ಸಾಲದ ಭಾದೆ: ರೈತ ಆತ್ಮಹತ್ಯೆ
ಚಿಕ್ಕಮಗಳೂರು, ಮೇ 26: ಸಾಲದ ಭಾದೆ ತಾಳಲಾರದೆ ರೈತನೋರ್ವ ತಾನು ಧರಿಸಿದ್ದ ಟವೆಲ್ನಿಂದ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಯಗಟಿ ಪೊಲೀಸ್ ಠಾಣೆ ವ್ಯಾಪ್ತಿಯ ಕೋಡಿಹಳ್ಳಿ ಗ್ರಾಮದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ರೈತನನ್ನು ತಿಮ್ಮಪ್ಪ (68) ಎಂದು ಗುರುತಿಸಲಾಗಿದೆ.
ಈ ಬಗ್ಗೆ ಮೃತರ ಪತ್ನಿ ಗಂಗಮ್ಮ ಇಲ್ಲಿನ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.
Next Story





