Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಯುವಕನ ಅಪಹರಿಸಿ ಬಲವಂತದ ವಿವಾಹಕ್ಕೆ...

ಯುವಕನ ಅಪಹರಿಸಿ ಬಲವಂತದ ವಿವಾಹಕ್ಕೆ ಪ್ರಯತ್ನ: ಮದುಮಗಳ ಸಹಿತ ನಾಲ್ವರ ಬಂಧನ

ವಾರ್ತಾಭಾರತಿವಾರ್ತಾಭಾರತಿ27 May 2017 6:29 PM IST
share
ಯುವಕನ ಅಪಹರಿಸಿ ಬಲವಂತದ ವಿವಾಹಕ್ಕೆ ಪ್ರಯತ್ನ: ಮದುಮಗಳ ಸಹಿತ ನಾಲ್ವರ ಬಂಧನ

ಪಾಟ್ನ, ಮೇ 27: ಯುವಕನೋರ್ವನನ್ನು ಅಪಹರಿಸಿ , ತಮ್ಮ ಸಂಬಂಧಿ ಯುವತಿಯೊಂದಿಗೆ ಬಲವಂತದ ವಿವಾಹ ನಡೆಸುವ ಕುಟುಂಬವೊಂದರ ಪ್ರಯತ್ನವನ್ನು ಪೊಲೀಸರು ವಿಫಲಗೊಳಿಸಿದ ಘಟನೆ ಬಿಹಾರದ ಮುಝಫರ್‌ಪುರ ಜಿಲ್ಲೆಯಲ್ಲಿ ನಡೆದಿದೆ.

ಬಿಹಾರದ ಕೆಲವೆಡೆ ‘ಪಕಡ್ವ ಶಾದಿ’ ಎಂಬ ವಿಧಾನ ಬಳಕೆಯಲ್ಲಿದೆ. ಇದರಂತೆ ಪುರುಷರನ್ನು ಅಪಹರಿಸಿ ಅವರನ್ನು ಬಲವಂತ ವಿವಾಹಕ್ಕೆ ಒಪ್ಪಿಸಲಾಗುತ್ತದೆ. ಗೈಘಟ್ ಪೊಲೀಸ್ ಠಾಣಾ ವ್ಯಾಪ್ತಿಯ ಮೈಥಿ ಗ್ರಾಮದಿಂದ ಅಭಿನಯ್ ಕುಮಾರ್ ಎಂಬ ಯುವಕನನ್ನು ಇದೇ ಊರಿನ ನಿವಾಸಿ ನಂದಕಿಶೋರ್ ಸಿಂಗ್ ಎಂಬಾತನ ಸಂಬಂಧಿಗಳು ಅಪಹರಿಸಿರುವುದಾಗಿ ಮತ್ತು ನಂದಕಿಶೋರನ ಪುತ್ರಿ ಜೂಲಿ ಜೊತೆ ಬಲವಂತದ ವಿವಾಹಕ್ಕೆ ಸಿದ್ಧತೆ ನಡೆಸುತ್ತಿರುವುದಾಗಿ ದೂರು ನೀಡಲಾಗಿತ್ತು.

  ಈ ಹಿನ್ನೆಲೆಯಲ್ಲಿ ಸಿಂಗ್ ಮನೆಗೆ ದಾಳಿ ನಡೆಸಿದ ಪೊಲೀಸರು ಕುಮಾರ್‌ನನ್ನು ಮದುವೆ ಮಂಟಪದಿಂದ ತಮ್ಮ ವಶಕ್ಕೆ ಪಡೆದಿದ್ದರು. ಈ ವೇಳೆ ಮದುಮಗಳು ಜೂಲಿ ಮತ್ತು ಆಕೆಯ ಕುಟುಂಬದ ಕೆಲ ಸದಸ್ಯರು ಪೊಲೀಸರ ಮೇಲೆಯೇ ಆಕ್ರಮಣಕ್ಕೆ ಮುಂದಾದರು.

 ಆಗ ಅಪಹರಣ ಮತ್ತು ಸರಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಜೂಲಿ, ಆಕೆಯ ಸೋದರ, ಸೋದರಿ ಮತ್ತು ಇನ್ನೋರ್ವ ಸಂಬಂಧಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಸಂದರ್ಭ ಬಂಧಿತರನ್ನು ಬಿಡುಗಡೆ ಮಾಡುವಂತೆ ಆಗ್ರಹಿಸಿ ಸ್ಥಳೀಯರು ಪೊಲೀಸರ ವಿರುದ್ಧ ಆಕ್ರಮಣಕ್ಕೆ ಪ್ರಯತ್ನಿಸಿದರು. ತಕ್ಷಣ ಸ್ಥಳಕ್ಕೆ ಆಗಮಿಸಿದ ಹೆಚ್ಚುವರಿ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ.

 ಇವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದ್ದು ಶಹೀದ್ ಖುದಿರಾಮ್ ಬೋಸ್ ಕೇಂದ್ರ ಕಾರಾಗೃಹಕ್ಕೆ ರವಾನಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪರಸ್ಪರ ಒಪ್ಪಿಗೆಯಿಂದಲೇ ವಿವಾಹವನ್ನು ನಿಶ್ಚಯಿಸಲಾಗಿದೆ ಎಂದು ನಂದಕಿಶೋರ್ ಸಿಂಗ್ ತಿಳಿಸಿದ್ದಾನೆ. ಆದರೆ ತನ್ನನ್ನು ಅಪಹರಿಸಿ ಬಲವಂತದ ವಿವಾಹಕ್ಕೆ ಒಪ್ಪಿಸಲಾಗಿದೆ ಎಂದು ಕುಮಾರ್ ತಿಳಿಸಿದ್ದಾನೆ.

 ಇವರಿಬ್ಬರ ಮದುವೆ ನಿಶ್ಚಯವಾಗಿದ್ದು ಉಂಗುರ ಬದಲಿಸುವ ಕಾರ್ಯಕ್ರಮ ಶುಕ್ರವಾರ ನಡೆಯಬೇಕಿತ್ತು. ಆದರೆ ಹೆಚ್ಚುವರಿ ವರದಕ್ಷಿಣೆಗೆ ಬೇಡಿಕೆ ಬಂದ ಕಾರಣ ಈ ಸಮಸ್ಯೆ ಉದ್ಭವಿಸಿದೆ ಎಂದು ಜೂಲಿಯ ಕುಟುಂಬಕ್ಕೆ ಆಪ್ತನಾಗಿರುವ ಪ್ರಮೋದ್ ಕುಮಾರ್ ಎಂಬಾತ ತಿಳಿಸಿದ್ದಾನೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X