Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಕೃತಿ ಪರಿಚಯ
  4. ವಿಜ್ಞಾನದ ಕಣ್ಣಲ್ಲಿ ವಿಮಾನ

ವಿಜ್ಞಾನದ ಕಣ್ಣಲ್ಲಿ ವಿಮಾನ

ಈ ಹೊತ್ತಿನ ಹೊತ್ತಿಗೆ

-ಕಾರುಣ್ಯಾ-ಕಾರುಣ್ಯಾ26 May 2017 12:26 AM IST
share
ವಿಜ್ಞಾನದ ಕಣ್ಣಲ್ಲಿ ವಿಮಾನ

ಆರೆಸ್ಸೆಸ್‌ನ ಚಿಂತನೆ ದೇಶದಲ್ಲಿ ಗಟ್ಟಿಯಾಗುತ್ತಿರುವಂತೆಯೇ ವಿಜ್ಞಾನ-ಪುರಾಣಗಳ ನಡುವೆ ಕಲಬೆರಕೆ ಆರಂಭವಾಗುತ್ತಿದೆ. ಪುರಾಣದ ರೂಪಕಗಳನ್ನೆಲ್ಲ ವಾಸ್ತವಕ್ಕಿಳಿಸಿ, ಅದನ್ನೇ ವಿಜ್ಞಾನ ಎಂದು ಕಲಿಸಿಕೊಡುವ ಹೊಸತೊಂದು ಶಿಕ್ಷಣ ದೇಶಾದ್ಯಂತ ಬೆಳೆಯುತ್ತಿದೆ. ಭಾರತದ ಪ್ರಾಚೀನತೆಯ ವೈಭವವನ್ನು ಸಾರುವ ನೆಪದಲ್ಲಿ ವಿಜ್ಞಾನಕ್ಕೆ ಅಪಮಾನ ಮಾಡುವ ಕೆಲಸಗಳು ನಡೆಯುತ್ತಿವೆ. ಇತ್ತೀಚೆಗೆ, ಪುರಾತನ ಕಾಲದಲ್ಲೇ ಭಾರತದಲ್ಲಿ ವಿಮಾನಗಳಿದ್ದವು ಎನ್ನುವುದನ್ನು ಕೆಲವರು ವಾದಿಸುತ್ತಿದ್ದಾರೆ. ಅದಕ್ಕೆ ರಾಮಾಯಣದಲ್ಲಿ ಬರುವ ‘ಪುಷ್ಪಕ ವಿಮಾನ’ ಕಲ್ಪನೆಯನ್ನು ಉದಾಹರಣೆಯಾಗಿ ನೀಡುತ್ತಿದ್ದಾರೆ.

ಈ ನಿಟ್ಟಿನಲ್ಲಿ ಜಿ.ಶ್ರೀನಿವಾಸ ಮೂರ್ತಿ ಅವರು ಬರೆದಿ ರುವ ‘ವಿಮಾನ ವಿಜ್ಞಾನ’ ನಮ್ಮಲ್ಲಿರುವ ತಪ್ಪುಕಲ್ಪನೆಗಳನ್ನು ನಿವಾರಿಸುತ್ತದೆ ಮಾತ್ರವಲ್ಲ, ವಿಮಾನ ಹಾರಿದ ಕೌತುಕ ಹಂತಗಳನ್ನು ವಿವರಿಸುತ್ತದೆ. ಮುನ್ನುಡಿಯಲ್ಲಿ ಹೇಳುವಂತೆ ವಿಮಾನದ ಇತಿಹಾಸ, ವಿಮಾನದ ಏರುವಿಕೆ, ಏರುಬಲ, ಒತ್ತಡ, ಹಾರಾಟ ನಿಯಂತ್ರಣಾ ವ್ಯವಸ್ಥೆ, ವಿಮಾನದ ಸ್ಥಿರ ಹಾಗೂ ಅಸ್ಥಿರ ಸ್ಥಿತಿಗಳು, ವಿಮಾನದ ಭಾಗಗಳು ಮತ್ತು ಅವುಗಳ ಕಾರ್ಯಗಳು ಮುಂತಾದ ಅನೇಕ ಉಪಯುಕ್ತ ವಿಚಾರಗಳನ್ನು, ಅತ್ಯಂತ ಸೂಕ್ತ ವಾದ ಚಿತ್ರಗಳೊಡನೆ ವಿಜ್ಞಾನ ಕ್ಷೇತ್ರದ ಪರಿಚಯವೇ ಇಲ್ಲದ ಸಾಮಾನ್ಯ ಓದುಗರಿಗೂ ಚೆನ್ನಾಗಿ ಮನನವಾಗುವಂತೆ ಪುಸ್ತಕದಲ್ಲಿ ತಿಳಿಸಿಕೊಡಲಾಗಿದೆ.

ಮಾನವ ನಿರ್ಮಿತ ಹಾರುವ ಯಂತ್ರಗಳು, ಹಾರಾಟದ ಪ್ರಥಮ ಪ್ರಯತ್ನಗಳು, ರೈಟ್ ಸಹೋದರರ ವಿಮಾನ ವಿನ್ಯಾಸ ಹಾಗೂ ಅಭಿವೃದ್ಧಿಯ ವ್ಯವಸ್ಥಿತ ವೈಜ್ಞಾನಿಕ ವಿಧಾನ, ವಾಯು ವಸ್ತು ಪರಸ್ಪರ ವರ್ತನೆ ಮತ್ತು ಹಾರಾಟಕ್ಕೆ ಅನ್ವಯವಾಗುವ ತತ್ವಗಳು, ವಿಮಾನದ ಹಾರಾಟ ಮತ್ತು ನಿಯಂತ್ರಣದ ಬಗೆ, ವಿಮಾನದ ವ್ಯವಸ್ಥೆಗಳು ಮತ್ತು ಉಪಕರಣಗಳು, ವಿಮಾನ ಯಾನ-ಕಳೆದ ಶತಮಾನದ ಅವಲೋಕನ, ವಿಶ್ವದ ಆಧುನಿಕ ವಿಮಾನಗಳು... ವಿಮಾನದ ಒಳ ಹೊರಗನ್ನು ಅತ್ಯಂತ ಸರಳ ವಾಗಿ, ಸ್ಪಷ್ಟವಾಗಿ ಈ ಪುಸ್ತಕದಲ್ಲಿ ನಿರೂಪಿಸಲಾಗಿದೆ. ವಿಮಾನದ ಮುಂದಿರುವ ಸವಾಲುಗಳನ್ನೂ ಕೊನೆಯಲ್ಲಿ ಚರ್ಚಿಸಲಾಗಿದೆ. ವಿಮಾನದ ಕಾರ್ಯನಿರ್ವಹಣೆ ಮಾಡುವ ತಾಂತ್ರಿಕ ಹಾಗೂ ವೈಜ್ಞಾನಿಕ ಅಂಶಗಲು ಸಹಜವಾಗಿಯೇ ಎಲ್ಲರ ಅಚ್ಚರಿಯ ಹಾಗೂ ಕುತೂಹಲದ ಅಂಶಗಳಾಗಿವೆ. ನವಕರ್ನಾಟಕ ಪ್ರಕಾಶನ ಹೊರತಂದಿರುವ ಈ ಕೃತಿಯ ಮುಖಬೆಲೆ 75 ರೂಪಾಯಿ.

share
-ಕಾರುಣ್ಯಾ
-ಕಾರುಣ್ಯಾ
Next Story
X