Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಸುದಿರ್‌ಮನ್ ಕಪ್: ಇಂಡೋನೇಷ್ಯವನ್ನು...

ಸುದಿರ್‌ಮನ್ ಕಪ್: ಇಂಡೋನೇಷ್ಯವನ್ನು ಮಣಿಸಿದ ಭಾರತ

ವಾರ್ತಾಭಾರತಿವಾರ್ತಾಭಾರತಿ23 May 2017 11:33 PM IST
share
ಸುದಿರ್‌ಮನ್ ಕಪ್: ಇಂಡೋನೇಷ್ಯವನ್ನು ಮಣಿಸಿದ ಭಾರತ

ಗೋಲ್ಡ್ ಕೋಸ್ಟ್(ಆಸ್ಟ್ರೇಲಿಯ), ಮೇ 23: ಮಾಜಿ ಚಾಂಪಿಯನ್ ಇಂಡೋನೇಷ್ಯ ವಿರುದ್ಧ ಪ್ರಾಬಲ್ಯ ಮೆರೆದ ಭಾರತ ತಂಡ ಸುದಿರ್‌ಮನ್ ಕಪ್ ಮಿಕ್ಸೆಡ್ ಟೀಮ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನಲ್ಲಿ ನಾಕೌಟ್ ಹಂತಕ್ಕೇರುವ ವಿಶ್ವಾಸ ಹೆಚ್ಚಿಸಿಕೊಂಡಿದೆ.

ಇಲ್ಲಿ ಮಂಗಳವಾರ ನಡೆದ ಪಂದ್ಯದಲ್ಲಿ ಭಾರತ ತಂಡ ಇಂಡೋನೇಷ್ಯದ ವಿರುದ್ಧ 4-1 ಅಂತರದಿಂದ ಜಯ ಸಾಧಿಸಿತು. ಸೋಮವಾರ ನಡೆದಿದ್ದ ಟೂರ್ನಿಯ ಆರಂಭಿಕ ಪಂದ್ಯದಲ್ಲಿ ಭಾರತ ತಂಡ ಡೆನ್ಮಾರ್ಕ್‌ನ ವಿರುದ್ಧ 1-4 ರಿಂದ ಸೋತು ಹಿನ್ನಡೆ ಅನುಭವಿಸಿತ್ತು. ಟೂರ್ನಿಯಲ್ಲಿ ಸ್ಪರ್ಧೆಯಲ್ಲಿರಲು 5ನೆ ಶ್ರೇಯಾಂಕದ ಇಂಡೋನೇಷ್ಯದ ವಿರುದ್ಧ ಗೆಲ್ಲಲೇಬೇಕಾಗಿತ್ತು.

ಭಾರತದ ಪರ ಕೆ.ಶ್ರೀಕಾಂತ್, ಪಿ.ವಿ.ಸಿಂಧು ಸಿಂಗಲ್ಸ್‌ನಲ್ಲಿ ಜಯ ಸಾಧಿಸಿದರೆ,ಹಿರಿಯ ಆಟಗಾರ್ತಿ ಅಶ್ವಿನಿ ಪೊನ್ನಪ್ಪ ಅವರು ಎಸ್.ರಾಂಕಿ ರೆಡ್ಡಿ ಹಾಗೂ ಸಿಕ್ಕಿ ರೆಡ್ಡಿ ಜೊತೆಗೂಡಿ ಕ್ರಮವಾಗಿ ಮಿಶ್ರ ಡಬಲ್ಸ್ ಹಾಗೂ ಮಹಿಳೆಯರ ಡಬಲ್ಸ್ ಪಂದ್ಯವನ್ನು ಜಯಿಸಿದರು.

 ದಿನದ ಮೊದಲ ಪಂದ್ಯದಲ್ಲಿ ಎಸ್.ರಾಂಕಿ ರೆಡ್ಡಿ ಹಾಗೂ ಅಶ್ವಿನಿ ಪೊನ್ನಪ್ಪ ಅವರು ಮಿಶ್ರಡಬಲ್ಸ್‌ನಲ್ಲಿ ಟಾಂಟೊವಿ ಅಹ್ಮದ್ ಹಾಗೂ ಗ್ಲೊರಿಯ ಇಮಾನ್ಯೆುಲ್‌ರನ್ನು 22-20, 17-21, 21-19 ಅಂಕಗಳ ಅಂತರದಿಂದ ಮಣಿಸಿ ಭಾರತಕ್ಕೆ 1-0 ಮುನ್ನಡೆ ಒದಗಿಸಿಕೊಟ್ಟರು. ಪುರುಷರ ಸಿಂಗಲ್ಸ್‌ನಲ್ಲಿ ಶ್ರೀಕಾಂತ್ ಅವರು ಜೋನಾಥನ್ ಕ್ರಿಸ್ಟಿ ಅವರನ್ನು 21-15, 21-16 ಅಂಕಗಳ ಅಂತರದಿಂದ ಸೋಲಿಸಿ ಭಾರತದ ಮುನ್ನಡೆಯನ್ನು 2-0ಗೆ ವಿಸ್ತರಿಸಿದರು.

ಎಸ್.ರಾಂಕಿ ರೆಡ್ಡಿ ಹಾಗೂ ಚಿರಾಗ್ ಶೆಟ್ಟಿ ಪುರುಷರ ಡಬಲ್ಸ್‌ನಲ್ಲಿ ಮಾರ್ಕಸ್ ಫೆರ್ನಾಲ್ಡಿ ಹಾಗೂ ಕೆವಿನ್ ಸಂಜಯ ಸುಕಮುಲ್ಜೊ ವಿರುದ್ಧ 9-21, 17-21 ರಿಂದ ಸೋತರು. ಇಂಡೋನೇಷ್ಯ ಒಂದು ಅಂಕ ಪಡೆಯಿತು.

42 ನಿಮಿಷಗಳ ಕಾಲ ನಡೆದ ಮಹಿಳೆಯರ ಸಿಂಗಲ್ಸ್‌ನಲ್ಲಿ ಇಂಡೋನೇಷ್ಯದ ಫಿಟ್ರಿಯಾನಿಯವರನ್ನು 21-9, 21-9 ಮಣಿಸಿದ ಪಿ.ವಿ.ಸಿಂಧು ಭಾರತಕ್ಕೆ ಐದು ಪಂದ್ಯಗಳ ಸರಣಿಯಲ್ಲಿ 3-1 ಮುನ್ನಡೆ ಒದಗಿಸಿಕೊಟ್ಟರು. ಐದನೆ ಹಾಗೂ ಅಂತಿಮ ಪಂದ್ಯದಲ್ಲಿ ಅಶ್ವಿನಿ ಹಾಗೂ ಸಿಕ್ಕಿ ರೆಡ್ಡಿ ಜೋಡಿ ಮಹಿಳೆಯರ ಡಬಲ್ಸ್ ವಿಭಾಗದಲ್ಲಿ ಡೆಲ್ಲಾ ಡೆಸ್ಟಿಯರ ಹಾಗೂ ರಸಿಟಾರನ್ನು 21-12, 21-19 ಅಂಕಗಳ ಅಂತರದಿಂದ ಮಣಿಸಿ ಭಾರತಕ್ಕೆ 4-1 ಅಂತರದ ಗೆಲುವು ತಂದುಕೊಟ್ಟರು.

ಇದೀಗ ಭಾರತ ಹಾಗೂ ಡೆನ್ಮಾರ್ಕ್ ತಂಡಗಳು ತಲಾ ಒಂದು ಅಂಕ ಗಳಿಸಿವೆ. ಬುಧವಾರ ಇಂಡೊನೇಷ್ಯ ಹಾಗೂ ಡೆನ್ಮಾರ್ಕ್ ನಡುವಿನ ಪಂದ್ಯದ ಬಳಿಕ ನಾಕೌಟ್ ಸ್ಥಾನ ನಿರ್ಧಾರವಾಗಲಿದೆ.

9ನೆ ಶ್ರೇಯಾಂಕದ ಭಾರತ 2011ರ ಆವೃತ್ತಿಯಲ್ಲಿ ಮಾತ್ರ ನಾಕೌಟ್ ಹಂತಕ್ಕೆ ತಲುಪಲು ಯಶಸ್ವಿಯಾಗಿತ್ತು. ಕಳೆದ ಎರಡು ಆವೃತ್ತಿಗಳಲ್ಲಿ ಗ್ರೂಪ್ ಹಂತ ದಾಟಲು ಸಾಧ್ಯವಾಗಿರಲಿಲ್ಲ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X