Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸರ್ಫಿಂಗ್ ಕ್ರೀಡೆಗೆ ಪ್ರೋತ್ಸಾಹ...

ಸರ್ಫಿಂಗ್ ಕ್ರೀಡೆಗೆ ಪ್ರೋತ್ಸಾಹ ಸಿಗುವಂತಾಗಲಿ: ಕ್ರಿಕೆಟಿಗ ಜಾಂಟಿ ರೋಡ್ಸ್

ಇಂಡಿಯನ್ ಓಪನ್ ಸರ್ಫಿಂಗ್ ಸಮಾರೋಪ

ವಾರ್ತಾಭಾರತಿವಾರ್ತಾಭಾರತಿ28 May 2017 10:41 PM IST
share
ಸರ್ಫಿಂಗ್ ಕ್ರೀಡೆಗೆ ಪ್ರೋತ್ಸಾಹ ಸಿಗುವಂತಾಗಲಿ: ಕ್ರಿಕೆಟಿಗ ಜಾಂಟಿ ರೋಡ್ಸ್

ಮಂಗಳೂರು, ಮೇ 28: ಕ್ರಿಕೆಟ್ ಬಿಟ್ಟರೆ ಸರ್ಫಿಂಗ್ ನನ್ನ ಆಸಕ್ತಿಯುತ ಕ್ರೀಡೆ. ದೈಹಿತ ಮತ್ತು ಮಾನಸಿಕ ನೆಮ್ಮದಿಗೆ ಈ ಕ್ರೀಡೆ ಸಹಕಾರಿಯಾಗಿದೆ. ಈ ನಿಟ್ಟಿನಲ್ಲಿ ಇಂತಹ ಕ್ರೀಡೆ ಬೆಳೆಸುವಲ್ಲಿ ವಿಶೇಷ ಮುತುವರ್ಜಿ ಮತ್ತು ಪೋತ್ಸಾಹ ಅಗತ್ಯವಾಗಿದೆ ಎಂದು ಮಾಜಿ ಕ್ರಿಕೆಟಿಗ ಜಾಂಟಿ ರೋಡ್ಸ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಅವರು ರವಿವಾರ ನಗರದ ಹೊರಭಾಗದಲ್ಲಿರುವ ಸಸಿಹಿತ್ಲು ಬೀಚ್‌ನಲ್ಲಿ ಮೂರು ದಿನಗಳ ಕಾಲ ನಡೆದ ಇಂಡಿಯನ್ ಓಪನ್ ಆಫ್ ಸರ್ಫಿಂಗ್‌ನ ಸಮಾರೋಪದಲ್ಲಿ ಭಾಗವಹಿಸಿ ಮಾತನಾಡಿದರು.

ಕ್ರಿಕೆಟ್ ವಿಚಾರವನ್ನು ಬಿಟ್ಟು ಸರ್ಫಿಂಗ್ ಕಡೆಗೆ ಆಕರ್ಷಿತನಾಗಿದ್ದೇನೆ. ಭಾರತದಲ್ಲಿ ಸರ್ಫಿಂಗ್ ಕ್ರೀಡೆ ಬಹಳಷ್ಟು ಮಂದಿಯನ್ನು ಆಕರ್ಷಣೆ ಮಾಡುತ್ತಿದೆ. ಕರಾವಳಿ ಭಾಗದಲ್ಲೂ ಈ ಕುರಿತು ವಿಶೇಷ ಒಲವು ವ್ಯಕ್ತವಾಗುತ್ತಿರುವುದು ಸಂತೋಷದ ವಿಚಾರ ಎಂದವರು ಹೇಳಿದರು.

ಮೂರು ವರ್ಷದ ಹಿಂದೆ ಸಸಿಹಿತ್ಲುವಿಗೆ ಬಂದಾಗ ಬೀಚ್ ನಿರೀಕ್ಷಿತ ಮಟ್ಟದಲ್ಲಿ ಅಭಿವೃದ್ಧಿಯನ್ನು ಕಂಡಿರಲಿಲ್ಲ. ಕಳೆದ ವರ್ಷದ ಸರ್ಫಿಂಗ್‌ನ ಮೂಲಕವಾಗಿ ಪ್ರಸ್ತುತ ಸಸಿಹಿತ್ಲು ರಾಷ್ಟ್ರಮಟ್ಟದಲ್ಲಿ ಗುರುತಿಸುವಂತಾಗಿದೆ. ಇದರ ಹಿಂದೆ ಸಾಕಷ್ಟು ಮಂದಿ ದುಡಿದಿದ್ದಾರೆ. ಪ್ರಸ್ತುತ, ಭಾರತ ಸರ್ಫಿಂಗ್‌ನಲ್ಲಿ ವಿಶೇಷ ಆಸಕ್ತಿಯನ್ನ ಹೊಂದಿದ್ದು, ಈ ಬಾರಿ ನಡೆದ ಇಂಡಿಯನ್ ಓಪನ್ ಸರ್ಫಿಂಗ್ ಅತ್ಯಂತ ಯಶಸ್ವಿಯಾಗಿದೆ ಎಂದು ಜಾಂಟಿ ರೋಡ್ಸ್ ಹೇಳಿದರು.

ಬಾಲಿವುಡ್ ನಟ ಸುನೀಲ್ ಶೆಟ್ಟಿ ಮಾತನಾಡಿ, ಕರಾವಳಿಯಲ್ಲಿ ಸರ್ಫಿಂಗ್ ಕ್ರೀಡೆಗೆ ಹೆಚ್ಚಿನ ಪ್ರೋತ್ಸಾಹ ದೊರಕುತ್ತಿರುವುದು ಸಂತೋಷದ ವಿಚಾರ. ಇದರಿಂದಾಗಿ ಪ್ರತಿಭೆಗಳಿಗೆ ಇನ್ನಷ್ಟು ಪ್ರೇರಣೆ ದೊರಕಲಿದೆ. ಈ ಕ್ರೀಡೆಯಲ್ಲಿ ಗುರುತಿಸಿಕೊಂಡ ಹಲವು ಸರ್ಫಿಂಗ್ ಸಾಧಕರು ದೇಶ ಮತ್ತು ವಿದೇಶಗಳಲ್ಲಿ ಹೆಸರು ಮಾಡಿರುವುದು ಹೆಮ್ಮೆಯ ವಿಚಾರ ಎಂದರು.

ಈ ಸಂದರ್ಭದಲ್ಲಿ ವಿವಿಧ ವಿಭಾಗದಲ್ಲಿ ವಿಜೇತರಾದವರಿಗೆ ಪ್ರಶಸ್ತಿಯನ್ನು ವಿತರಿಸಲಾಯಿತು. ದ.ಕ. ಜಿಲ್ಲಾಧಿಕಾರಿ ಡಾ.ಕೆ.ಜಿ. ಜಗದೀಶ್, ಅಪರ ಜಿಲ್ಲಾಧಿಕಾರಿ ಕುಮಾರ್, ದ.ಕ. ಜಿ.ಪಂ. ಸಿಇಒ ಡಾ.ಎಂ.ಆರ್. ರವಿ, ಶಾಸಕ ಕೆ. ಅಭಯಚಂದ್ರ ಜೈನ್, ಮುಖ್ಯ ಸಚೇತಕ ಐವನ್ ಡಿಸೋಜ, ಮೇಯರ್ ಕವಿತಾ ಸನಿಲ್, ಮಿಸ್ ಇಂಡಿಯಾ ಸೌತ್ ನಿಕ್ಷಿತಾ ಶೆಣೈ, ವಸಂತ ಬರ್ನಾಡ್, ಸರ್ಫಿಂಗ್ ಸ್ವಾಮಿ, ಜಲಜ, ಕಿಶೋರ್ ಕುಮಾರ್, ಮಿಥುನ್ ರೈ, ಮನೋಹರ ಶೆಟ್ಟಿ, ಯತೀಶ್ ಬೈಕಂಪಾಡಿ, ಗೌರವ ಹೆಗ್ಡೆ, ಜೀವನ್ ಸಲ್ದಾನ ಮೊದಲಾದವರು ಉಪಸ್ಥಿತರಿದ್ದರು.

10 ಸಾವಿರ ಪ್ರೇಕ್ಷಕರು: ಸಸಿಹಿತ್ಲು ಬೀಚ್‌ನಲ್ಲಿ ಮೂರು ದಿನಗಳ ಕಾಲ ನಡೆದ ಇಂಡಿಯನ್ ಓಪನ್ ಆಫ್ ಸರ್ಫಿಂಗ್‌ನ ಸಮಾರೋಪದಲ್ಲಿ ರವಿವಾರ ಬೆಳಗ್ಗೆಯಿಂದ ಸಂಜೆಯ ತನಕ ಸುಮಾರು 10 ಸಾವಿರಕ್ಕೂ ಅಧಿಕ ಮಂದಿ ಪ್ರೇಕ್ಷಕರು ಸರ್ಫಿಂಗ್ ಕ್ರೀಡೆಯ ಸವಿಯನ್ನು ಸವಿದರು.

ದೇಶ ಮತ್ತು ವಿದೇಶಗಳಿಂದಲೂ ಆಗಮಿಸಿದ ಸರ್ಫಿಂಗ್ ಕ್ರೀಡಾಭಿಮಾನಿಗಳು ಕ್ರೀಡೆಯ ಸವಿಯನ್ನು ಸವಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X