Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಕುಲಭೂಷಣ್ ಜಾಧವ್ ಪ್ರಕರಣ : ತ್ವರಿತ...

ಕುಲಭೂಷಣ್ ಜಾಧವ್ ಪ್ರಕರಣ : ತ್ವರಿತ ವಿಚಾರಣೆ ಕೋರಿ ಐಸಿಜೆಗೆ ಪಾಕ್ ಮನವಿ

ವಾರ್ತಾಭಾರತಿವಾರ್ತಾಭಾರತಿ23 May 2017 8:34 PM IST
share
ಕುಲಭೂಷಣ್ ಜಾಧವ್ ಪ್ರಕರಣ : ತ್ವರಿತ ವಿಚಾರಣೆ ಕೋರಿ ಐಸಿಜೆಗೆ ಪಾಕ್ ಮನವಿ

ಇಸ್ಲಾಮಾಬಾದ್, ಮೇ 23: ಭಾರತೀಯ ಪ್ರಜೆ ಕುಲಭೂಷಣ್ ಜಾಧವ್ ಪ್ರಕರಣದ ವಿಚಾರಣೆಯನ್ನು ತ್ವರಿತವಾಗಿ ನಡೆಸುವಂತೆ ಪಾಕಿಸ್ತಾನ ಅಂತಾರಾಷ್ಟ್ರೀಯ ನ್ಯಾಯಾಲಯ (ಐಸಿಜೆ)ವನ್ನು ಕೋರಿದೆ ಎಂದು ಮಾಧ್ಯಮ ವರದಿಯೊಂದು ಮಂಗಳವಾರ ಹೇಳಿದೆ.

ಜಾಧವ್ ವಿರುದ್ಧ ಪಾಕಿಸ್ತಾನ ಬೇಹುಗಾರಿಕೆ ನಡೆಸಿದ ಆರೋಪವನ್ನು ಹೊರಿಸಿದ್ದು, ಆ ದೇಶದ ಸೇನಾ ನ್ಯಾಯಾಲಯವು ಇತ್ತೀಚೆಗೆ ಮರಣ ದಂಡನೆ ವಿಧಿಸಿರುವುದನ್ನು ಸ್ಮರಿಸಬಹುದಾಗಿದೆ.

ಪ್ರಕರಣದ ವಿಚಾರಣೆಯನ್ನು ತ್ವರಿತವಾಗಿ, ಅದರಲ್ಲೂ ಮುಖ್ಯವಾಗಿ ಮುಂದಿನ ಕೆಲವು ವಾರಗಳಲ್ಲಿ ಮುಗಿಸುವಂತೆ ಕೋರುವ ಪತ್ರವೊಂದನ್ನು ಪಾಕಿಸ್ತಾನದ ವಿದೇಶ ಕಚೇರಿಯು ನೆದರ್‌ಲ್ಯಾಂಡ್ಸ್ ದೇಶದ ಹೇಗ್‌ನಲ್ಲಿರುವ ಅಂತಾರಾಷ್ಟ್ರೀಯ ನ್ಯಾಯಾಲಯದ ರಿಜಿಸ್ಟ್ರಾರ್‌ಗೆ ಕಳುಹಿಸಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ‘ದಿ ಎಕ್ಸ್‌ಪ್ರೆಸ್ ಟ್ರಿಬ್ಯೂನ್’ ವರದಿ ಮಾಡಿದೆ.

ಅಂತಾರಾಷ್ಟ್ರೀಯ ನ್ಯಾಯಾಲಯದ ನ್ಯಾಯಾಧೀಶರ ಚುನಾವಣೆ ನವೆಂಬರ್‌ನಲ್ಲಿ ನಡೆಯಲಿರುವ ಹಿನ್ನೆಲೆಯಲ್ಲಿ, ಪಾಕಿಸ್ತಾನ ಈ ಮನವಿಯನ್ನು ಮಾಡಿದೆ ಎನ್ನಲಾಗಿದೆ.

ಜಾಧವ್ ಪ್ರಕರಣದ ವಿಚಾರಣೆಯನ್ನು ಐಸಿಜೆ ಅಕ್ಟೋಬರ್‌ನಲ್ಲಿ ಮುಂದುವರಿಸಬಹುದಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು.

 ‘‘ಆದರೆ, ವಿಚಾರಣೆಯು ಮುಂದಿನ ಆರು ತಿಂಗಳಲ್ಲಿ ನಡೆಯಬೇಕೆಂದು ಸರಕಾರ ಬಯಸುತ್ತದೆ’’ ಎಂದರು.

  ಜಾಧವ್‌ಗೆ ನೀಡಲಾಗಿರುವ ಗಲ್ಲು ಶಿಕ್ಷೆಯನ್ನು ಜಾರಿಗೊಳಿಸದಂತೆ ಹಾಗೂ ಅವರಿಗೆ ರಾಜತಾಂತ್ರಿಕ ನೆರವು ಪಡೆಯಲು ಅವಕಾಶ ನೀಡುವಂತೆ ಇತ್ತೀಚೆಗೆ ಅಂತಾರಾಷ್ಟ್ರೀಯ ನ್ಯಾಯಾಲಯ ತೀರ್ಪು ನೀಡಿರುವುದನ್ನು ಸ್ಮರಿಸಬಹುದಾಗಿದೆ.

ನಿವೃತ್ತ ಸಿಆರ್‌ಪಿಎಫ್ ಅಧಿಕಾರಿಗೆ ಕೆನಡ ಪ್ರವೇಶ ನಿರಾಕರಣೆ

‘ಭಯೋತ್ಪಾದನೆ, ವ್ಯವಸ್ಥಿತ ಅಥವಾ ಸಾರಾಸಗಟು ಮಾನವಹಕ್ಕು ಉಲ್ಲಂಘನೆ ಅಥವಾ ಜನಾಂಗ ಹತ್ಯೆ’ಯಲ್ಲಿ ತೊಡಗಿದ ಸರಕಾರವೊಂದರಲ್ಲಿ ಈ ವ್ಯಕ್ತಿ ಸೇವೆ ಸಲ್ಲಿಸಿದ್ದರು ಎಂದು ವಿವರಣೆ ನೀಡಿದ ಅಧಿಕಾರಿಗಳು!

ಒಟ್ಟಾವ (ಕೆನಡ), ಮೇ 23: ಭಾರತದ ಹಿರಿಯ ನಿವೃತ್ತ ಸಿಆರ್‌ಪಿಎಫ್ ಅಧಿಕಾರಿಯೊಬ್ಬರಿಗೆ ಕೆನಡದ ವ್ಯಾಂಕೂವರ್ ವಿಮಾನ ನಿಲ್ದಾಣದಲ್ಲಿ ಪ್ರವೇಶ ನಿರಾಕರಿಸಿದ ಘಟನೆ ಕಳೆದ ವಾರ ನಡೆದಿದೆ.

‘‘ಭಯೋತ್ಪಾದನೆ, ವ್ಯವಸ್ಥಿತ ಅಥವಾ ಸಾರಾಸಗಟು ಮಾನವಹಕ್ಕು ಉಲ್ಲಂಘನೆ ಅಥವಾ ಜನಾಂಗ ಹತ್ಯೆ’ಯಲ್ಲಿ ತೊಡಗಿದ ಸರಕಾರವೊಂದರಲ್ಲಿ ಈ ವ್ಯಕ್ತಿ ಸೇವೆ ಸಲ್ಲಿಸಿದ್ದರು ಎಂಬ ಕಾರಣಕ್ಕಾಗಿ ವಲಸೆ ಅಧಿಕಾರಿಗಳು ಈ ನಿರ್ಧಾರ ತೆಗೆದುಕೊಂಡರು ಎನ್ನಲಾಗಿದೆ.

ಸೆಂಟ್ರಲ್ ರಿಸರ್ವ್ ಪೊಲೀಸ್ ಪಡೆಯಿಂದ 2010ರಲ್ಲಿ ಇನ್ಸ್‌ಪೆಕ್ಟರ್ ಜನರಲ್ ಆಫ್ ಪೊಲೀಸ್ ದರ್ಜೆಯೊಂದಿಗೆ ನಿವೃತ್ತಿಗೊಂಡ ತೇಜಿಂದರ್ ಸಿಂಗ್ ಧಿಲ್ಲೋನ್ ಪ್ರವೇಶ ನಿಷೇಧವನ್ನು ಎದುರಿಸಿದವರು. ಕೆನಡದ ವಲಸೆ ಮತ್ತು ನಿರಾಶ್ರಿತರ ರಕ್ಷಣಾ ಕಾಯ್ದೆಯ ಉಪ ಪರಿಚ್ಛೇದವೊಂದರ ಅಡಿಯಲ್ಲಿ ಧಿಲ್ಲೋನ್‌ಗೆ ಕೆನಡ ಪ್ರವೇಶ ನಿಷೇಧಿಸಲಾಗಿದೆ.

ವಿಮಾನ ನಿಲ್ದಾಣದಲ್ಲಿ ಧಿಲ್ಲೋನ್‌ಗೆ ದಾಖಲೆಯೊಂದನ್ನು ನೀಡಲಾಯಿತು. ‘‘ಭಯೋತ್ಪಾದನೆ, ವ್ಯವಸ್ಥಿತ ಅಥವಾ ಸಾರಾಸಗಟು ಮಾನವಹಕ್ಕುಗಳ ಉಲ್ಲಂಘನೆ, ಅಥವಾ ಜನಾಂಗ ಹತ್ಯೆ, ಯುದ್ಧಾಪರಾಧ ಅಥವಾ ಮಾನವತೆಯ ವಿರುದ್ಧದ ಅಪರಾಧ’’ದಲ್ಲಿ ತೊಡಗಿದ ಸರಕಾರವೊಂದರ ಸೇವೆಯಲ್ಲಿ ನೀವು ಹಿರಿಯ ಅಧಿಕಾರಿಯಾಗಿದ್ದಿರಿ’’ ಎಂದು ಆ ದಾಖಲೆ ಹೇಳುತ್ತದೆ.

ವ್ಯಾಂಕೂವರ್ ವಿಮಾನ ನಿಲ್ದಾಣದಲ್ಲಿ ವಲಸೆ ಅಧಿಕಾರಿಗಳು ಹೊರಡಿಸಿದ ಎರಡನೆ ವರದಿಯಲ್ಲಿ ಮೇಲೆ ವಿವರಿಸಿದ ರೀತಿಯಲ್ಲಿನ ಭಾರತದ ಬಣ್ಣನೆಯನ್ನು ಕೈಬಿಡಲಾಗಿದೆ. ಆದಾಗ್ಯೂ, ನೀವು ಸಿಆರ್‌ಪಿಎಫ್‌ನಲ್ಲಿ ಸೇವೆ ಸಲ್ಲಿಸಿರುವುದರಿಂದ ಕೆನಡಕ್ಕೆ ನಿಮಗೆ ಪ್ರವೇಶ ನೀಡಲು ಸಾಧ್ಯವಿಲ್ಲ ಎಂದು ಅಧಿಕಾರಿಗಳು ಪಟ್ಟುಹಿಡಿದರು ಎನ್ನಲಾಗಿದೆ.

ಹಿಂಸೆ, ಸ್ವೇಚ್ಛಾಚಾರದ ಬಂಧನ, ಕೊಲೆ ಮತ್ತು ಲೈಂಗಿಕ ಆಕ್ರಮಣದಂಥ ವ್ಯವಸ್ಥಿತ ಮಾನವಹಕ್ಕು ಉಲ್ಲಂಘನೆಯಲ್ಲಿ ತೊಡಗಿದ ಸಿಆರ್‌ಪಿಎಫ್‌ನಲ್ಲಿ ಸೇವೆ ಸಲ್ಲಿಸಿರುವುದೇ ಇದಕ್ಕೆ ಕಾರಣ ಎಂದು ಅವರಿಗೆ ತಿಳಿಸಲಾಯಿತು.

ಬಳಿಕ ಅವರು ಲುಧಿಯಾನಕ್ಕೆ ಹಿಂದಿರುಗಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X