Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಹರ್ಷ ಗೊಯೆಂಕಾ ವಿರುದ್ಧ ಧೋನಿ ಅಭಿಮಾನಿಗಳ...

ಹರ್ಷ ಗೊಯೆಂಕಾ ವಿರುದ್ಧ ಧೋನಿ ಅಭಿಮಾನಿಗಳ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ22 May 2017 11:32 PM IST
share
ಹರ್ಷ ಗೊಯೆಂಕಾ ವಿರುದ್ಧ ಧೋನಿ ಅಭಿಮಾನಿಗಳ ಆಕ್ರೋಶ

ಹೈದರಾಬಾದ್, ಮೇ 22: ರೈಸಿಂಗ್ ಪುಣೆ ಸೂಪರ್ ಜೈಂಟ್ ತಂಡ ಮುಂಬೈ ಇಂಡಿಯನ್ಸ್ ವಿರುದ್ಧ ಐಪಿಎಲ್ ಫೈನಲ್‌ನಲ್ಲಿ ಕೇವಲ ಒಂದು ರನ್‌ನಿಂದ ಸೋತ ಬೆನ್ನಿಗೇ ಪುಣೆ ತಂಡದ ವಿಕೆಟ್‌ಕೀಪರ್-ಬ್ಯಾಟ್ಸ್‌ಮನ್ ಧೋನಿಯ ಕಟ್ಟಾ ಅಭಿಮಾನಿಗಳು ಪುಣೆ ತಂಡದ ಮಾಲಕ ಸಂಜಯ್ ಗೊಯೆಂಕಾರ ಸಹೋದರ ಹರ್ಷ ಗೊಯೆಂಕಾರ ವಿರುದ್ಧ ಟ್ವಿಟರ್‌ನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

 ಹರ್ಷ ಗೊಯೆಂಕಾ ಈ ವರ್ಷದ ಐಪಿಎಲ್‌ನಲ್ಲಿ ಭಾರತದ ಮಾಜಿ ನಾಯಕ ಧೋನಿಯ ವಿರುದ್ಧ ಟೀಕೆಗಳನ್ನು ಮಾಡುವ ಮೂಲಕ ಸುದ್ದಿಯಲ್ಲಿದ್ದರು. ಟೂರ್ನಿಯ ಎರಡನೆ ಲೀಗ್ ಪಂದ್ಯದಲ್ಲಿ ಪುಣೆ ತಂಡ ಮುಂಬೈಯನ್ನು ಮಣಿಸಿದ ಸಂದರ್ಭದಲ್ಲಿ ಗೊಯೆಂಕಾ ಅವರು ಧೋನಿಯ ನಾಯಕತ್ವದ ಬಗ್ಗೆ ಟೀಕೆ ವ್ಯಕ್ತಪಡಿಸಿದ್ದರು. ‘ಸ್ಮಿತ್ ತಾನೊಬ್ಬ ‘ಕಿಂಗ್ ಆಫ್ ಜಂಗಲ್’ ಎಂದು ಸಾಬೀತುಪಡಿಸಿದ್ದಾರೆ. ನಾಯಕನ ಆಟದ ಮೂಲಕ ಧೋನಿಯನ್ನು ಸಂಪೂರ್ಣವಾಗಿ ಮೀರಿಸಿದ್ದಾರೆ. ಸ್ಮಿತ್‌ರನ್ನು ಪುಣೆ ತಂಡದ ನಾಯಕನಾಗಿ ಆಯ್ಕೆ ಮಾಡಿದ್ದು ಉತ್ತಮ ಹೆಜ್ಜೆ ಎಂದು ಗೊಯೆಂಕಾ ಈ ಹಿಂದೆ ಟ್ವೀಟ್ ಮಾಡಿದ್ದರು.

  ಆರ್‌ಪಿಎಸ್ ತಂಡ ಪಂಜಾಬ್ ವಿರುದ್ಧ ತನ್ನ 2ನೆ ಲೀಗ್ ಪಂದ್ಯವನ್ನು ಸೋತಾಗ ಗೊಯೆಂಕಾ ಅವರು ಈ ವರ್ಷ ಆಡುತ್ತಿರುವ ಪುಣೆ ಆಟಗಾರರ ಸ್ಟ್ರೈಕ್‌ರೇಟ್‌ನ್ನು ಸ್ಕ್ರೀನ್‌ಶಾಟ್‌ನಲ್ಲಿ ಹಂಚಿಕೊಂಡಿದ್ದರು. ಮನೋಜ್ ತಿವಾರಿ, ರಹಾನೆ, ಕ್ರಿಸ್ಟಿಯನ್ ಶ್ರೇಷ್ಠ ಸ್ಟ್ರೈಕ್‌ರೇಟ್ ಹೊಂದಿದ್ದಾರೆಂದು ಗೊಯೆಂಕಾ ಟ್ವೀಟ್ ಮಾಡಿದ್ದರು.

ಧೋನಿ ಹಾಲಿ ಚಾಂಪಿಯನ್ ಹೈದರಾಬಾದ್ ವಿರುದ್ಧ ಅಜೇಯ ಅರ್ಧಶತಕ ಬಾರಿಸಿದ್ದ ಸಂದರ್ಭದಲ್ಲಿ ಯು-ಟರ್ನ್ ಹೊಡೆದಿದ್ದ ಗೊಯೆಂಕಾ,‘‘ ಧೋನಿ ಅತ್ಯುತ್ತಮ ಇನಿಂಗ್ಸ್ ಆಡಿದ್ದಾರೆ. ಅವರು ಫಾರ್ಮ್‌ಗೆ ಮರಳಿದ್ದನ್ನು ನೋಡಲು ಸಂತೋಷವಾಗುತ್ತಿದೆ. ಅವರಂತಹ ಉತ್ತಮ ಗೇಮ್ ಫಿನಿಶರ್ ಇಲ್ಲ. ಅವರು ಪುಣೆಗೆ ರೋಚಕ ಗೆಲುವು ತಂದುಕೊಟ್ಟಿದ್ದಾರೆ ಎಂದು ಟ್ವೀಟ್ ಮಾಡಿದ್ದರು.

ಮುಂಬೈ ವಿರುದ್ಧವೇ ಪುಣೆ ತಂಡ ಫೈನಲ್ ಪಂದ್ಯದ ಕೊನೆಯ ಎಸೆತದಲ್ಲಿ ಮುಗ್ಗರಿಸಿದ ತಕ್ಷಣವೇ ಧೋನಿ ಅಭಿಮಾನಿಗಳು ಗೊಯೆಂಕಾರನ್ನು ಟ್ವಿಟರ್‌ನ ಮೂಲಕ ಟೀಕಿಸಲಾರಂಭಿಸಿದ್ದಾರೆ.

‘‘ಗೊಯೆಂಕಾರ ‘ಕಿಂಗ್ ಆಫ್ ಜಂಗಲ್’ ಸ್ಟೀವ್ ಸ್ಮಿತ್‌ರ ಇನಿಂಗ್ಸ್‌ಗೆ ಎರಡು ನಿಮಿಷ ವೌನ ಪ್ರಾರ್ಥನೆ ಮಾಡಬೇಕಾಗಿದೆ’’ ಎಂದು ಧೋನಿಯ ಸಹ ಆಟಗಾರ ಸರ್ ರವೀಂದ್ರ ಜಡೇಜ ಟ್ವೀಟ್ ಮಾಡಿದ್ದಾರೆ.

ಸಂಜೀವ್ ಗೊಯೆಂಕಾ ಹಾಗೂ ಹರ್ಷ ಗೊಯೆಂಕಾ... ನೀವು ಯಾರನ್ನೂ ನೋಯಿಸಬೇಡಿ. ಮಾಡಿದ್ದುಣ್ಣೊ ಮಹರಾಯ ಎಂದು ಇನ್ನೊಬ್ಬ ಧೋನಿ ಅಭಿಮಾನಿ ಟ್ವೀಟ್ ಮಾಡಿದ್ದಾನೆ.

ಇದೀಗ ಕಿಂಗ್ ಆಫ್ ಜಂಗಲ್(ಕಾಡಿನ ರಾಜ) ಯಾರೆನ್ನುವುದು ಗೊಯೆಂಕಾರಿಗೆ ಗೊತ್ತಾಗಿರಬೇಕು. ನಾನು ಪುಣೆ ನಿವಾಸಿ. ನಮ್ಮ ಲೆಜಂಡ್‌ಗೆ ಅವಮಾನ ಮಾಡಿದರೆ ಪುಣೆ ತಂಡಕ್ಕೆ ಬೆಂಬಲ ನೀಡುವುದಿಲ್ಲ. ಧೋನಿಗೆ ಗೌರವ ಕೊಡಿ ಎಂದು ಧೋನಿ ಅಭಿಮಾನಿ ಟ್ವೀಟ್ ಮಾಡಿದ್ದಾನೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X