Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ಅನಲ ಮಹಿಳೆಯ ಕಣ್ಣೀರ ಕಥೆ

ಅನಲ ಮಹಿಳೆಯ ಕಣ್ಣೀರ ಕಥೆ

ವಾರ್ತಾಭಾರತಿವಾರ್ತಾಭಾರತಿ28 May 2017 2:04 PM IST
share
ಅನಲ ಮಹಿಳೆಯ ಕಣ್ಣೀರ ಕಥೆ

ಸಾಗರವನ್ನು, ಬಾನಂಗಳವನ್ನು, ಕನಸನ್ನು, ಕಲ್ಪನೆಯನ್ನು ಬಂಧಿಸಿಡಲು ಸಾಧ್ಯವೇ?....ಹೆಣ್ತನ ಎನ್ನುವುದು ಪ್ರಕೃತಿಯ ಸ್ವಚ್ಛಂದ ಸೊಬಗು. ಇಂತಹ ಚೆಲುವನ್ನು ಆನಂದಿಸಲಾರದವನಲ್ಲಿ ಪುರುಷ ಅಹಂಕಾರ ಹೆಪ್ಪುಗಟ್ಟಿರುತ್ತದೆ.

ಹೆಣ್ಣು ಹಾಗೂ ಪ್ರಕೃತಿಯ ವಿನಾಶಕ್ಕೆ ಪುರುಷನ ಸಂಕುಚಿತತೆ, ಸ್ವಾರ್ಥ, ಅಹಂ ಹೇಗೆ ಕಾರಣವಾಗಿವೆ ಎಂಬುದನ್ನು ನಿರ್ದೇಶಕಿ ಸಂಜ್ಯೋತಿ ‘ಅನಲ’ ಸಿನೆಮಾದ ಮೂಲಕ ಕಟ್ಟಿಕೊಟ್ಟಿದ್ದಾರೆ. ಮತ್ತು ವೀಕ್ಷಕರಲ್ಲಿ ಹಲವು ಪ್ರಶ್ನೆಗಳನ್ನು ಹುಟ್ಟು ಹಾಕುವಲ್ಲಿ ಯಶಸ್ವಿಯಾಗಿದ್ದಾರೆ. ಗಂಡು-ಹೆಣ್ಣಿನ ನಡುವೆ ಇರುವ ತಾರತಮ್ಯವೇ ‘ಅನಲ’ ಸಿನೆಮಾದ ಕೇಂದ್ರ ಬಿಂದುವಾಗಿದ್ದರೂ ಅದನ್ನು ವಿವಿಧ ಪ್ರತಿಮೆಗಳ ಮೂಲಕ ಅಭಿವ್ಯಕ್ತಿಸಿರುವ ರೀತಿ ಗಂಡು-ಹೆಣ್ಣೆಂಬ ಮಿತಿಯ ಚೌಕಟ್ಟನ್ನು ಮೀರಿ ಹಲವು ಮಜಲುಗಳಲ್ಲಿ ಚಿಂತಿಸುವಲ್ಲಿ ಯಶಸ್ವಿಯಾಗಿದೆ.

‘ಅನಲ’ ಸಿನೆಮಾ ಕೇವಲ 30 ನಿಮಿಷಗಳ ಕಿರುಚಿತ್ರವಾದರೂ ಅದು ನಮ್ಮಳಗೆ ಹಲವು ಪ್ರಶ್ನೆಗಳನ್ನು ಹುಟ್ಟುಹಾಕುತ್ತಲೇ ವಿಸ್ತಾರತೆಯನ್ನು ಪಡೆದುಕೊಳ್ಳುತ್ತದೆ. ಈ ಸಿನೆಮಾದಲ್ಲಿ ಕಣ್ಣಿಗೆ ಕಾಣುವಷ್ಟು ಸಾಗರ, ವಿಶಾಲವಾದ ಬಾನಂಗಳವನ್ನು ಹೆಣ್ಣಿಗೆ ಹೋಲಿಸಲಾಗಿದೆ. ಅನಾದಿ ಕಾಲದಿಂದಲೂ ಈ ಪುರುಷ ಅಹಂಕಾರ ಹೆಣ್ಣನ್ನು ಹೇಗೆ ಬಂಧಿಸಿಡಲಾಗಿದೆಯೋ ಅದೇ ರೀತಿಯಲ್ಲಿ ಸಾಗರ, ಬಾನಂಗಳವನ್ನು ನಿಯಂತ್ರಿಸಲು ಹೊರಟಿದ್ದಾನೆ ಎಂಬುದನ್ನು ಹೆಣ್ಣಿನ ಕಾಲಿಗೆ ನುಣುಪಾದ ಹಗ್ಗದಲ್ಲಿ ಕಟ್ಟಿಹಾಕಿರುವ ದೃಶ್ಯವು ನೋಡುಗರಿಗೆ ಹಲವು ಬಗೆಯಲ್ಲಿ ಚಿಂತನೆಗೆ ಹಚ್ಚುತ್ತದೆ. ಹೆಣ್ಣಿನ ಪ್ರತೀ ಮಾತು, ಪ್ರತೀ ನಡವಳಿಕೆಯನ್ನು ಅನಾದಿ ಕಾಲ ದಿಂದಲೂ ಕಟ್ಟುಪಾಡುಗಳಿಗೆ ಒಳಪಡಿಸಿ ನಿಯಂತ್ರಿಸಲಾಗಿದೆ. ಹಾಗೂ ಈ ಕಟ್ಟುಪಾಡಿನಲ್ಲಿ ಕೊಂಚ ಏರುಪೇರಾದರೂ ಆ ಹೆಣ್ಣನ್ನು ಅಸಹಜವಾಗಿ ನೋಡುವ ಮೂಲಕ ಅವಮಾನ ಹಾಗೂ ಭಯ ಹುಟ್ಟಿಸುವ ಮೂಲಕ ಪುನಃ ಚೌಕಟ್ಟಿನೊಳಗಿಡುವಂತೆ ಪುರುಷ ಪ್ರಧಾನ ವ್ಯವಸ್ಥೆ ಸದಾ ಒತ್ತಡ ಹಾಕುತ್ತದೆ.

ಹೆಣ್ಣನ್ನು ದೈಹಿಕವಾಗಿ ಬಂಧಿಸಿಡಬಹುದೇ ಹೊರತು ಅವಳ ಸ್ವಚ್ಛಂದವಾದ ಕನಸನ್ನು ಹಾಗೂ ಕಲ್ಪನೆಗಳನ್ನಲ್ಲ. ಹೆಣ್ಣು ಪ್ರಕೃತಿಯಷ್ಟೇ ನಿರ್ಮಲ ಹಾಗೂ ಸಹನಶೀಲಳು. ಇದನ್ನೇ ಬಲಹೀನತೆಯೆಂದು ಪುರುಷ ಪ್ರಧಾನ ವ್ಯವಸ್ಥೆ ದುರುಪಯೋಗ ಪಡಿಸಿಕೊಂಡು ಸಮಾಜದಲ್ಲಿ ಅಶಾಂತ ವಾತಾವರಣವನ್ನು ಹರಡುತ್ತಿರುವುದರ ಕುರಿತು ‘ಅನಲ’ ಸಿನೆಮಾ ವೀಕ್ಷಕರಿಗೆ ಕಟ್ಟಿಕೊಡುವುದರಲ್ಲಿ ಯಶಸ್ವಿಯಾಗಿದೆ.

ಸಿನೆಮಾ: ಅನಲ
ಚಿತ್ರಕತೆ-ಸಂಭಾಷಣೆ-ನಿರ್ದೇಶನ: ಸಂಜ್ಯೋತಿ

ಸಹ ನಿರ್ಮಾಪಕ: ನಿತಿನ್

ಛಾಯಾಗ್ರಹಣ-ಜಿ.ಆರ್.ವಿಶ್ವನಾಥ್

share
ವಾರ್ತಾಭಾರತಿ
ವಾರ್ತಾಭಾರತಿ
Next Story
X