Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಯೋತ್ಪಾದನೆಗೆ ಹಣ ಪೂರೈಕೆ: ಬಿಜೆಪಿ...

ಭಯೋತ್ಪಾದನೆಗೆ ಹಣ ಪೂರೈಕೆ: ಬಿಜೆಪಿ ಮುಖಂಡನ ಸಹಿತ ಮೂವರಿಗೆ ಜೀವಾವಧಿ ಶಿಕ್ಷೆ

ವಾರ್ತಾಭಾರತಿವಾರ್ತಾಭಾರತಿ24 May 2017 5:03 PM IST
share
ಭಯೋತ್ಪಾದನೆಗೆ ಹಣ ಪೂರೈಕೆ: ಬಿಜೆಪಿ ಮುಖಂಡನ ಸಹಿತ ಮೂವರಿಗೆ ಜೀವಾವಧಿ ಶಿಕ್ಷೆ

ಗುವಾಹಟಿ,ಮೇ 24: ರಾಜ್ಯದಲ್ಲಿಯ ಭಯೋತ್ಪಾದಕ ಸಂಘಟನೆಯೊಂದಕ್ಕೆ ಆರ್ಥಿಕ ನೆರವನ್ನೊದಗಿಸಲು ಸರಕಾರಿ ಹಣವನ್ನು ದುರುಪಯೋಗ ಮಾಡಿದ್ದ ಎರಡು ಪ್ರಕರಣಗಳಿಗೆ ಸಂಬಂಧಿಸಿದಂತೆ ಮಾಜಿ ಉಗ್ರಗಾಮಿ-ಹಾಲಿ ಬಿಜೆಪಿ ನಾಯಕ ಮತ್ತು ಇಬ್ಬರು ಸರಕಾರಿ ಅಧಿಕಾರಿಗಳು ಸೇರಿದಂತೆ ಮೂವರಿಗೆ ಇಲ್ಲಿಯ ವಿಶೇಷ ಎನ್‌ಐಎ ನ್ಯಾಯಾಲಯವು ಜೀವಾವಧಿ ಶಿಕ್ಷೆಯನ್ನು ಪ್ರಕಟಿಸಿದೆ. ನ್ಯಾಯಾಲಯವು ಸೋಮವಾರ ಈ ಎರಡು ಪ್ರಕರಣಗಳಲ್ಲಿ ಒಟ್ಟು 15 ಜನರನ್ನು ದೋಷಿಗಳೆಂದು ಘೋಷಿಸಿತ್ತು. ಇವು ಎನ್‌ಐಎ 2009ರಲ್ಲಿ ಸ್ಥಾಪನೆಗೊಂಡ ಬಳಿಕ ಅದಕ್ಕೆ ಹಸ್ತಾಂತರಿಸಲಾಗಿದ್ದ ಮೊದಲ ಪ್ರಕರಣಗಳಾ ಗಿವೆ.

ಇತರರಿಗೆ ವಿವಿಧ ಅವಧಿಗಳ ಜೈಲುಶಿಕ್ಷೆಯನು ವಿಧಿಸಲಾಗಿದೆ. ಭಯೋತ್ಪಾದಕ ಸಂಘಟನೆ ದಿಮಾ ಹಲಾಂ ದಾವೋಗಾ(ಡಿಎಚ್‌ಡಿ-ಜೆ) ಅಥವಾ ಬ್ಲಾಕ್ ವಿಡೋದ ಮಾಜಿ ಸ್ವಘೋಷಿತ ಕಮಾಂಡರ್-ಇನ್-ಚೀಫ್ ನಿರಂಜನ ಹೋಜಾಯಿ, ಡಿಎಚ್‌ಡಿ-ಜೆಯ ಸ್ವಘೋಷಿತ ಅಧ್ಯಕ್ಷ ಜುವೆಲ್ ಗರ್ಲೋಸಾ ಮತ್ತು ಮೋಹೆತ್ ಹೋಜಾಯಿ ಅವರು ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ದೋಷಿಗಳಾಗಿದ್ದಾರೆ. ಈ ಪೈಕಿ ನಿರಂಜನ ಆಡಳಿತಕ್ಕೆ ಶರಣಾಗಿ, ಬಳಿಕ ಕಳೆದ ವರ್ಷ ಬಿಜೆಪಿಗೆ ಸೇರ್ಪಡೆಗೊಂಡು ಉತ್ತರ ಕಾಚಾರ್ ಗುಡ್ಡಗಾಡು ಸ್ವಾಯತ್ತ ಜಿಲ್ಲಾ ಮಂಡಳಿಗೆ ಆಯ್ಕೆಯಾಗಿದ್ದರೆ, ಗರ್ಲೋಸಾ ಮಂಡಳಿಯ ಹಾಲಿ ಪಕ್ಷೇತರ ಸದಸ್ಯನಾಗಿದ್ದಾನೆ. ಮೋಹೆತ್ ಮಂಡಳಿಯ ಮಾಜಿ ಮುಖ್ಯ ಕಾರ್ಯಕಾರಿ ಸದಸ್ಯನಾಗಿದ್ದಾನೆ.

ಪ್ರಕರಣದಿಂದ ನಿರಂಜನನನ್ನು ಪಾರು ಮಾಡಲು ಗುವಾಹಟಿ ಉಚ್ಚ ನ್ಯಾಯಾಲಯದ ಮೆಟ್ಟಿಲನ್ನೇರುವ ಸಾಧ್ಯಾಸಾಧ್ಯತೆಯನ್ನು ಅಸ್ಸಾಂ ಬಿಜೆಪಿಯು ಪರಿಶೀಲಿಸುತ್ತಿದೆ ಎಂದು ಪಕ್ಷದ ರಾಜ್ಯ ವಕ್ತಾರ ಬಿಜನ್ ಮಹಾಜನ್ ತಿಳಿಸಿದರು.

  ರಾಜ್ಯ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಹಾಗೂ ಮಂಡಳಿಯಲ್ಲಿ ವಿಶೇಷ ಕರ್ತವ್ಯಾಧಿಕಾರಿಯಾಗಿದ್ದ ಆರ್.ಎಚ್.ಖಾನ್, ಗುತ್ತಿಗೆದಾರ ಪೂಜೇಂದ್ರ ಹೋಜಾಯಿ, ಡಿಎಚ್‌ಡಿ-ಜೆ ಸದಸ್ಯ ಅಷ್ರಿಂಗ್ದಾವೊ ವರಿಸಾ, ಮಿರೆರಾಮ್‌ನ ಶಸ್ತ್ರಾಸ್ತ್ರ ಕಳ್ಳಸಾಗಣೆದಾರ ವನ್ಲಾಲ್‌ಚನಾ ಮತ್ತು ಕೋಲ್ಕತಾದ ಗುತ್ತಿಗೆದಾರ ಜಯಂತ ಕುಮಾರ ಘೋಷ್ ಅವರಿಗೆ 10 ಮತ್ತು 12 ವರ್ಷಗಳ ಪ್ರತ್ಯೇಕ ಜೈಲು ಶಿಕ್ಷೆಗಳನ್ನು ವಿಧಿಸಲಾಗಿದೆ.

ಇವರ ಜೊತೆಗೆ ನಾಲ್ವರು ಗುತ್ತಿಗೆದಾರರು, ಓರ್ವ ಹವಾಲಾ ವ್ಯಾಪಾರಿ, ಸಾರ್ವಜನಿಕ ಆರೋಗ್ಯ ಇಲಾಖೆಯ ಮುಖ್ಯ ಇಂಜಿನಿಯರ್ ಕರುಣಾ ಸೈಕಿಯಾ, ಇನ್ನೋರ್ವ ಸರಕಾರಿ ನೌಕರ ಜಿಬಾಂಗ್ಷು ಪಾಲ್ ಅವರು ಎಂಟು ವರ್ಷಗಳ ಎರಡು ಪ್ರತ್ಯೇಕ  ಜೈಲುಶಿಕ್ಷೆಗಳಿಗೆ ಗುರಿಯಾಗಿದ್ದಾರೆ. ವಿಚಾರಣೆ ವೇಳೆ ತಪ್ಪೊಪ್ಪಿಕೊಂಡಿದ್ದ ಇನ್ನೋರ್ವ ಆರೋಪಿ ಸಮೀರ್ ಅಹ್ಮದ್‌ಗೆ ಐದು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X