Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆ್ಯಸಿಡ್ ಸಂತ್ರಸ್ತೆಗೆ ಮನೆ ಕೊಡುಗೆ...

ಆ್ಯಸಿಡ್ ಸಂತ್ರಸ್ತೆಗೆ ಮನೆ ಕೊಡುಗೆ ನೀಡಿದ ವಿವೇಕ್ ಒಬೆರಾಯ್

ವಾರ್ತಾಭಾರತಿವಾರ್ತಾಭಾರತಿ25 May 2017 4:55 PM IST
share
ಆ್ಯಸಿಡ್ ಸಂತ್ರಸ್ತೆಗೆ ಮನೆ ಕೊಡುಗೆ ನೀಡಿದ ವಿವೇಕ್ ಒಬೆರಾಯ್

ಮುಂಬೈ,ಮೇ 25: ತನ್ನ ಮಾನವೀಯ ಕಾರ್ಯಗಳಿಗಾಗಿ ಹೆಸರಾಗಿರುವ ಬಾಲಿವುಡ್ ನಟ ವಿವೇಕ್ ಒಬೆರಾಯ್ ಅವರು ಈ ಬಾರಿ ಆ್ಯಸಿಡ್ ದಾಳಿಗೊಳಗಾಗಿ ಬದುಕುಳಿದಿರುವ ಲಲಿತಾ ಬೇನ್‌ಬನ್ಸಿಗೆ ಮದುವೆಯ ಉಡುಗೊರೆಯಾಗಿ ಥಾಣೆಯಲ್ಲಿ ಫ್ಲಾಟೊಂದನ್ನು ನೀಡಿದ್ದಾರೆ.

ಥಾಣೆ ಸಮೀಪದ ಕಲ್ವಾ ನಿವಾಸಿ ಲಲಿತಾಳ ಮದುವೆ ಬೇರೊಬ್ಬ ವ್ಯಕ್ತಿಯೊಂದಿಗೆ 2012ರಲ್ಲಿ ನಡೆಯಲಿತ್ತು. ಆದರೆ ಆಕೆಯ ಸೋದರ ಸಂಬಂಧಿಗಳು ವೈಯಕ್ತಿಕ ದ್ವೇಷದಿಂದ ಆಕೆಯ ಮೇಲೆ ದಾಳಿ ನಡೆಸಿದ್ದು, ಆ ಮದುವೆ ರದ್ದಾಗಿತ್ತು. ಲಲಿತಾಳ ಮುಖ ಸಂಪೂರ್ಣ ಸುಟ್ಟುಹೋಗಿದ್ದು, 17 ಬಾರಿ ಆಸ್ಪತ್ರೆಗೆ ದಾಖಲಾಗಿ ಶಸ್ತ್ರಚಿಕಿತ್ಸೆ ಗೊಳಗಾಗಿದ್ದಳು.

ಕಳೆದ ಮಾರ್ಚ್‌ನಲ್ಲಿ ಕಾರ್ಯಕ್ರಮವೊಂದರಲ್ಲಿ ಲಲಿತಾಳನ್ನು ಭೇಟಿಯಾಗಿ ಆಕೆಯ ಸಮಸ್ಯೆಗಳನ್ನು ತಿಳಿದುಕೊಂಡಿದ್ದ ಒಬೆರಾಯ್ ಆಕೆಗೆ ವಾಸಿಸಲು ಸ್ವಂತದ ಸೂರೂ ಇಲ್ಲವೆನ್ನುವದನ್ನು ಅರಿತು ಬೇಸರಿಸಿಕೊಂಡಿದ್ದರು. ಮನೆಯೊಂದನ್ನು ಉಡುಗೊರೆಯಾಗಿ ನೀಡುವುದಾಗಿ ಆಗ ಅವರು ಆಕೆಗೆ ಭರವಸೆ ನೀಡಿದ್ದರು. ಇತ್ತೀಚಿಗೆ ಮೆಚ್ಚಿದ ಯುವಕ ರಾಹುಲ್ ಜೊತೆ ಲಲಿತಾಳ ಮದುವೆ ನಡೆದಿದ್ದು, ಸಮಾರಂಭದಲ್ಲಿ ಭಾಗಿಯಾಗಿದ್ದ ಒಬೆರಾಯ್ ತನ್ನ ಮಾತಿನಂತೆ ಹೊಸ ಫ್ಲಾಟ್ ಉಡುಗೊರೆಯಾಗಿ ನೀಡಿದ್ದಾರೆ. ಅದರ ಚಾವಿಯನ್ನೂ ಒಪ್ಪಿಸಿದ್ದಾರೆ.

ಲಲಿತಾ ನಿಜಕ್ಕೂ ಹಿರೋ ಆಗಿದ್ದಾಳೆ. ಸಾಮಾನ್ಯ ಮಾನವರಂತೆ ತಮ್ಮ ಬದುಕನ್ನು ಸಾಗಿಸಬಹುದೆಂಬ ಹೊಸ ಭರವಸೆಯನ್ನು ಆಕೆ ಸಾವಿರಾರು ಆ್ಯಸಿಡ್ ದಾಳಿ ಸಂತ್ರಸ್ತರಲ್ಲಿ ಮೂಡಿಸಿದ್ದಾಳೆ ಎಂದು ಒಬೆರಾಯ್ ಪ್ರಶಂಸಿಸಿದ್ದಾರೆ.

ಅಂದ ಹಾಗೆ ಲಲಿತಾ ಮದುವೆಗೆ ನಾಂದಿ ಹಾಡಿದ್ದು ರಾಂಗ್‌ನಂಬರ್ ಕರೆ. ಅದೊಂದು ದಿನ ರಾಹುಲ್ ಮಾಡಿದ್ದ ಕರೆ ತಪ್ಪಿ ಲಲಿತಾಗೆ ಬಂದಿತ್ತು. ಅದು ಅವರಿಬ್ಬರ ನಡುವೆ ಪರಿಚಯಕ್ಕೆ ಕಾರಣವಾಗಿ ಪರಸ್ಪರ ಪ್ರೇಮಿಸುತ್ತಿದ್ದರು. ಲಲಿತಾ ಆ್ಯಸಿಡ್ ದಾಳಿಯ ಸಂತ್ರಸ್ತೆಯಾಗಿದ್ದಾಳೆ ಮತ್ತು ತನ್ನ ರೂಪವನ್ನೇ ಕಳೆದುಕೊಂಡಿದ್ದಾಳೆ ಎನ್ನುವುದು ಗೊತ್ತಾದಾಗಲೂ ರಾಹುಲ್ ಆಕೆಯನ್ನು ಬಿಡಲಿಲ್ಲ. ಮೊನ್ನೆ ಮೊನ್ನೆ ಅವರಿಬ್ಬರ ಮದುವೆ ತುಂಬ ಸಂಭ್ರಮದಿಂದಲೇ ನಡೆದಿದೆ.

Amazng luv stry of my lil sistr Lalita Bansi,an acid attack survivor,gt married 2day 2 n amazng man Ravi Shankar who luvs her fr who she is! pic.twitter.com/Pt4gLh0ASn

— Vivek Anand Oberoi (@vivek_oberoi) May 23, 2017

Lalita is a true hero cz she proves 2 1000s of acid attck survivors nationwide tht this isnt a full stp,jst a comma,lyf hs mny possibilities pic.twitter.com/tNvooXfIE1

— Vivek Anand Oberoi (@vivek_oberoi) May 23, 2017
share
ವಾರ್ತಾಭಾರತಿ
ವಾರ್ತಾಭಾರತಿ
Next Story
X