Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಚೂರಿ ಇರಿತದಿಂದ ಕ್ವಿಟೋವಾ ಚೇತರಿಕೆ:...

ಚೂರಿ ಇರಿತದಿಂದ ಕ್ವಿಟೋವಾ ಚೇತರಿಕೆ: ವಿಂಬಲ್ಡನ್‌ಗೆ ವಾಪಸಾಗಲು ಸಿದ್ಧತೆ

ವಾರ್ತಾಭಾರತಿವಾರ್ತಾಭಾರತಿ23 May 2017 11:38 PM IST
share
ಚೂರಿ ಇರಿತದಿಂದ ಕ್ವಿಟೋವಾ ಚೇತರಿಕೆ: ವಿಂಬಲ್ಡನ್‌ಗೆ ವಾಪಸಾಗಲು ಸಿದ್ಧತೆ

 ಲಂಡನ್, ಮೇ 23: ಸುಮಾರು ಐದು ತಿಂಗಳ ಹಿಂದೆ ತನ್ನ ಮನೆಯೊಳಗೆ ನುಗ್ಗಿದ್ದ ದರೋಡೆಕೋರನ ಚೂರಿ ಇರಿತದಿಂದ ಗಾಯಗೊಂಡಿದ್ದ ಎರಡು ಬಾರಿಯ ಚಾಂಪಿಯನ್ ಪೆಟ್ರಾ ಕ್ವಿಟೋವಾ ಮುಂಬರುವ ವಿಂಬಲ್ಡನ್ ಟೂರ್ನಿಯಲ್ಲಿ ವಾಪಸಾಗಲು ಸಜ್ಜಾಗಿದ್ದಾರೆ.

ಕಳೆದ ವರ್ಷ ಡಿಸೆಂಬರ್ 20 ರಂದು ಕೆಲಸಗಾರನ ಸೋಗಿನಲ್ಲಿ ಝೆಕ್ ಆಟಗಾರ್ತಿ ಕ್ವಿಟೋವಾ ನೆಲೆಸಿರುವ ಅಪಾರ್ಟ್‌ಮೆಂಟ್‌ಗೆ ಪ್ರವೇಶಿಸಿದ್ದ ವ್ಯಕ್ತಿಯೊಬ್ಬ ಕ್ವಿಟೋವಾರ ಕುತ್ತಿಗೆಗೆ ಚೂರಿ ಇರಿಯಲು ಮುಂದಾಗಿದ್ದ. ಕ್ವಿಟೋವಾ ದುಷ್ಕರ್ಮಿಯನ್ನು ತಳ್ಳಿದಾಗ ಆಕೆಯ ನಾಲ್ಕು ಬೆರಳು ಹಾಗೂ ಹೆಬ್ಬೆಟ್ಟಿಗೆ ಗಾಯವಾಗಿತ್ತು. ಜೀವಾಪಾಯದಿಂದ ಪಾರಾಗಿದ್ದ ಕ್ವಿಟೋವಾ ಚೂರಿ ಇರಿತದ ಬಳಿಕ ನಾಲ್ಕು ಗಂಟೆಗಳ ಕಾಲ ಸರ್ಜರಿಗೆ ಒಳಗಾಗಿದ್ದರು. ಇದೀಗ ನಿರೀಕ್ಷೆಗಿಂತ ಬೇಗನೆ ಚೇತರಿಸಿಕೊಂಡಿದ್ದು, ರವಿವಾರ ಪ್ಯಾರಿಸ್‌ನಲ್ಲಿ ಆರಂಭವಾಗಲಿರುವ ಫ್ರೆಂಚ್ ಓಪನ್‌ನಲ್ಲಿ ಸಕ್ರಿಯ ಟೆನಿಸ್‌ಗೆ ವಾಪಸಾಗುವ ಯೋಜನೆಯನ್ನ್ನೂ ಹಾಕಿಕೊಂಡಿದ್ದಾರೆ.

‘‘ಕ್ವಿಟೋವಾ ವಿಂಬಲ್ಡನ್ ಟೂರ್ನಿಯಲ್ಲಿ ಆಡುವ ಯೋಜನೆ ಹಾಕಿಕೊಂಡಿದ್ದಾರೆ. ರವಿವಾರ ಪ್ಯಾರಿಸ್‌ನಲ್ಲಿ ಆರಂಭವಾಗಲಿರುವ ಫ್ರೆಂಚ್ ಓಪನ್‌ನಲ್ಲಿ ಭಾಗವಹಿಸುವ ಕುರಿತು ಈ ವಾರ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ’’ ಎಂದು ಕ್ವಿಟೋವಾರ ಮ್ಯಾನೇಜರ್ ಕಾಟಿ ಸ್ಪೆಲ್‌ಮನ್ ಹೇಳಿದ್ದಾರೆ.

2011 ಹಾಗೂ 2014ರಲ್ಲಿ ವಿಂಬಲ್ಡನ್ ಚಾಂಪಿಯನ್ ಆಗಿರುವ ಕ್ವಿಟೋವಾ ಬುಧವಾರ ಬಿಡುಗಡೆಯಾಗಲಿರುವ ಈ ವರ್ಷದ ಚಾಂಪಿಯನ್‌ಶಿಪ್‌ನ ಅಧಿಕೃತ ಪ್ರವೇಶ ಪಟ್ಟಿಯಲ್ಲಿ ಸೇರ್ಪಡೆಯಾಗುವ ಸಾಧ್ಯತೆಯಿದೆ.

‘‘ಮಾಜಿ ಚಾಂಪಿಯನ್ ಕ್ವಿಟೋವಾಗೆ ನಾವು ಸದಾ ಸ್ವಾಗತಿಸುತ್ತೇವೆ. ಈ ವರ್ಷದ ಚಾಂಪಿಯನ್‌ಶಿಪ್‌ನಲ್ಲಿ ಕ್ವಿಟೋವಾ ಸ್ಪರ್ಧಿಸಿದರೆ ನಮಗೆ ತುಂಬಾ ಸಂತೋಷವಾಗುತ್ತದೆ. ಈಗ ಅವರು ಸಕ್ರಿಯ ಟೆನಿಸ್‌ಗೆ ವಾಪಸಾಗಲು ತಯಾರಿ ನಡೆಸುತ್ತಿದ್ದಾರೆ’’ ಎಂದು ವಿಂಬಲ್ಡನ್ ಟೂರ್ನಿಯ ಆಯೋಜಕರು ತಿಳಿಸಿದ್ದಾರೆ.

ಈ ತಿಂಗಳಾರಂಭದಲ್ಲಿ ಮಾಂಟೆಕಾರ್ಲೊ ಟೂರ್ನಿಗೆ ಅಭ್ಯಾಸ ನಡೆಸುತ್ತಿದ್ದ ಚಿತ್ರವನ್ನು ಪೋಸ್ಟ್ ಮಾಡಿದ್ದ ಕ್ವಿಟೋವಾ ಒಂದು ವೇಳೆ ಫ್ರೆಂಚ್ ಓಪನ್‌ನಲ್ಲಿ ಭಾಗವಹಿಸಿದರೆ ಎಲ್ಲರಿಗೂ ಅಚ್ಚರಿಯಾಗಬಹುದು. 27ರ ಹರೆಯದ ಕ್ವಿಟೋವಾ 2011ರಲ್ಲಿ ವಿಂಬಲ್ಡನ್ ಓಪನ್ ಫೈನಲ್‌ನಲ್ಲಿ ಮರಿಯಾ ಶರಪೋವಾರನ್ನು ಮಣಿಸಿ ಪ್ರಶಸ್ತಿ ಜಯಿಸಿದ್ದರು.2014ರಲ್ಲಿ ಎವ್‌ಜಿನಿ ಬೌಚರ್ಡ್‌ರನ್ನು ನೇರ ಸೆಟ್‌ಗಳಿಂದ ಮಣಿಸಿ ಮತ್ತೊಮ್ಮೆ ಪ್ರಶಸ್ತಿ ಗೆದ್ದುಕೊಂಡಿದ್ದರು. ಕ್ವಿಟೋವಾ ನವೆಂಬರ್ 12 ರಂದು ಫೆಡ್ ಕಪ್ ಫೈನಲ್‌ನಲ್ಲಿ ಫ್ರಾನ್ಸ್‌ನ ವಿರುದ್ಧ ಕೊನೆಯಬಾರಿ ಆಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X