Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಎಸ್ಸಿ-ಎಸ್ಟಿ ಮಾಸಿಕ ಸಭೆ: ಪಿಜಿ...

ಎಸ್ಸಿ-ಎಸ್ಟಿ ಮಾಸಿಕ ಸಭೆ: ಪಿಜಿ ಸೆಂಟರ್‌ಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸಲು ಆಗ್ರಹ

ವಾರ್ತಾಭಾರತಿವಾರ್ತಾಭಾರತಿ28 May 2017 5:23 PM IST
share
ಎಸ್ಸಿ-ಎಸ್ಟಿ ಮಾಸಿಕ ಸಭೆ: ಪಿಜಿ ಸೆಂಟರ್‌ಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸಲು ಆಗ್ರಹ

ಮಂಗಳೂರು, ಮೇ 28: ನಗರದಲ್ಲಿ ಅದರಲ್ಲೂ ದಲಿತ ಕಾಲನಿಯಲ್ಲಿರುವ ಪಿಜಿ ಸೆಂಟರ್ (ಖಾಸಗಿ ಅತಿಥಿ ಗೃಹಗಳು)ಗಳಲ್ಲಿ ಸಿಸಿ ಕ್ಯಾಮರಾ ಅಳಡವಡಿಸಲು ಸೂಕ್ತ ಕ್ರಮ ಜರಗಿಸಬೇಕು ಎಂದು ದಲಿತ ಸಂಘಟನೆಯ ಮುಖಂಡ ರಘುವೀರ್ ಸೂಟರ್‌ಪೇಟೆ ಆಗ್ರಹಿಸಿದರು.

ಮಂಗಳೂರು ನಗರ ಪೊಲೀಸ್ ಆಯುಕ್ತಾಲಯದಲ್ಲಿ ಡಿಸಿಪಿ ಡಾ. ಸಂಜೀವ ಪಾಟೀಲ್ ಅಧ್ಯಕ್ಷತೆಯಲ್ಲಿ ರವಿವಾರ ನಡೆದ ಮಾಸಿಕ ಎಸ್ಸಿ-ಎಸ್ಟಿ ಸಭೆಯಲ್ಲಿ ಅವರು ಅಹವಾಲು ಮಂಡಿಸಿದರು.

ನಗರದ ಬಹುತೇಕ ಕಡೆ ಪರವಾನಿಗೆ ಇಲ್ಲದೆ ಅನಧಿಕೃತವಾಗಿ ಪಿಜಿ ಸೆಂಟರ್‌ಗಳನ್ನು ತೆರೆಯಲಾಗಿದೆ. ಇಲ್ಲಿಗೆ ಯಾರು ಬರುತ್ತಾರೆ, ಹೋಗುತ್ತಾರೆ ಎಂಬುದರ ಬಗ್ಗೆ ಮಾಹಿತಿ ಇರುವುದಿಲ್ಲ. ಅಲ್ಲದೆ, ದಲಿತ ಕಾಲನಿಗಳ ಆಸುಪಾಸು ಇರುವ ಈ ಪಿಜಿ ಸೆಂಟರ್‌ಗಳಲ್ಲಿರುವ ಕೆಲವರು ದಲಿತ ಸಮುದಾಯದವರನ್ನು ಗುರಿಯಾಗಿಸಿಕೊಂಡು ಮಾದಕ ದ್ರವ್ಯದಂತಹ ಜಾಲಕ್ಕೆ ತಳ್ಳುವ ಅಪಾಯವಿದೆ. ಈ ಹಿನ್ನೆಲೆಯಲ್ಲಿ ಪಿಜಿ ಸೆಂಟರ್‌ಗಳಲ್ಲಿ ಸಿಸಿ ಕ್ಯಾಮರಾ ಹಾಕಿಸಬೇಕು. ಅನಧಿಕೃತ ಪಿಜಿ ಸೆಂಟರ್‌ಗಳನ್ನು ಮುಚ್ಚಿಸಬೇಕು ಎಂದು ಒತ್ತಾಯಿಸಿದರು.

ದಲಿತ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವು ಪೊಲೀಸ್ ಠಾಣೆಗಳಲ್ಲಿ ಅಧಿಕಾರಿಗಳು, ಪೊಲೀಸರು ಪ್ರತಿ ದೂರು ಸಲ್ಲಿಸಲು ಸೂಚಿಸುತ್ತಾರೆ. ದಲಿತ ದೌರ್ಜನ್ಯ ಪ್ರಕರಣದ ಆರೋಪಿಗಳನ್ನು ಬಂಧಿಸದೆ ಅವರು ಜಾಮೀನು ಪಡೆಯಲು ಅವಕಾಶ ಕಲ್ಪಿಸಿಕೊಡುತ್ತಾರೆ ಎಂದು ದಲಿತ ಸಂಘಟನೆಯ ಮುಖಂಡರಾದ ಎಸ್ಪಿ ಆನಂದ, ರಘುವೀರ್ ಸೂಟರ್‌ಪೇಟೆ ಮತ್ತಿತರರು ಹೇಳಿದರು.

ದಲಿತ ದೌರ್ಜನ್ಯ ಆಗಲಿ, ಬೇರೆ ಯಾವುದೇ ಪ್ರಕರಣವಾದರೂ ಪೊಲೀಸರು ಪ್ರತಿ ದೂರು ನೀಡಲು ಕುಮ್ಮಕ್ಕು ನೀಡುವಂತಿಲ್ಲ. ಒಂದು ವೇಳೆ ಅಂತಹ ಪ್ರಯತ್ನ ನಡೆದಿದ್ದರೆ ಮಾಹಿತಿ ನೀಡಬಹುದು. ಅಂತಹ ಅಧಿಕಾರಿ ಅಥವಾ ಪೊಲೀಸರ ವಿರುದ್ಧ ಕ್ರಮ ಜರಗಿಸಲಾಗುವುದು ಎಂದು ಡಿಸಿಪಿ ಸಂಜೀವ ಪಾಟೀಲ್ ಭರವಸೆ ನೀಡಿದರು.

ಎಸಿಪಿ ಮಟ್ಟದ ಸಭೆ ನಡೆಸಿ: ದಲಿತ ಕಾಲನಿಗಳಲ್ಲಿ ಎಸಿಪಿ ಮಟ್ಟದ ಅಧಿಕಾರಿಗಳು ಅಹವಾಲು ಸಭೆ ನಡೆಸಬೇಕು, ಇದರಿಂದ ದಲಿತರಲ್ಲಿ ಮಾನಸಿಕ ಸ್ಥೈರ್ಯ ತುಂಬಲು ಸಾಧ್ಯವಿದೆ ಎಂದು ರಘುವೀರ್ ಸೂಟರ್‌ಪೇಟೆ ಹೇಳಿದರು. ಈ ಬಗ್ಗೆ ಪರಿಶೀಲಿಸಿ ಕ್ರಮ ಜರಗಿಸಲಾಗುವುದು ಎಂದು ಡಿಸಿಪಿ ಸಂಜೀವ ಪಾಟೀಲ್ ಹೇಳಿದರು.

ದಲಿತೇತರರ ಉಪಸ್ಥಿತಿ ಬಗ್ಗೆ ಆಕ್ಷೇಪ: ದಲಿತ ಅಹವಾಲು ಆಲಿಸುವಿಕೆಗೆ ಸಂಬಂಧಿಸಿ ನಡೆಯುವ ವಿವಿಧ ಸಭೆಗಳಲ್ಲಿ ದಲಿತೇತರರು ಉಪಸ್ಥಿತರಿರುತ್ತಾರೆ. ಇದು ಸರಿಯಲ್ಲ. ಈ ಬಗ್ಗೆ ಕ್ರಮ ಜರಗಿಸಬೇಕು ಎಂದು ದಲಿತ ಸಂಘಟನೆ ಮುಖಂಡ ಮುಖೇಶ್ ಹೇಳಿದರು.

ದಲಿತರ ಪರವಾಗಿ ಇತರರು ಸಭೆಯಲ್ಲಿದ್ದು, ಅಹವಾಲು ಮಂಡಿಸಬಹುದು. ಅವರ ಉಪಸ್ಥಿತಿ ಬಗ್ಗೆ ಆಕ್ಷೇಪ ಬೇಡ. ದಲಿತ ಪರ ಸಭೆಗಳಲ್ಲಿ ಉಪಸ್ಥಿತರಿರುವ ದಲಿತೇತರರು ಇತರ ಸಮುದಾಯದ ಅಹವಾಲು ಆಲಿಸಿದರೆ ಕಡಿವಾಣ ಹಾಕಲಾಗುವುದು ಎಂದು ಡಾ. ಸಂಜೀವ ಪಾಟೀಲ್ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X