Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಯಡಿಯೂರಪ್ಪಗೆ ತಾಕತ್ತಿದ್ದರೆ ನೇರವಾಗಿ...

ಯಡಿಯೂರಪ್ಪಗೆ ತಾಕತ್ತಿದ್ದರೆ ನೇರವಾಗಿ ಚರ್ಚೆಗೆ ಬರಲಿ: ಎಚ್.ಡಿ.ಕುಮಾರಸ್ವಾಮಿ ಸವಾಲು

ವಾರ್ತಾಭಾರತಿವಾರ್ತಾಭಾರತಿ25 May 2017 8:49 PM IST
share
ಯಡಿಯೂರಪ್ಪಗೆ ತಾಕತ್ತಿದ್ದರೆ ನೇರವಾಗಿ ಚರ್ಚೆಗೆ ಬರಲಿ: ಎಚ್.ಡಿ.ಕುಮಾರಸ್ವಾಮಿ ಸವಾಲು

ಮಂಡ್ಯ, ಮೇ 25: ನನ್ನ ಕುಟುಂಬದ ವಿರುದ್ಧ ಬೇರೆ ಯಾರಿಂದಲೋ ಅರ್ಜಿ ಹಾಕಿಸುವ ಬದಲು, ಯಡಿಯೂರಪ್ಪ ಅವರೇ ತಾಕತ್ತಿದ್ದರೆ ನನ್ನೊಂದಿಗೆ ನೇರವಾಗಿ ಚರ್ಚೆಗೆ ಬರಲಿ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಸವಾಲು ಹಾಕಿದ್ದಾರೆ.

ಅಮಾವಾಸ್ಯೆ ಹಿನ್ನೆಲೆಯಲ್ಲಿ ಗುರುವಾರ ನಾಗಮಂಗಲ ತಾಲೂಕಿನ ಆದಿಚುಂಚನಗಿರಿಯಲ್ಲಿ ಪತ್ನಿ ಸಮೇತ ವಿಶೇಷ ಪೂಜೆ ಸಲ್ಲಿಸಿದ ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, ತನ್ನ ಅಧಿಕಾರವಧಿಯಲ್ಲಿ ಯಾವುದೇ ಭ್ರಷ್ಟಾಚಾರ ನಡೆದಿಲ್ಲ ಎಂದರು.

ಕಾಂಗ್ರೆಸ್‌ನವರಿಗಾಗಲೀ, ಬಿಜೆಪಿಯವರಿಗಾಗಲೀ ನನ್ನ ಆಡಳಿತಾವಧಿಯ ವಿಷಯದ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ. ಯಡಿಯೂರಪ್ಪ ತನ್ನ ಅಧಿಕಾರವಧಿಯ ಮೂರು ವರ್ಷದಲ್ಲಿ ಎಷ್ಟು ಭ್ರಷ್ಟಾಚಾರ ನಡೆಸಿದ್ದಾರೆಂಬುದು ರಾಜ್ಯದ ಜತೆಗೆ ಗೊತ್ತಿದೆ ಎಂದು ಅವರು ಎದುರೇಟು ನೀಡಿದರು.

ಯಡಿಯೂರಪ್ಪ ನನ್ನ ಕುರಿತು ಯಾವುದೋ ಪುಸ್ತಕ ಬಿಡುಗಡೆ ಮಾಡುತ್ತಾರಂತೆ. ಆ ಪುಸ್ತಕದಲ್ಲಿ ನನ್ನ ಬಗ್ಗೆ ಬರೆಯುವುದು ಏನೂ ಇಲ್ಲ. ಬೇಕಾದರೆ, ಯಡಿಯೂರಪ್ಪ ಅವರ ಭೂಹಗರಣ, ಲಂಚ ಪ್ರಕರಣ, ಜಗದೀಶ್ ಶೆಟ್ಟರ್, ಬಸವರಾಜ ಬೊಮ್ಮಾಯಿ ಲೂಟಿ ಮಾಡಿರುವುದನ್ನು ಬರೆದುಕೊಳ್ಳಲಿ ಎಂದು ಅವರು ಲೇವಡಿ ಮಾಡಿದರು.

ತೇಜಸ್ವಿನಿ ರಮೇಶ್‌ಗೌಡ ಅವರ ಟೀಕೆಗೆ ನಾನು ಉತ್ತರ ಕೊಡುವ ಅಗತ್ಯವಿಲ್ಲ, ಬೇರೆಯವರು ಉತ್ತರ ಕೊಡುತ್ತಾರೆ. ರಾಜರಾಜೇಶ್ವರಿ ನಗರ ಶಾಸಕ ಮುನಿರತ್ನ ದಬ್ಬಾಳಿಕೆ ಶಾಶ್ವತವಲ್ಲ, ಜನರೇ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಅವರು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಸರಣಿ ಸಭೆಗಳನ್ನು ನಡೆಸುತ್ತಿರುವುದನ್ನು ಗಮನಿಸಿದರೆ ರಾಜ್ಯದಲ್ಲಿ ಅವಧಿಗೆ ಮುನ್ನವೇ, ಅಂದರೆ, ಡಿಸೆಂಬರ್‌ಗೆ ಚುನಾವಣೆ ನಡೆದರೂ ಆಶ್ಚರ್ಯವಿಲ್ಲ ಎಂದೂ ಕುಮಾರಸ್ವಾಮಿ ಹೇಳಿದರು.

ಕೆಲವರು ದೇವೇಗೌಡರ ಕುಟುಂಬವನ್ನು ಹೊಗಳಿ ಸ್ಥಾನಮಾನ ಪಡೆಯುವ ಯತ್ನ ನಡೆಸಿದರೆ, ಮತ್ತೆ ಕೆಲವರು ತೆಗಳಿ ಸ್ಥಾನಮಾನ ಪಡೆಯುವವರೂ ಇದ್ದಾರೆ. ಚಲುವರಾಯಸ್ವಾಮಿಗೆ ದಿವಂತ ಎಚ್.ಡಿ.ಜಯರಾಂ ಈಗ ನೆನಪಾಗಿದ್ದಾರೆ ಎಂದು ಅವರು ಟೀಕಿಸಿದರು.

ರಾಜ್ಯ ಬರದಲ್ಲಿ ಸಿಲುಕಿದೆ. ಹಾಗಾಗಿ, ಶ್ರೀಮಠದಲ್ಲಿ ಮುರು ಅಮಾವಾಸ್ಯೆ ಪೂಜೆ ಸಲ್ಲಿಸುವ ಸಂಕಲ್ಪ ಮಾಡಿದ್ದೇನೆ. ಈಗ ಎರಡು ಅಮಾವಾಸ್ಯೆ ಮುಗಿದಿದೆ. ಮುಂದಿನ ಅಮಾವಾಸ್ಯೆಗೂ ಪೂಜೆ ಸಲ್ಲಿಸುತ್ತೇನೆ ಎಂದವರು ಸ್ಪಷ್ಟಪಡಿಸಿದರು.

ಶಾಸಕರಾದ ಎನ್.ಅಪ್ಪಾಜಿಗೌಡ, ಕೆ.ಟಿ.ಶ್ರೀಕಂಠೇಗೌಡ, ಶಾಸಕ ನಾರಯಣಗೌಡ, ಮಾಜಿ ಶಾಸಕರಾದ ಎಂ.ಶ್ರೀನಿವಾಸ್, ಕೆ.ಸುರೇಶ್‌ಗೌಡ, ಎಲ್.ಆರ್.ಶಿವರಾಮೇಗೌಡ, ಜಿಪಂ ಸದಸ್ಯ ಶಿವಪ್ರಕಾಶ್, ಜಾ.ದಳ ತಾಲೂಕು ಅಧ್ಯಕ್ಷ ಜವರೇಗೌಡ, ಶ್ರೀನಿವಾಸ್, ನೆಲ್ಲಿಗೆರೆ ಬಾಲು, ಇತರೆ ಮುಖಂಡರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X