Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಾಸ್ತವಿಕ ನಿರ್ಧಾರಗಳಿಂದ ಜನತೆಯ...

ವಾಸ್ತವಿಕ ನಿರ್ಧಾರಗಳಿಂದ ಜನತೆಯ ಬದುಕಿನಲ್ಲಿ ಪರಿವರ್ತನೆ : ಮೋದಿ

ಎನ್‌ಡಿಎ ಸರಕಾರದ ತೃತೀಯ ವರ್ಷಾಚರಣೆ

ವಾರ್ತಾಭಾರತಿವಾರ್ತಾಭಾರತಿ26 May 2017 6:40 PM IST
share
ವಾಸ್ತವಿಕ ನಿರ್ಧಾರಗಳಿಂದ ಜನತೆಯ ಬದುಕಿನಲ್ಲಿ ಪರಿವರ್ತನೆ : ಮೋದಿ

 ಹೊಸದಿಲ್ಲಿ, ಮೇ 26: ಕಳೆದ ಮೂರು ವರ್ಷಗಳಿಂದ ಕೇಂದ್ರದ ಎನ್‌ಡಿಎ ಸರಕಾರ ಕೈಗೊಂಡ ವಾಸ್ತವಿಕ ನಿರ್ಧಾರಗಳು ಜನತೆಯ ಬದುಕಿನಲ್ಲಿ ಪರಿವರ್ತನೆಗೆ ಕಾರಣವಾಗಿವೆ ಎಂದು ಹೇಳಿರುವ ಪ್ರಧಾನಿ ನರೇಂದ್ರ ಮೋದಿ, ನರೇಂದ್ರಮೋದಿ ಆ್ಯಪ್‌ನಲ್ಲಿ ನಡೆಸಲಾಗುತ್ತಿರುವ ಕೇಂದ್ರ ಸರಕಾರದ ಸಾಧನೆಯ ಸಮೀಕ್ಷೆಯಲ್ಲಿ ಪಾಲ್ಗೊಂಡು ತಮ್ಮ ಅಭಿಪ್ರಾಯಗಳನ್ನು ಮುಕ್ತವಾಗಿ ಹಂಚಿಕೊಳ್ಳುವಂತೆ ಜನತೆಗೆ ಕರೆ ನೀಡಿದ್ದಾರೆ.

      ತಮ್ಮ ನೇತೃತ್ವದ ಎನ್‌ಡಿ ಸರಕಾರದ ಮೂರನೇ ವರ್ಷಾಚರಣೆಯ ಸಂದರ್ಭ ಸರಣಿ ಟ್ವೀಟ್ ಮಾಡಿರುವ ಮೋದಿ, ‘ಸಾಥ್ ಹೈ, ವಿಶ್ವಾಸ್ ಹೈ, ಹೋರಹ ವಿಕಾಸ್ ಹೈ’ ( ಸಹಕಾರವಿದೆ, ವಿಶ್ವಾಸವಿದೆ ಮತ್ತು ಅಭಿವೃದ್ಧಿ ಆಗುತ್ತಿದೆ) ಎಂದು ತಿಳಿಸಿದ್ದಾರೆ. 2014ರಲ್ಲಿ ಎನ್‌ಡಿಎ ಸರಕಾರ ಆಡಳಿತದ ಚುಕ್ಕಾಣಿ ಹಿಡಿದ ಸಂದರ್ಭ ದೇಶದ ವಿವಿಧ ಕ್ಷೇತ್ರದಲ್ಲಿ ಇದ್ದ ಸ್ಥಿತಿಗೂ ಈಗಿನ ಸ್ಥಿತಿಗೂ ಇರುವ ವ್ಯತ್ಯಾಸವನ್ನು ಅಂಕಿಅಂಶದ ಸಹಿತ ವಿವರಿಸಿದ್ದಾರೆ.

  ಕೃಷಿ, ಮೊಬೈಲ್ ಬ್ಯಾಂಕಿಂಗ್, ಮಹಿಳಾ ಸಶಕ್ತೀಕರಣ, ಮೇಕ್ ಇನ್ ಇಂಡಿಯಾ, ಪ್ರವಾಸೋದ್ಯಮ, ವಿದ್ಯುದೀಕರಣ, ಸೌರಶಕ್ತಿ, ಎಲ್‌ಇಡಿ ಬಲ್ಬ್‌ಗಳ ವಿತರಣೆ- ಇತ್ಯಾದಿ ಕ್ಷೇತ್ರದಲ್ಲಿ ಆಗಿರುವ ಅಭಿವೃದ್ಧಿಯನ್ನು ರೇಖಾಚಿತ್ರ ಸಹಿತ ವಿವರಿಸಿದ್ದಾರೆ. ‘ಮೇಕ್ ಇನ್ ಇಂಡಿಯಾ’ ಅಭಿಯಾನದಿಂದಾಗಿ ಇಲೆಕ್ಟ್ರಾನಿಕ್ಸ್ ವಸ್ತುಗಳ ಉತ್ಪಾದನೆಗೆ ಭಾರೀ ಉತ್ತೇಜನ ದೊರೆತಿದೆ. 2013-14ರಲ್ಲಿ ಇಲೆಕ್ಟ್ರಾನಿಕ್ಸ್ ಕ್ಷೇತ್ರದಲ್ಲಿ ವಿದೇಶಿ ಬಂಡವಾಳದ ಮೊತ್ತ 11,198 ಕೋಟಿ ರೂ. ಆಗಿದ್ದರೆ, ಈಗ 1,43,000 ಕೋಟಿ ರೂ.ಗೆ ತಲುಪಿದೆ. ‘ಡಿಜಿಟಲ್ ಇಂಡಿಯಾ ಫಾರ್ ಡೆವಲಪ್‌ಡ್ ಇಂಡಿಯಾ’ ಅಭಿಯಾನದಡಿ ಆಪ್ಟಿಕಲ್ ಫೈಬರ್ ಬ್ರಾಡ್‌ಬ್ಯಾಂಡ್ ನೆಟ್‌ವರ್ಕ್ ಸೇವೆ 2013-14ರಲ್ಲಿ 358 ಕಿ.ಮೀ ಇದ್ದರೆ, ಈಗ 2,05,404 ಕಿ.ಮೀ.ಗೆ ತಲುಪಿದೆ.

 ಸೌರಶಕ್ತಿ ಕ್ಷೇತ್ರದಲ್ಲಿ ದೇಶವು ಭಾರೀ ಮುನ್ನಡೆ ಸಾಧಿಸಿದ್ದು 2014ರಲ್ಲಿ 2621 ಮೆಗವ್ಯಾಟ್ ಸೌರಶಕ್ತಿ ಉತ್ಪಾದನೆಯಾಗಿದ್ದರೆ ಈಗ 12277 ಮೆಗವ್ಯಾಟ್ ಸೌರವಿದ್ಯುತ್‌ಶಕ್ತಿ ಉತ್ಪಾದನೆಯಾಗುತ್ತಿದೆ. ವಿಶ್ವ ಆರ್ಥಿಕ ವೇದಿಕೆ(ಡಬ್ಯ್ಲೂಇಎಫ್) ಯ ವಿಶ್ವ ಪ್ರವಾಸೋದ್ಯಮ ರ್ಯಾಂಕಿಂಗ್ ಪಟ್ಟಿಯಲ್ಲಿ ಭಾರತ 2014ರಲ್ಲಿ 65ನೇ ಸ್ಥಾನದಲ್ಲಿದ್ದರೆ ಈಗ 40ನೇ ಸ್ಥಾನ ಗಳಿಸಿದೆ ಎಂದು ಮೋದಿ ಗ್ರಾಫಿಕ್ಸ್ ಸಹಿತ ಅಂಕಿ ಅಂಶವನ್ನು ಟ್ವೀಟ್ ಮಾಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X