Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಅಂಡರ್-17 ವಿಶ್ವಕಪ್ ದೇಶಕ್ಕೆ ಹೆಮ್ಮೆ...

ಅಂಡರ್-17 ವಿಶ್ವಕಪ್ ದೇಶಕ್ಕೆ ಹೆಮ್ಮೆ ತರಲಿದೆ: ದತ್ತ ವಿಶ್ವಾಸ

ವಾರ್ತಾಭಾರತಿವಾರ್ತಾಭಾರತಿ23 May 2017 11:37 PM IST
share
ಅಂಡರ್-17 ವಿಶ್ವಕಪ್ ದೇಶಕ್ಕೆ ಹೆಮ್ಮೆ ತರಲಿದೆ: ದತ್ತ ವಿಶ್ವಾಸ

ಚಾಂಗ್‌ಶಾ(ಚೀನಾ), ಮೇ 23: ಮುಂಬರುವ ಫಿಫಾ ಅಂಡರ್-17 ವಿಶ್ವಕಪ್‌ನಲ್ಲಿ 2010ರ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಆಗಿರುವಂತಹ ಯಾವುದೇ ಅವ್ಯವಸ್ಥೆ, ಭ್ರಷ್ಟಾಚಾರ ಹಗರಣಗಳು ನಡೆಯದಂತೆ ಎಚ್ಚರಿಕೆ ವಹಿಸಲಾಗುವುದು ಎಂದು ಭಾರತ ಭರವಸೆ ನೀಡಿದೆ.

‘‘ಭಾರತದಲ್ಲಿ ಇದೇ ಮೊದಲ ಬಾರಿ ಅಕ್ಟೋಬರ್‌ನಲ್ಲಿ ನಡೆಯಲಿರುವ ಅತ್ಯಂತ ಪ್ರತಿಷ್ಠಿತ ಫುಟ್ಬಾಲ್ ಟೂರ್ನಮೆಂಟ್ ದೇಶಕ್ಕೆ ಹೆಮ್ಮೆ ತರಲಿದೆ. ಈ ಟೂರ್ನಿಯು ಕಾಮನ್‌ವೆಲ್ತ್ ಗೇಮ್ಸ್‌ಗಿಂತ ಸಂಪೂರ್ಣ ಭಿನ್ನವಾಗಿರಲಿದೆ’’ಎಂದು ಅಖಿಲ ಭಾರತ ಫುಟ್ಬಾಲ್ ಫೆಡರೇಶನ್(ಎಐಎಫ್‌ಎಫ್) ಉಪಾಧ್ಯಕ್ಷ ಸುಬ್ರತಾ ದತ್ ಸುದ್ದಿಸಂಸ್ಥೆಯೊಂದಕ್ಕೆ ತಿಳಿಸಿದ್ದಾರೆ. ದತ್ ಅವರು ವಿಶ್ವ ಫುಟ್ಬಾಲ್ ಫೋರಮ್‌ನಲ್ಲಿ ಭಾಗಿಯಾಗಲು ಚೀನಾಕ್ಕೆ ತೆರಳಿದ್ದಾರೆ.

ಮೂರು ವಾರಗಳ ಕಾಲ ನಡೆಯಲಿರುವ ಅಂಡರ್-17 ಫಿಫಾ ವಿಶ್ವಕಪ್ ಟೂರ್ನಿಯು ಭಾರತದ ಆರು ನಗರಗಳಾದ-ಹೊಸದಿಲ್ಲಿ, ಮುಂಬೈ, ಕೋಲ್ಕತಾ, ಗೋವಾ, ಗುವಾಹಟಿ ಹಾಗೂ ಕೊಚ್ಚಿಯಲ್ಲಿ ನಡೆಯಲಿದೆ. ಅಕ್ಟೋಬರ್ 28 ರಂದು ಕೋಲ್ಕತಾದಲ್ಲಿ ಫೈನಲ್ ಪಂದ್ಯ ನಿಗದಿಯಾಗಿದೆ.

ದೊಡ್ಡ ಕ್ರೀಡಾಕೂಟಗಳನ್ನು ಆಯೋಜಿಸುವಲ್ಲಿ ಭಾರತ ಹೊಂದಿದ್ದ ಗೌರವ 2010ರ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಮಣ್ಣುಪಾಲಾಗಿತ್ತು. ಗೇಮ್ಸ್‌ನಲ್ಲಿ ಅಪೂರ್ಣ ಮೂಲಭೂತ ಸೌಕರ್ಯ ಹಾಗೂ ಅಥ್ಲೀಟ್‌ಗಳ ನೆಲೆಸಿದ್ದ ಕ್ರೀಡಾಗ್ರಾಮಗಳ ಕಳಪೆ ವ್ಯವಸ್ಥೆಯಿಂದಾಗಿ ಭಾರತ ಮುಖಭಂಗಕ್ಕೀಡಾಗಿತ್ತು. ಉದ್ಘಾಟನಾ ಸಮಾರಂಭದ ಮುನ್ನಾದಿನ ಮುಖ್ಯ ಸ್ಟೇಡಿಯಂನ ಪಾದಚಾರಿ ಸೇತುವೆ ಕುಸಿದುಬಿದ್ದಿತ್ತು. ಮೇಲ್ಛಾವಣಿ ಸೋರಿಕೆಯಿಂದ ಈಜು ಸ್ಪರ್ಧೆಗೆ ತೊಂದರೆಯಾಗಿತ್ತು.

ಗೇಮ್ಸ್‌ನಲ್ಲಿ ಹಣಕಾಸು ದುರ್ಬಳಕೆ ಹಾಗೂ ಇತರ ಭ್ರಷ್ಟಾಚಾರ ಆರೋಪಗಳಲ್ಲಿ ಗೇಮ್ಸ್‌ನ ಮುಖ್ಯ ಆಯೋಜಕರಾಗಿದ್ದ ಸುರೇಶ್ ಕಲ್ಮಾಡಿ 10 ತಿಂಗಳ ಕಾಲ ಜೈಲು ಶಿಕ್ಷೆ ಅನುಭವಿಸಿದ್ದರು.

 ‘‘ಅಂಡರ್-17 ವಿಶ್ವಕಪ್‌ನ್ನು ಯಶಸ್ವಿಯಾಗಿ ಆಯೋಜಿಸುವ ದೃಷ್ಟಿಯಿಂದ ಕಳೆದ ಎರಡೂವರೆ ವರ್ಷಗಳಿಂದ ಶ್ರಮಿಸುತ್ತಿದ್ದೇವೆ. ಅಗತ್ಯವಿರುವ ಎಲ್ಲ ಮೂಲ ಸೌಕರ್ಯವನ್ನು ಮಾಡಲಾಗಿದೆ.. ಇದೀಗ ಎಲ್ಲ ಕಾಮಗಾರಿಗಳು ಅಂತಿಮ ಹಂತದಲ್ಲಿದೆ. ಫಿಫಾ ನಮಗೆ ನಿರಂತರವಾಗಿ ಮಾರ್ಗದರ್ಶನ ನೀಡುತ್ತಾ ಬಂದಿದೆ’’ ಎಂದು ದತ್ತ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X