Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪ್ರೊ.ಇಚ್ಲಂಗೋಡುರವರ ‘ಬ್ಯಾರಿ ಭಾಷೆ...

ಪ್ರೊ.ಇಚ್ಲಂಗೋಡುರವರ ‘ಬ್ಯಾರಿ ಭಾಷೆ ದ್ರಾವಿಡ ಭಾಷೆ’ ಸಂಶೋಧನಾ ಕೃತಿ ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ25 May 2017 1:34 PM IST
share
ಪ್ರೊ.ಇಚ್ಲಂಗೋಡುರವರ ‘ಬ್ಯಾರಿ ಭಾಷೆ ದ್ರಾವಿಡ ಭಾಷೆ’ ಸಂಶೋಧನಾ ಕೃತಿ ಬಿಡುಗಡೆ

ಮಂಗಳೂರು, ಮೇ 25: ಪ್ರೊ. ಬಿ.ಎಂ.ಇಚ್ಲಂಗೋಡುರವರ ‘ಬ್ಯಾರಿ ಭಾಷೆ ದ್ರಾವಿಡ ಭಾಷೆ’ ಸಂಶೋಧನಾ ಕೃತಿಯನ್ನು ಇಂದು ನಗರದ ಪ್ರೆಸ್‌ಕ್ಲಬ್‌ನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ವಿಶ್ರಾಂತ ಪ್ರೊಫೆಸರ್ ಡಾ.ಬಿ.ಸುರೇಂದ್ರ ರಾವ್ ಬಿಡುಗಡೆಗೊಳಿಸಿದರು.

ಈ ಸಂದರ್ಭ ಮಾತನಾಡಿದ ಅವರು, ಬ್ಯಾರಿ ಭಾಷೆ ದ್ರಾವಿಡ ಭಾಷೆ ಎಂಬ ಪ್ರತಿಪಾದನೆಯನ್ನು ಇಚ್ಲಂಗೋಡು ತಮ್ಮ ಸಂಶೋಧನಾ ಕೃತಿಯ ಮೂಲಕ ಮಾಡಿದ್ದಾರೆ ಎಂದರು.

ಯಾವ ಭಾಷೆಯೂ ಸ್ವತಂತ್ರವಾಗಿರುವುದಿಲ್ಲ. ಒಂದು ಭಾಷೆ ಇನ್ನೊಂದು ಭಾಷೆಯ ಸಂಪರ್ಕ ಇಟ್ಟುಕೊಂಡೇ ಬೆಳೆಯುತ್ತದೆ. ಭಾಷೆಯಲ್ಲಿ ಎರವಲು ಪಡೆಯುವುದು ಸ್ವಾಭಾವಿಕವಾಗಿದ್ದು, ಇದರಿಂದಾಗಿಯೇ ಭಾಷೆಯು ಬೆಳವಣಿಗೆಯಾಗುತ್ತವೆ. ಒಂದು ಕಾಲದಲ್ಲಿ ಮಾಪ್ಲ ಮಲಯಾಳದ ಒಂದು ಭಾಗ ಎಂದು ಬ್ಯಾರಿ ಭಾಷೆಯನ್ನು ಪರಿಗಣಿಸಲಾಗಿತ್ತು. ಆದರೆ ಬ್ಯಾರಿ ಭಾಷೆ ದ್ರಾವಿಡ ಭಾಷೆಗಳಲ್ಲಿ ಒಂದು ಎಂಬುದನ್ನು ಈ ಕೃತಿಯಲ್ಲಿ ಪ್ರತಿಪಾದಿಸಲಾಗಿದೆ. ಬ್ಯಾರಿ ಭಾಷೆ ದ್ರಾವಿಡ ಭಾಷೆಯೇ ಎಂಬ ಪ್ರಶ್ನೆಗೆ ಇದು ಕೊನೆಯ ಉತ್ತರ ಎಂದು ಹೇಳಲಾಗದು. ಈ ಬಗ್ಗೆ ಇನ್ನಷ್ಟು ಸಂಶೋಧನೆಗಳು ಹೊರಬರುವ ಸಾಧ್ಯತೆಗಳೂ ಇವೆ. ಬ್ಯಾರಿ ಭಾಷೆ ತನ್ನದೇ ಆದ ರೀತಿಯ ಅನನ್ಯತೆಯನ್ನು ಬೆಳೆಸಿಕೊಂಡು ಬಂದಿದೆ ಎಂದು ಅವರು ಅಭಿಪ್ರಾಯಿಸಿದರು.

ಕೃತಿಯಲ್ಲಿ ಬ್ಯಾರಿ ಭಾಷೆ ದ್ರಾವಿಡ ಭಾಷೆ ಎಂದು ತೋರಿಸುವ ಆಧಾರಗಳು ಮತ್ತು ಪ್ರಾಚೀನತೆಯ ಕುರಿತು ಉಲ್ಲೇಖವಿದೆ. ಬ್ಯಾರಿಗಳಲ್ಲಿದ್ದ ಬರಹ ‘ಬಟ್ಟೆಲುತ್ತು’ ಶಾಸನಗಳು ಮತ್ತು ಬರಹಗಳು, ಬಟ್ಟೆಲುತ್ತು ಲಿಪಿ, ತುಳು ಲಿಪಿ, ಮಲಯಾಳ ಲಿಪಿಮತ್ತು ತಮಿಳು ಲಿಪಿಗಳಿಗಿರುವ ಹೋಲಿಕೆಯ ಸಮರ್ಥನೆ. ಬ್ಯಾರಿಗಳಲ್ಲಿ ಬಳಕೆಯಲ್ಲಿದ್ದ ಅರಬಿ, ಮಲಯಾಳ ಲಿಪಿಯ ಸಾಹಿತ್ಯ ಮತ್ತು ಹಾಡುಗಳ ಪ್ರಭಾ, ಸೆಬಿನಾ ಸಂಸ್ಕೃತಿಯ ಪ್ರಭಾ, ಬ್ಯಾರಿ ಭಾಷೆಯ ಸ್ವಂತಿಕೆ, ಪದ ಬಳಕೆ, ವ್ಯಾಕರಣ ಮತ್ತು ಮಲಯಾಳಕ್ಕಿಂತ ಪ್ರಾಚೀನವೆಂಬ ಸಮರ್ಥನೆ. ತುಳು ಬ್ಯಾರಿ ಭಾಷೆಗಳು ಸಹೋದರ ಭಾಷೆಯಂತಿದ್ದು, ಪ್ರಾಚೀನ ಭಾಷೆ ಎಂದೂ ದ್ರಾವಿಡ ಭಾಷಾ ಮೂಲದ ಭಾಷೆ ಎಂದೂ ಭಾಷಾ ತಜ್ಞರೂ ಅಭಿಪ್ರಾಯಿಸಿದ್ದಾರೆ ಎಂದು ಕೃತಿಕಾರ ಪ್ರೊ. ಬಿ.ಎಂ. ಇಚ್ಲಂಗೋಡು ತಮ್ಮ ಕೃತಿಯಲ್ಲಿ ಉಲ್ಲೇಖಿಸಲಾದ ಅಂಶಗಳ ಬಗ್ಗೆ ಬೆಳಕು ಚೆಲ್ಲಿದರು.

ಗೋಷ್ಠಿಯಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ರಿಜಿಸ್ಟ್ರಾರ್ ಚಂದ್ರಹಾಸ ರೈ, ಮೂಡಬಿದ್ರೆ ಕನ್ನಡ ಸಂಘದ ಕೋಶಾಧಿಕಾರಿ ಜೀವನ್, ಕುಮಾರ್ ಜೈನ್ ಉಪಸ್ಥಿತರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X