Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 9 ವರ್ಷಗಳಿಂದ ಪಾಕಿಸ್ತಾನದಲ್ಲಿ...

9 ವರ್ಷಗಳಿಂದ ಪಾಕಿಸ್ತಾನದಲ್ಲಿ ಸಿಲುಕಿರುವ ಮಗಳನ್ನು ಮರಳಿ ಕರೆತನ್ನಿ: ಸುಷ್ಮಾ ಸ್ವರಾಜ್ ಗೆ ವೃದ್ಧ ದಂಪತಿ ಮನವಿ

ವಾರ್ತಾಭಾರತಿವಾರ್ತಾಭಾರತಿ29 May 2017 9:26 AM IST
share
9 ವರ್ಷಗಳಿಂದ ಪಾಕಿಸ್ತಾನದಲ್ಲಿ ಸಿಲುಕಿರುವ ಮಗಳನ್ನು ಮರಳಿ ಕರೆತನ್ನಿ: ಸುಷ್ಮಾ ಸ್ವರಾಜ್ ಗೆ ವೃದ್ಧ ದಂಪತಿ ಮನವಿ

ಹೊಸದಿಲ್ಲಿ, ಮೇ 28: ಪಾಕಿಸ್ತಾನದಲ್ಲಿ ಸಿಲುಕಿದ್ದ ಭಾರತೀಯ ಯುವತಿ ಉಝ್ಮಾ ಭಾರತಕ್ಕೆ ಮರಳಿದ ನಂತರ ಇದೀಗ ಹೈದರಾಬಾದ್ ನ ದಂಪತಿಯೊಂದು 9 ವರ್ಷಗಳಿಂದ ಪಾಕಿಸ್ತಾನದಲ್ಲಿ ಸಿಲುಕಿರುವ ತಮ್ಮ ಮಗಳನ್ನು ಭಾರತಕ್ಕೆ ಕರೆ ತರುವಂತೆ ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ರನ್ನು ಆಗ್ರಹಿಸಿದ್ದಾರೆ.

ಪಾಕಿಸ್ತಾನದಲ್ಲಿ ತಮ್ಮ ಮಗಳ ಮೇಲೆ ಆಕೆಯ ಪತಿ ದೌರ್ಜನ್ಯ ಎಸಗುತ್ತಿದ್ದು, ಆಕೆಯನ್ನು ಭಾರತಕ್ಕೆ ಮರಳಿ ಕರೆತಂದರೆ ಅಭಾರಿಯಾಗಿರುವುದಾಗಿ ದಂಪತಿ ತಿಳಿಸಿದ್ದಾರೆ.

“ನಮ್ಮ ಮಗಳು ಪಾಕಿಸ್ತಾನದಲ್ಲಿ ಸಂಕಷ್ಟದಲ್ಲಿದ್ದಾಳೆ. ವರ್ಷಗಳಿಂದ ನಾನು ಆಕೆಯನ್ನು ಕಾಯುತ್ತಿದ್ದೇನೆ. ಸರಕಾರದ ಪ್ರಯತ್ನದಿಂದ ಉಝ್ಮಾ ಭಾರತಕ್ಕೆ ಹಿಂದಿರುಗಿದ ಮೇಲೆ ನನ್ನ ಮಗಳನ್ನೂ ಸರಕಾರ ಭಾರತಕ್ಕೆ ಕರೆಸಬಹುದು ಎಂಬ ಆಶಾಭಾವನೆಯಲ್ಲಿದ್ದೇನೆ. ಈ ಪವಿತ್ರ ರಮಝಾನ್ ತಿಂಗಳಲ್ಲಿ ನನ್ನ ಮಗಳೊಂದಿಗೆ ಹಬ್ಬ ಆಚರಿಸುವ ಆಸೆಯಿದೆ, ಮಗಳ ಮೇಲೆ ದೌರ್ಜನ್ಯ ನಡೆಸಲಾಗುತ್ತಿದೆ. ಗುಲಾಮಳಂತೆ ಆಕೆಯನ್ನು ನೋಡಲಾಗುತ್ತಿದೆ. ಸುಷ್ಮಾ ಸ್ವರಾಜ್ ಜಿ ನನ್ನ ಮಗಳನ್ನು ವಾಪಸ್ ಕರೆತನ್ನಿ” ಎಂದು ಪಾಕಿಸ್ತಾನದಲ್ಲಿ ಸಿಲುಕಿರುವ ಮುಹಮ್ಮದಿ ಬೇಗಂರ ತಾಯಿ ವಿನಂತಿಸಿದ್ದಾರೆ,

“9 ವರ್ಷಗಳಿಂದ ಪಾಕಿಸ್ತಾನದಲ್ಲೇ ಉಳಿದಿರುವ ನಮ್ಮ ಮಗಳು ಕರೆ ಮಾಡಿ ಭಾರತಕ್ಕೆ ಮರಳಿ ಕರೆ ತರುವಂತೆ ಹೇಳುತ್ತಾಳೆ. ಸಾಕಷ್ಟು ಪ್ರಯತ್ನದ ನಂತರ ಉಝ್ಮಾಳನ್ನು ಕರೆತಂದ ಸುಷ್ಮಾ ಜೀ ನನ್ನ ಮಗಳನ್ನೂ ವಾಪಸ್ ಕರೆ ತಂದರೆ ಅಭಾರಿಯಾಗಿರುತ್ತೇನೆ” ಎಂದು ಯುವತಿಯ ತಂದೆ ಅಕ್ಬರ್ ಹೇಳಿದ್ದಾರೆ.

ಇಸ್ಲಾಮಾಬಾದ್ ನಲ್ಲಿರುವ ಭಾರತೀಯ ರಾಯಭಾರಿ ಕಚೇರಿಯಲ್ಲಿ ಈ ಬಗ್ಗೆ ಮಾತನಾಡಿದ್ದು, ಮಗಳ ಪ್ರಕರಣದಲ್ಲಿ ನಿರಂತರ ಪ್ರಯತ್ನದಲ್ಲಿರುವುದಾಗಿ ಅವರು ತಿಳಿಸಿದ್ದಾರೆ ಎಂದು ಅಕ್ಬರ್ ಮಾಹಿತಿ ನೀಡಿದ್ದಾರೆ.

ಯುವತಿ ಒಮಾನ್ ನಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭ ಪಾಕಿಸ್ತಾನಿ ಪ್ರಜೆ ಮುಹಮ್ಮದ್ ಯೂನುಸ್ ಆಕೆಗೆ ವಂಚನೆಗೈದು ಮದುವೆಯಾಗಿ ಪಾಕಿಸ್ತಾನಕ್ಕೆ ಕರೆದೊಯ್ದಿದ್ದ ಎಂದು ದಂಪತಿ ಮಾಹಿತಿ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X