Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಕೃತಿ ಪರಿಚಯ
  4. ಮಹಿಳಾ ಹೋರಾಟದ ಹಿನ್ನೋಟ ಮುನ್ನೋಟಗಳ...

ಮಹಿಳಾ ಹೋರಾಟದ ಹಿನ್ನೋಟ ಮುನ್ನೋಟಗಳ ಕುರಿತು ಹೆಣ್ಣೋಟ

ಈ ಹೊತ್ತಿನ ಹೊತ್ತಿಗೆ

-ಕಾರುಣ್ಯಾ-ಕಾರುಣ್ಯಾ24 May 2017 11:44 PM IST
share
ಮಹಿಳಾ ಹೋರಾಟದ ಹಿನ್ನೋಟ ಮುನ್ನೋಟಗಳ ಕುರಿತು ಹೆಣ್ಣೋಟ

 ‘‘ಸಾಕಾರದತ್ತ ಸಮಾನತೆಯ ಕನಸು-ಮಹಿಳಾ ಪ್ರತಿರೋಧದ ನೆಲೆಗಳು’’ ಕೃತಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಹಿನ್ನೆಲೆಯಲ್ಲಿ ನಡೆದ ಕಾರ್ಯಕ್ರಮವೊಂದರ ಸ್ಮತಿ ಸಂಚಯ. 2014ರಲ್ಲಿ ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟವು ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು. ಎರಡು ದಿನ ಅವಧಿಯ ಈ ಮಹಿಳಾ ದಿನಾಚರಣೆಯ ಕಾರ್ಯಚಟುವಟಿಕೆಗಳಲ್ಲಿ ರಾಜ್ಯದ ವಿವಿಧ ಸಂಘಟನೆಗಳು ಭಾಗವಹಿಸಿದ್ದವು. ಪ್ರಸ್ತುತ ಕೃತಿಯಲ್ಲಿ ವಿಚಾರಸಂಕಿರಣ ಹಾಗೂ ಸಮಾವೇಶದ ಸಂದರ್ಭದ ಬೇರೆ ಬೇರೆ ಭಾಷಣ, ಪ್ರಬಂಧಗಳನ್ನು ಬರಹರೂಪದಲ್ಲಿ ಸಂಕಲಿಸಿ ದಾಖಲಿಸಲಾಗಿದೆ. ಡಾ. ಪ್ರೀತಿ ಶುಭಚಂದ್ರ, ಎಂ. ಎನ್. ಸುಮನಾ ಅವರು ಈ ಕೃತಿಯನ್ನು ಸಂಪಾದಿಸಿದ್ದಾರೆ. ಪ್ರೀತಿ ಶ್ರೀಮಂಧರ ಕುಮಾರ್, ಪ್ರೊ. ಸಿ. ಬಸವರಾಜು, ಸುನಂದಾ ಜಯರಾಮ್, ಡಾ. ಕಾರಿನ್ ಕುಮಾರ್, ಡಾ. ನೀಲಗಿರಿ ತಳವಾರ್, ಬಾನು ಮುಷ್ತಾಕ್, ಶಕುನ್, ಮಲ್ಲಿಗೆ, ಪಿ.ಪಿ. ಬಾಬುರಾಜ್, ಅಕೈ ಪದ್ಮಶಾಲಿ, ಅರವಿಂದ ನಾರಾಯಣ, ಡಾ. ವಸುಂಧರಾ ಭೂಪತಿ, ಡಾ. ಎಚ್. ಎಸ್. ಅನುಪಮಾ, ದು. ಸರಸ್ವತಿ, ಕೆ. ನೀಲಾ, ಸಬೀಹಾ ಭೂಮಿಗೌಡ, ಸುಮನಾ ಎಂ. ಎನ್. ಮೊದಲಾದವರ ಚಿಂತನೆಗಳನ್ನು ಈ ಕೃತಿ ಒಳಗೊಂಡಿದೆ.

ಈ ಕೃತಿಯಲ್ಲಿ ಮೂರು ಅಧ್ಯಾಯಗಳಿವೆ. ಮೊದಲ ಭಾಗದಲ್ಲಿ ಮಹಿಳಾ ಹೋರಾಟಗಳ ಕುರಿತಂತೆ ಪ್ರೀತಿ ಶ್ರೀಮಂಧರ ಕುಮಾರ್ ಅವರು ಚರ್ಚಿಸಿದ್ದಾರೆ. ಪ್ರೊ. ಸಿ. ಬಸವರಾಜು ಮಹಿಳಾ ಪರತೆ ಇಲ್ಲದ ಮನಸ್ಸುಗಳಿಂದಾಗಿ ಆಗುತ್ತಿರುವ ಅನಾಹುತಗಳನ್ನು ವಿವರಿಸಿದ್ದಾರೆ. ಅತ್ಯಾಚಾರ ಕಾನೂನು ಮತ್ತು ವಯಸ್ಸಿನ ಕುರಿತಂತೆ ಬಾನು ಮುಷ್ತಾಕ್ ಚರ್ಚಿಸಿದ್ದಾರೆ. ಗಲ್ಲು ಶಿಕ್ಷೆ ಅತ್ಯಾಚಾರವನ್ನು ತಡೆಯಬಹುದೇ ಎಂಬ ವಿಷಯದಲ್ಲಿ ಶಕುನ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಲೈಂಗಿಕತೆ ಮತ್ತು ಹಿಂಸೆ ನಡುವಿನ ತೆಳು ಪರದೆಯನ್ನು ಅಕೈ ಪದ್ಮಶಾಲಿ ಹರಿದಿದ್ದಾರೆ. ಒಟ್ಟಿನಲ್ಲಿ ಈ ಭಾಗ ಮಹಿಳೆಯ ಮೇಲೆ ಬೇರೆ ಬೇರೆ ನೆಪಗಳಲ್ಲಿ ನಡೆಯುವ ಅತ್ಯಾಚಾರ ಮತ್ತು ಅದರ ಜೊತೆಗೆ ವ್ಯವಸ್ಥೆಯ ಪಾಲುದಾರಿಕೆಯನ್ನು ಚರ್ಚಿಸುತ್ತದೆ. ಭಾಗ 2ರಲ್ಲಿ ಬೀದಿ ಬದಿಯ ಪರ್ಯಾಯ ಶಕ್ತಿಯನ್ನು ಅನುಪಮಾ ತೆರೆದುಕೊಟ್ಟಿದ್ದಾರೆ. ಹಿಂಸೆ ಕಗ್ಗತ್ತಲಲ್ಲೂ ಒಂದಿಷ್ಟು ನಿರೀಕ್ಷೆ ಹುಟ್ಟಿಸುವ ವಿಷಯಗಳ ಕುರಿತು ದು. ಸರಸ್ವತಿ ಬೆಳಕುಚೆಲ್ಲಿದ್ದಾರೆ. ಭಾಗ 3ರಲ್ಲಿ ಮಹಿಳಾ ಹೋರಾಟದ ಕಲ್ಲುಮುಳ್ಳಿನ ದಾರಿಯ ಸಾಹಸ ಕಥನದ ಕಡೆಗೆ ಇಮಾ ಲೋರೆಂಬಮ್ ನಾನ್ಬಿ ಅವರು ಹಿನ್ನೋಟ-ಹೆಣ್ಣೋಟ ಬೀರಿದ್ದಾರೆ. ಮತ್ತು ಒಟ್ಟು ಸಮಾವೇಶದ ಚರ್ಚೆ, ನಿರ್ಣಯಗಳನ್ನೂ ಈ ಅಧ್ಯಾಯದಲ್ಲಿ ನೀಡಲಾಗಿದೆ.

ಲಡಾಯಿ ಪ್ರಕಾಶನ ಹೊರತಂದಿರುವ ಈ ಕೃತಿಯ ಒಟ್ಟು ಪುಟಗಳು 168. ಮುಖಬೆಲೆ 120ರೂ. ಆಸಕ್ತರು 94802 86844 ದೂರವಾಣಿಯನ್ನು ಸಂಪರ್ಕಿಸಬಹುದು.
 

share
-ಕಾರುಣ್ಯಾ
-ಕಾರುಣ್ಯಾ
Next Story
X