Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಣ್ಣ ಮಕ್ಕಳನ್ನು ಪತ್ತೆ ಹಚ್ಚುವ ಸಾಧನ...

ಸಣ್ಣ ಮಕ್ಕಳನ್ನು ಪತ್ತೆ ಹಚ್ಚುವ ಸಾಧನ ಅಭಿವೃದ್ಧಿ

ವಾರ್ತಾಭಾರತಿವಾರ್ತಾಭಾರತಿ27 May 2017 9:16 PM IST
share
ಸಣ್ಣ ಮಕ್ಕಳನ್ನು ಪತ್ತೆ ಹಚ್ಚುವ ಸಾಧನ ಅಭಿವೃದ್ಧಿ

ಶಿರ್ವ, ಮೇ 27: ಅಪಹರಣಕ್ಕೆ ಒಳಗಾದ ಸಣ್ಣ ಮಕ್ಕಳನ್ನು ಪತ್ತೆ ಹಚ್ಚುವ ಸಾಧನವೊಂದನ್ನು ಬಂಟಕಲ್ಲು ಶ್ರೀಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾ ಲಯದ ವಿದ್ಯಾರ್ಥಿಗಳು ಅಭಿವೃದ್ಧಿ ಪಡಿಸಿದ್ದಾರೆ.

 ಇಂದು ಸಮಾಜದಲ್ಲಿ ಮಕ್ಕಳ ಅಪಹರಣದ ಸಂಖ್ಯೆ ಪ್ರತಿದಿನ ಏರುತ್ತಿದೆ. ಇದಕ್ಕೆ ಮುಖ್ಯ ಕಾರಣ ತಂದೆತಾಯಿ ತಮ್ಮ ದಿನನಿತ್ಯದ ಕೆಲಸದಲ್ಲಿ ತಲ್ಲೀನರಾಗಿ ಮಕ್ಕಳನ್ನು ನೋಡಿಕೊಳ್ಳಲು ಅಸಾಧ್ಯವಾಗಿರುವುದು. ನ್ಯಾಷನಲ್ ಕ್ರೈಮ್ ರೆಕಾರ್ಡ್ಸ್ ಬ್ಯೂರೊ ಪ್ರಕಾರ ಪ್ರತಿ ಎಂಟು ನಿಮಿಷಗಳಲ್ಲಿ ಒಂದು ಮಗುವಿನ ಅಪಹರಣವಾಗುತ್ತದೆ. ಬಾಲಕಾರ್ಮಿಕ, ಭಿಕ್ಷಾಟನೆ ಮತ್ತು ಲೈಂಗಿಕ ಶೋಷಣೆ ಗಳಿಗಾಗಿ ಭಾರತದಲ್ಲಿ ಅಪಾರ ಸಂಖ್ಯೆಯಲ್ಲಿ ಮಕ್ಕಳ ಕಳ್ಳಸಾಗಣೆ ನಡೆಯುತ್ತಿದೆ. ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ವರದಿಯ ಪ್ರಕಾರ ಸುಮಾರು 40,000 ಮಕ್ಕಳನ್ನು ಪ್ರತಿ ವರ್ಷ ಅಪಹರಿಸಲಾಗುತ್ತಿದೆ. ಇದರಲ್ಲಿ ಸುಮಾರು 11,000 ಮಕ್ಕಳನ್ನು ಪತ್ತೆ ಹಚ್ಚಲು ಸಾಧ್ಯವಾಗುತ್ತಿಲ್ಲ. ಇದಕ್ಕೆಲ್ಲ ಪರಿಹಾರ ಸೂಚಿಸುವ ದಿಶೆಯಲ್ಲಿ ಇಲ್ಲಿದೆ ಒಂದು ಪ್ರಯತ್ನ.

ಈ ಯೋಜನೆಯಲ್ಲಿ ಮುಖ್ಯವಾಗಿ ರಾಸ್ಬರಿ ಪೈ 3, ಜಿಪಿಎಸ್ ಮತ್ತು ಆಂಡ್ರ್ಯೋಡ್ ಆ್ಯಪ್‌ಗಳನ್ನು ಬಳಸಲಾಗಿದೆ. ಇವುಗಳನ್ನು ಸಂಯೋಜಿಸಿ ಒಂದು ಚಿಪ್‌ನ ರೂಪದಲ್ಲಿ ಮಗುವಿನ ಶಾಲಾ ಸಮವಸ್ತ್ರದ ಒಂದು ಗುಪ್ತ ಜಾಗದಲ್ಲಿ ಅಳವಡಿಸಲಾಗುವುದು. ವಿದ್ಯುತ್ ಸಂಪರ್ಕದ ಮೂಲಕ ರಾಸ್ಬರಿ ಪೈಯನ್ನು ಜಿಪಿಎಸ್‌ಗೆ ಜೋಡಿಸಿ ಅದರಿಂದ ಉಪಲಬ್ದವಾಗುವ ವಿವರಗಳಾದ ಅಕ್ಷಾಂಶ ಮತ್ತು ರೇಖಾಂಶಗಳನ್ನು ಡೇಟಾ ಬೇಸ್‌ಗೆ ಅಂತರ್ಜಾಲದ ಬಳಕೆಯಿಂದ ಕಳುಹಿಸಲಾಗುವುದು. ಈ ವಿವರಗಳನ್ನು ವೀಕ್ಷಿಸಲು ಒಂದು ಆಂಡ್ರ್ಯೋಡ್ ಆ್ಯಪನ್ನು ಅಭಿವೃದ್ಧಿ ಪಡಿಸಲಾಗಿದೆ. ಈ ಆ್ಯಪ್‌ನ ಮೂಲಕ ತಂದೆ ತಾಯಿ ತಮ್ಮ ಮಕ್ಕಳ ಮೇಲೆ ಪ್ರತಿಕ್ಷಣ ನಿಗಾ ವಹಿಸಬಹುದು.

ಇದನ್ನು ಹೊರತುಪಡಿಸಿ ಈ ಆ್ಯಪ್‌ನ ಹಲವು ಉಪಯೋಗಗಳು ಇಂತಿವೆ. ಯಾವುದೇ ಸಮಯದಲ್ಲಿ ತಮ್ಮ ಮಕ್ಕಳ ಸ್ಥಳವನ್ನು ಆಂಡ್ರ್ಯೋಡ್ ಆ್ಯಪ್‌ನ ಮುಖಾಂತರ ನಕ್ಷೆಯ ರೂಪದಲ್ಲಿ ನೋಡಬಹುದು. ಮಗುವಿನ ವೇಗದ ಗತಿ ನಿರ್ದಿಷ್ಟ ಪಡಿಸಿದ ಗತಿಯನ್ನು ಮೀರಿದರೆ ಈ ವಿವರವು ಸಂದೇಶದ ರೂಪದಲ್ಲಿ ತಂದೆತಾಯಿಯ ಮೊಬೈಲ್ ಫೋನ್‌ನಲ್ಲಿ ಹೋಗುತ್ತದೆ. ಸೆಟ್‌ರೇಂಜ್ ಎಂಬ ಆಯ್ಕೆಯಿಂದ ಅವರು ನಿರ್ದಿಷ್ಟ ಪರಿಧಿಯನ್ನು ನಿಗದಿಪಡಿಸಬಹುದು. ಒಂದು ವೇಳೆ ನಿಗದಿಪಡಿಸಿದ ಪರಿಧಿಯಿಂದ ಮಗುವು ಹೊರಗೆ ಹೋದಲ್ಲಿ ಆ ಮಗು ಇರುವ ಸ್ಥಳದ ಅಕ್ಷಾಂಶ ಮತ್ತು ರೇಖಾಂಶವು ತಂದೆತಾಯಿಯ ಮೊಬೈಲ್ ಫೋನ್‌ನಲ್ಲಿ ಸಂದೇಶದ ರೂಪದಲ್ಲಿ ಹೋಗುತ್ತದೆ. ಮಗು ಚಲಿಸುವ ದಾರಿಯ ನಕ್ಷಾ ರೂಪದ ರೇಖೆಯನ್ನು ಕೂಡ ಈ ಆ್ಯಪ್‌ನಲ್ಲಿ ಕಾಣಬಹುದು.

‘ಈ ಆ್ಯಪ್ ಮುಖ್ಯವಾಗಿ ಕೆಲಸಕ್ಕೆ ಹೋಗುವ ತಂದೆತಾಯಿಯಂದಿರ ಮಾನಸಿಕ ನೆಮ್ಮದಿಯ ಮೇಲೆ ಧನಾತ್ಮಕ ಪರಿಣಾಮ ಬೀರುವಲ್ಲಿ ಸಫಲವಾಗು ತ್ತದೆ. ತಂದೆತಾಯಿ ತಮ್ಮ ಮಕ್ಕಳ ಬಗ್ಗೆ ಅನಗತ್ಯ ಚಿಂತಿಸುವುದನ್ನು ತಪ್ಪಿಸಿ ಶಾಂತಿ ಯಿಂದ ತಮ್ಮ ದೈನಂದಿನ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಲು ಇದು ಸಹಕಾರಿ. ಈ ಮೂಲಕ ಸಮಾಜದಲ್ಲಿ ಉಂಟಾಗುತ್ತಿರುವ ಮಕ್ಕಳ ಮೇಲಿನ ದೌರ್ಜನ್ಯ ಹಾಗೂ ಅಪರಾಧದ ಪ್ರಮಾಣದಲ್ಲಿ ಗಣನೀಯ ಇಳಿಕೆ ಕಾಣ ಬಹುದು ಎಂದು ಗಣಕಯಂತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಬಿ.ಎನ್. ರಾಮಚಂದ್ರ ಮಾರ್ಗದರ್ಶನದಲ್ಲಿ ಸಾಧನ ಅಭಿವೃದ್ದಿ ಪಡಿಸಿದ ವಿದ್ಯಾರ್ಥಿ ಗಳಾದ ಶ್ರೀರಾಜ್, ನಿಶ್ಮಿತಾ, ನಿವೇದಿತಾ ಹಾಗೂ ಸಾತ್ವಿಕ್ ಹೇಳುತ್ತಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X