Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಕೃತಿ ಪರಿಚಯ
  4. ಚಿಟ್ಟೆಯಂತಹ ಕವಯಿತ್ರಿಯಿಂದ ಚಿಟ್ಟೆಯಂತಹ...

ಚಿಟ್ಟೆಯಂತಹ ಕವಯಿತ್ರಿಯಿಂದ ಚಿಟ್ಟೆಯಂತಹ ಪದ್ಯಗಳು

ಈ ಹೊತ್ತಿನ ಹೊತ್ತಿಗೆ

ಕಾರುಣ್ಯಾಕಾರುಣ್ಯಾ23 May 2017 12:05 AM IST
share
ಚಿಟ್ಟೆಯಂತಹ ಕವಯಿತ್ರಿಯಿಂದ ಚಿಟ್ಟೆಯಂತಹ ಪದ್ಯಗಳು

ಇಂದು ಮಕ್ಕಳ ಸಾಹಿತ್ಯ ಕೃಷಿ ತೀರಾ ಇಳಿಮುಖವಾಗಿದೆ. ಸಾಧಾರಣವಾಗಿ ಮಕ್ಕಳ ಸಾಹಿತ್ಯವನ್ನು ಬರೆಯುವವರು ಹಿರಿಯರೇ ಆಗಿದ್ದಾರೆ ಮತ್ತು ಈ ಹಿರಿಯರು ತಮ್ಮ ತಲೆಮಾರನ್ನು ದೃಷ್ಟಿಯಲ್ಲಿಟ್ಟುಕೊಂಡೇ ಬರೆಯುತ್ತಿರುತ್ತಾರೆ. ಇಂದಿಗೂ ಕೆಲವು ಹಿರಿಯರು ತಮ್ಮ ಮಕ್ಕಳ ಸಾಹಿತ್ಯವನ್ನು ಮುಂದುವರಿಸಿದ್ದಾರೆ. ಆದರೆ ಅವುಗಳಲ್ಲಿ ಹೆಚ್ಚಿನವುಗಳು ಹೊಸತಲೆಮಾರನ್ನು ಮುಟ್ಟುವಲ್ಲಿ ಸೋಲುತ್ತಿದೆ. ಹೊಸ ತಲೆಮಾರು ಬೆಳೆಯುವ ಪರಿಸರ, ಅವರ ಮುಂದೆ ತೆರೆದುಕೊಂಡ ಆಧುನಿಕ ಜಗತ್ತು, ಬದಲಾವಣೆಗೊಂಡಿರುವ ಶಿಕ್ಷಣದ ರೀತಿ ನೀತಿಗಳು ಇವುಗಳನ್ನೆಲ್ಲ ಇಟ್ಟುಕೊಂಡು ಹೊಸ ಮಕ್ಕಳ ಸಾಹಿತ್ಯವೊಂದು ತೆರೆದುಕೊಳ್ಳಬೇಕಾಗಿದೆ. ದೊಡ್ಡವರ ಸಾಹಿತ್ಯದಲ್ಲಾದ ಬದಲಾವಣೆಗಳಂತೆಯೇ ಮಕ್ಕಳ ಸಾಹಿತ್ಯ ಬದಲಾವಣೆಗಳಿಗೆ ತೆರೆದುಕೊಂಡದ್ದು ತೀರಾ ಕಡಿಮೆ.

ನಭಾ ಒಕ್ಕುಂದ ಅವರ ‘ಚಿಟ್ಟೆ’ ಮಕ್ಕಳ ಕವಿತೆಗಳ ಸಂಗ್ರಹ ಕೆಲವು ಕಾರಣಗಳಿಗಾಗಿ ವಿಶಿಷ್ಟವಾಗಿದೆ. ಇದು ಹೈಸ್ಕೂಲಿನ ವಿದ್ಯಾರ್ಥಿನಿಯೊಬ್ಬಳು ಬರೆದ ಪದ್ಯಗಳು. ಅಂದರೆ ಬಾಲ್ಯವನ್ನು ನಿಧಾನಕ್ಕೆ ದಾಟಿ ಪ್ರೌಢಾವಸ್ಥೆಗೆ ತಲುಪುತ್ತಿರುವ ಹಂತದಲ್ಲಿ ವಿದ್ಯಾರ್ಥಿನಿಯಿಂದ ಹೊರಬಿದ್ದಿರುವ ಪದ್ಯಗಳು. ಸಹಜವಾಗಿಯೇ ಸರಳತೆ, ಮುಗ್ಧತೆ ಪ್ರತೀ ಸಾಲಿನಲ್ಲೂ ಎದ್ದು ಕಾಣುತ್ತದೆ. ಗುಬ್ಬಿಗೂಡು, ಹಕ್ಕಿ, ಮೊಲ, ಪಾರಿಜಾತ, ಮನೆಯ ಮುಂದಿನ ಮರ ಮೊದಲಾದ ಸಣ್ಣ ಪದ್ಯಗಳು ತಮ್ಮ ಸರಳತೆಯ ಕಾರಣಕ್ಕಾಗಿ ಸೆಳೆಯುತ್ತದೆ. ‘ಮಳೆಯೇ ಇಲ್ಲ’ ಪದ್ಯದಲ್ಲಿ ಒಂದಿಷ್ಟು ಪುಟ್ಟ ಕವಿ ಬುದ್ಧಿ ಉಪಯೋಗಿಸಿ ಬರೆದಿದ್ದಾರೆ. ‘ಅಮ್ಮ’ ಪದ್ಯದಲ್ಲಿ ಒಂದಿಷ್ಟು ಹಿರಿತನದ ಛಾಯೆಯಿದೆ. ‘ಹೆದರಿಕೆ’ ಪದ್ಯದಲ್ಲೂ ಪ್ರೌಢತೆ ಎದ್ದು ಕಾಣುತ್ತದೆ. ಒಟ್ಟಿನಲ್ಲಿ ಮಕ್ಕಳಿಗಾಗಿ ಮಕ್ಕಳೇ ಪದ್ಯ ಬರೆಯುವುದು, ಅದರಲ್ಲಿ ಹಿರಿಯರು ಹಸ್ತಕ್ಷೇಪ ನಡೆಸದೇ ಇರುವುದು ಒಳ್ಳೆಯ ವಿಷಯವಾಗಿದೆ. ಚಿಲಿಪಿಲಿ ಪ್ರಕಾಶ ಧಾರವಾಡ ಈ ಕೃತಿಯನ್ನು ಅತ್ಯಂತ ಮುದ್ದಾಗಿ ಮುದ್ರಿಸಿದೆ. ಕೃತಿಯ ಮುಖಬೆಲೆ 60 ರೂಪಾಯಿ.

share
ಕಾರುಣ್ಯಾ
ಕಾರುಣ್ಯಾ
Next Story
X