ನಗರ ನಿರ್ಮಾಣಕ್ಕಾಗಿ ನಗರೋತ್ಥಾನ ಯೋಜನೆಯಡಿ ಈ ಯಂತ್ರಗಳನ್ನು ಖರೀದಿಸಲಾಗಿದೆ ಎಂದು ವಿವರಣೆ ನೀಡಿದರು.

ಪರಿಶೀಲಿಸಿ ಕ್ರಮ: ಈಗಾಗಲೇ ನಾಮಕರಣವಾದ ರಸ್ತೆಗೆ ಕರ್ನಲ್ ನಿರಂಜನ್ ಹೆಸರಿಡುವ ಬಗ್ಗೆ ಅನಗತ್ಯ ಗೊಂದಲ ಸೃಷ್ಟಿಯಾಗಿದ್ದು, ಆ ರಸ್ತೆಗೆ ಸ್ವಾತಂತ್ರ ಹೋರಾಟಗಾರ ಬೆಟ್ಟಸಿದ್ಧಪ್ಪ ಎಂಬವರ ಹೆಸರನ್ನಿಡಲಾಗಿದೆ. ಈ ಸಂಬಂಧ ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು.

ಸ್ವಾತಂತ್ರ್ಯ ಹೋರಾಟಗಾರರ ಹೆಸರಿರುವ ರಸ್ತೆಗೆ ಕರ್ನಲ್ ನಿರಂಜನ್ ಹೆಸರನ್ನಿಡುವ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ, ಸಚಿವ ಕೃಷ್ಣಭೈರೇಗೌಡ, ಮೇಯರ್ ಪದ್ಮಾವತಿಗೆ ಪತ್ರ ಬರೆದಿದ್ದಾರೆ. ಈ ಕುರಿತಂತೆಯೂ ಪರಿಶೀಲಿಸಲಾಗುವುದು ಎಂದು ಪ್ರತಿಕ್ರಿಯಿಸಿದರು.

ಬೆಂಗಳೂರಿಗೆ ಅಂತಾರಾಷ್ಟ್ರೀಯ ಮಾನ್ಯತೆ ಇದ್ದು, ನಗರದ ನೈರ್ಮಲ್ಯ ಕಾಪಾಡಲು ಆದ್ಯತೆ ನೀಡಲಾಗಿದೆ. ನಗರದ ಸ್ವಚ್ಛತೆಗೆ ಯಾಂತ್ರಿಕ ಕಸ ಗುಡಿಸುವ ಯಂತ್ರಗಳನ್ನು ಖರೀದಿಸಿದ್ದು, ಇದರಿಂದ ಸ್ವಚ್ಛತೆ ಕಾಪಾಡಲು ಅನುಕೂಲ. ಅಲ್ಲದೆ, ಯಂತ್ರಗಳಿಗೆ ಕ್ಯಾಮರಾ-ಜಿಪಿಎಸ್ ಅಳವಡಿಸಿದ್ದು, ಎಲ್ಲೆಲ್ಲಿ ಕಸ ಗುಡಿಸಿವೆ ಎಂದು ಗೊತ್ತಾಗಲಿದೆ.

-ಸಿದ್ದರಾಮಯ್ಯ ಮುಖ್ಯಮಂತ್ರಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X