Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಗದಗ: ಗ್ರಾಮಸ್ಥರನ್ನು ಕಂಗೆಡಿಸಿದ...

ಗದಗ: ಗ್ರಾಮಸ್ಥರನ್ನು ಕಂಗೆಡಿಸಿದ ಪ್ಲಾಸ್ಟಿಕ್ ಸಕ್ಕರೆ

ಪ್ಯಾಕೇಟ್ ಮೇಲೆ ಬೀಳಗಿ ಶುಗರ್ಸ್ ಹೆಸರಿನ ಲೇಬಲ್; ಅಧಿಕಾರಿಗಳ ನಿರ್ಲಕ್ಷ: ಗ್ರಾಮಸ್ಥರ ಆರೋಪ

ಫಾರೂಕ್ ಮಕಾನದಾರಫಾರೂಕ್ ಮಕಾನದಾರ29 May 2017 6:38 PM IST
share
ಗದಗ: ಗ್ರಾಮಸ್ಥರನ್ನು ಕಂಗೆಡಿಸಿದ ಪ್ಲಾಸ್ಟಿಕ್ ಸಕ್ಕರೆ

ಗದಗ, ಮೇ 29: ಪ್ಲಾಸ್ಟಿಕ್ ಮೊಟ್ಟೆ, ಪ್ಲಾಸ್ಟಿಕ್ ಅಕ್ಕಿ ಸರತಿ ಮುಗಿಯಿತು. ಇದೀಗ ಪ್ಲಾಸ್ಟಿಕ್ ಸಕ್ಕರೆಯ ಸರತಿ ಬಂದಾಗಿದೆ. ಜಿಲ್ಲೆಯ ಜನರಲ್ಲಿ ಈ ಪ್ಲಾಸ್ಟಿಕ್ ಸಕ್ಕರೆ ನಡುಕ ಹುಟ್ಟಿಸಿದೆ. ಗದಗ ಜಿಲ್ಲೆಯ ರೋಣ ತಾಲೂಕಿನ ಐತಿಹಾಸಿಕ ಧಾರ್ಮಿಕ ಕ್ಷೇತ್ರ ಇಟಗಿಯಲ್ಲಿ ಹಲವು ಅಂಗಡಿಗಳಲ್ಲಿ ಪ್ಲಾಸ್ಟಿಕ್‌ ಸಕ್ಕರೆ ಮಾರಾಟವಾಗುತ್ತಿದೆ ಎಂದು ತಿಳಿದುಬಂದಿದೆ.

ಇದು ನೋಡೋದಕ್ಕೆ ಥೇಟ್ ಸಕ್ಕರೆಯಂತೆಯೇ ಕಂಡರು ನಿಜವಾದ ಸಕ್ಕರೆ ಅಲ್ಲ. ಈ ಸಕ್ಕರೆಯನ್ನು ಕೆಲ ಸಮಯ ನೀರೊಳಗೆ ಕುದಿಸಿದಾಗ ಮಾತ್ರ ಇದರ ನಿಜ ಬಣ್ಣ ಬಯಲಾಗುತ್ತದೆ. ಇದರಿಂದ ಕಳೆದ ನಾಲ್ಕು ದಿನಗಳಿಂದ ಇಲ್ಲಿನ ಗ್ರಾಮಸ್ಥರಿಗೆ ಆತಂಕ ಮನೆ ಮಾಡಿದೆ.

ಇಟಗಿ ಗ್ರಾಮದ ಕಿರಾಣಿ ಅಂಗಡಿಗಳಲ್ಲಿ ಮಾರಾಟ ಆಗುತ್ತಿರುವ ಸಕ್ಕರೆ, ಪ್ಲಾಸ್ಟಿಕ್ ಸಕ್ಕರೆ ಅನ್ನುವುದು ಗ್ರಾಮಸ್ಥರನ್ನು ಕಂಗೆಡಿಸಿದೆ. ಇಲ್ಲಿನ ಜನರು ಈ ಸಕ್ಕರೆ ಪ್ಲಾಸ್ಟಿಕ್ ಸಕ್ಕರೆ ಎಂದು ಸಾಬೀತುಪಡಿಸಲು ಪ್ರಾಯೋಗಿಕವಾಗಿಯೂ ಸಹ ಪರೀಕ್ಷಿಸಿಕೊಂಡಿದ್ದಾರೆ.
ನೀರಿನಲ್ಲಿ ಕೇವಲ ಈ ಸಕ್ಕರೆಯನ್ನು ಮಾತ್ರ ಹಾಕಿ, ಕೆಲಕಾಲ ಕುದಿಸಿದರೆ ಇದರ ನಿಜಬಣ್ಣ ಏನೇಂಬುವುದು ಬಯಲಾಗುತ್ತದೆ. ಕುದಿಯುವ ಸಮಯದಲ್ಲಿ ಸುಟ್ಟ ಪ್ಲಾಸ್ಟಿಕ್‌ ವಾಸನೆಯಿಂದ, ಸಕ್ಕರೆಯಲ್ಲಾ ಕರಕಲಾಗುತ್ತೆ. ಇದರಿಂದಾಗಿ ಇದು ಪ್ಲಾಸ್ಟಿಕ್ ಸಕ್ಕರೆ ಅನ್ನುವ ವಿಷಯ ಬಹಿರಂಗವಾಗಿದೆ.
 

ಇಡೀ ಗ್ರಾಮದ ಕಿರಾಣಿ ಅಂಗಡಿಗಳಲ್ಲಿ ಈ ಸಕ್ಕರೆಯೇ ಪೂರೈಕೆಯಾಗಿದೆ. ಇಟಗಿ ಗ್ರಾಮದ ಅಂಗಡಿಗೆ ಪೂರೈಕೆಯಾದ ಸಕ್ಕರೆ ರೋಣ ಪಟ್ಟಣದ ಭವಾನಿ ಕಿರಾಣಿ ಸ್ಟೋರ್ಸ್‌ನಿಂದ ಸಂದಾಯಿಸಲಾಗಿದೆ. ಸಕ್ಕರೆ ಪ್ಯಾಕೆಟ್ ಮೇಲೆ ಬಾಗಲಕೋಟ ಜಿಲ್ಲೆಯ ಬೀಳಗಿ ತಾಲೂಕಿನ ಬೀಳಗಿ ಶುಗರ್ಸ್ ಹೆಸರಿನ ಲೇಬಲ್ ಇದ್ದು, ಈ ರೀತಿಯ ಸಕ್ಕರೆ ಹೇಗೆ ಮಾರುಕಟ್ಟೆಗೆ ಕಾಲಿಟ್ಟಿದೆ ಎಂಬುದು ತನಿಖೆಯಿಂದ ತಿಳಿದುಬರಬೇಕಾಗಿದೆ.

ಪ್ಲಾಸ್ಟಿಕ್ ಸಕ್ಕರೆಯ ವಿಷಯ ತಿಳಿಯುತ್ತಿದ್ದಂತೆ ಗ್ರಾಮಕ್ಕೆ ಕಂದಾಯ ಇಲಾಖೆಯ ಆಹಾರ ಇಲಾಖೆ ಅಧಿಕಾರಿ ಭೇಟಿ ನೀಡಿ ಸಕ್ಕರೆ ಪರಿಶೀಲಿಸಿದ್ದಾರೆ. ನಂತರ ರೋಣದ ಭವಾನಿ ಕಿರಾಣಿ ಸ್ಟೋರ್ಸ್‌ನಲ್ಲಿರುವ ಸಕ್ಕರೆಯನ್ನು ಪರಿಶೀಲಿಸಿದ್ದಾರೆ.

ಕಳೆದ ನಾಲ್ಕು ದಿನದಿಂದ ಇಟಗಿ ಹಾಗೂ ಸುತ್ತಲಿನ ಗ್ರಾಮದಲ್ಲಿ ಪ್ಲಾಸ್ಟಿಕ್ ಸಕ್ಕರೆ ಪೂರೈಕೆಯಾಗಿರುವ ವಿಷಯ ತಿಳಿದಿದ್ದರು ಸಹ ಆರೋಗ್ಯ ಇಲಾಖೆ, ಆಹಾರ ಸುರಕ್ಷತಾ ಗುಣಮಟ್ಟ ಪ್ರಾಧಿಕಾರದ ಯಾವೊಬ್ಬ ಅಧಿಕಾರಿಗಳು ಬಂದು ಪರಿಶೀಲಿಸಿಲ್ಲ ಎನ್ನುವುದು ಇಲ್ಲಿನ ಜನರ ಗಂಭೀರ ಆರೋಪವಾಗಿದೆ.

ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕಿದ್ದ ಅಧಿಕಾರಿಗಳ ಈ ನಿರ್ಲಕ್ಷಧೋರಣೆ ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ. ಪ್ಲಾಸ್ಟಿಕ್ ಸಕ್ಕರೆಯಿಂದ ಜನರಿಗೆ ಗಂಭೀರ ಸಮಸ್ಯೆ ಎದುರಾಗುವ ಮೊದಲು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಅನ್ನುವುದು ಸ್ಥಳೀಯರ ಆಗ್ರಹವಾಗಿದೆ.
 

ಅಧಿಕಾರಿಗಳು ಯಾವುದೇ ಒತ್ತಡಕ್ಕೆ ಮಣಿಯದೆ ನೈಜವಾಗಿ ತನಿಖೆ ಮಾಡಿದಾಗ, ಈ ಅಕ್ರಮದಲ್ಲಿರುವ ಮುಖ ಬಯಲಾಗಲು ಸಾಧ್ಯ. ಜನರ ಜೀವನದ ಜೊತೆ ಚಲ್ಲಾಟವಾಡುವ ದುಷ್ಟ ಶಕ್ತಿಗಳ ಮಟ್ಟ ಹಾಕಲು ಅಧಿಕಾರಿಗಳು ಇಚ್ಛಾಶಕ್ತಿ ತೋರಬೇಕಿದೆ.

ಸಕ್ಕರೆಯನ್ನು ನೀರಿನಲ್ಲಿ ಹಾಕಿ ಕುದಿಸಿದರೆ ಮನೆ ತಂಬಾ ಪ್ಲಾಸ್ಟಿಕ್ ಸುಟ್ಟ ವಾಸನೆ ಬರುತ್ತದೆ. ಅಷ್ಟೆ ಅಲ್ಲ ಪಾತ್ರೆಯ ತಳಭಾಗದಲ್ಲಿ ಪ್ಲಾಸ್ಟಿಕ್‌ನಂತಹ ಪದಾರ್ಥ ಶೇಖರಣೆಯಾಗುತ್ತಿದೆ. ಇದರಿಂದ ನಾವಿದನ್ನು ಪ್ಲಾಸ್ಟಿಕ್ ಸಕ್ಕರೆ ಎಂದು ಕರೆಯುತ್ತಿದ್ದೇವೆ.
-ಶಕುಂತಲಾ, ಗ್ರಾಮಸ್ಥೆ.

ಗ್ರಾಮದಲ್ಲಿ ತಾಂಡವಾಡುತ್ತಿರುವ ಈ ಪ್ಲಾಸ್ಟಿಕ್ ಸಕ್ಕರೆ ಗ್ರಾಮಸ್ಥರ ಆರೋಗ್ಯವನ್ನು ಹಾಳು ಮಾಡುತ್ತಿದೆ. ಇಡೀ ಗ್ರಾಮಕ್ಕೆ ಮಾರಕವಾಗಿರುವ ಈ ಪ್ಲಾಸ್ಟಿಕ್ ಸಕ್ಕರೆಯ ಮೂಲವನ್ನು ಪತ್ತೆ ಹಚ್ಚಿ ಇದರಲ್ಲಿ ಶಾಮೀಲಾದವರ ಮೇಲೆ ನಿರ್ದಾಕ್ಷೀಣ್ಯವಾಗಿ ಕ್ರಮ ಕೈಗೊಳ್ಳಬೇಕು.  

-ಕರಿಯಪ್ಪ ತುಪ್ಪಲಕಟ್ಟಿ, ಕಿರಾಣಿ ವ್ಯಾಪರಸ್ಥ.

share
ಫಾರೂಕ್ ಮಕಾನದಾರ
ಫಾರೂಕ್ ಮಕಾನದಾರ
Next Story
X