Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಎಚ್-1ಬಿ ವೀಸಾ ನಿಯಮದಿಂದ ಐಟಿ...

ಎಚ್-1ಬಿ ವೀಸಾ ನಿಯಮದಿಂದ ಐಟಿ ಉದ್ದಿಮೆಗಳಿಗೆ ತೀವ್ರ ಹಾನಿ

ವಾರ್ತಾಭಾರತಿವಾರ್ತಾಭಾರತಿ29 May 2017 7:51 PM IST
share
ಎಚ್-1ಬಿ ವೀಸಾ ನಿಯಮದಿಂದ ಐಟಿ ಉದ್ದಿಮೆಗಳಿಗೆ ತೀವ್ರ ಹಾನಿ

ಹೊಸದಿಲ್ಲಿ, ಮೇ 29: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಜಾರಿಗೆ ತಂದಿರುವ ವೀಸಾ ನಿಯಮದಿಂದ ಉದ್ದಿಮೆಗಳಿಗೆ ತೀವ್ರ ಹಾನಿಯಾಗಲಿದೆ ಎಂದು ದೇಶದ ಬೃಹತ್ ಟೆಕ್ನಾಲಜಿ ಸೇವಾ ಸಂಸ್ಥೆಗಳಲ್ಲಿ ಒಂದಾಗಿರುವ ಟೆಕ್ ಮಹೀಂದ್ರ ಸಂಸ್ಥೆಯ ಉಪಾಧ್ಯಕ್ಷ ವಿನೀತ್ ನಯ್ಯರ್ ತಿಳಿಸಿದ್ದಾರೆ.
ಕಳೆದ ಎರಡು ವರ್ಷಗಳಿಂದ ತಮ್ಮ ಸಂಸ್ಥೆಯ ಲಾಭಗಳಿಕೆಯ ಪ್ರಮಾಣದಲ್ಲಿ ಇಳಿಮುಖವಾಗಿದ್ದು ಸಂಸ್ಥೆಯ ಬಂಡವಾಳದ ಪ್ರಮಾಣ ಕೂಡಾ ಕಡಿಮೆಯಾಗಿದೆ. ಸಂಸ್ಥೆಯ ಸರಾಸರಿ ಲಾಭ 7.8 ಬಿಲಿಯನ್ ರೂ. ಆಗಿದ್ದು ನಾಲ್ಕನೇ ತ್ರೈಮಾಸಿಕದ ಅವಧಿಯಲ್ಲಿ ಸಂಸ್ಥೆ 5.9 ಬಿಲಿಯನ್ ರೂ. ನಿವ್ವಳ ಲಾಭ ದಾಖಲಿಸಿದೆ. ಇದು ಶೇ.17ರಷ್ಟು ಕಡಿಮೆಯಾಗಿದೆ. ಟ್ರಂಪ್ ಅವರ ‘ಅಮೆರಿಕ ಮೊದಲು’ ಕಾರ್ಯಸೂಚಿ ಮತ್ತು ವಲಸೆ ಬರುವುದನ್ನು ತಡೆಯುವ ಎಚ್-1ಬಿ ವೀಸಾ ನಿಯಮವು ಐಟಿ ಕ್ಷೇತ್ರಕ್ಕೆ ಘಾಸಿಯುಂಟು ಮಾಡಲಿದೆ ಎಂದವರು ತಿಳಿಸಿದ್ದಾರೆ.

ಟೆಕ್ ಮಹೀಂದ್ರ ಸಂಸ್ಥೆಯ ವಾರ್ಷಿಕ ಆರ್ಥಿಕ ಫಲಿತಾಂಶ ಪ್ರಕಟವಾದ ಬಳಿಕ ಹಲವು ವಿಶ್ಲೇಷಕರು ಸಂಸ್ಥೆಯ ಶ್ರೇಯಾಂಕವನ್ನು ಕಡಿಮೆಗೊಳಿಸಿದ್ದಾರೆ. ಹಲವರು ತಮ್ಮಲ್ಲಿದ್ದ ಶೇರುಗಳನ್ನು ಕಡಿಮೆ ಬೆಲೆಗೆ ವಿಕ್ರಯ ಮಾಡಿದ್ದಾರೆ ಎಂದವರು ತಿಳಿಸಿದ್ದಾರೆ.

     ಕಾಗ್ನಿಝಂಟ್ ಟೆಕ್ನಾಲಜಿ ಸೊಲ್ಯೂಷನ್ಸ್ ಮುಂತಾದ ತಂತ್ರಜ್ಞಾನ ಸೇವಾ ಸಂಸ್ಥೆಗಳು ಭಾರತದಲ್ಲಿರುವ ಶಾಖೆಗಳಲ್ಲಿ ಸಿಬ್ಬಂದಿಗಳ ಸಂಖ್ಯೆಯಲ್ಲಿ ಕಡಿತ ಮಾಡುತ್ತಿವೆ. ಟ್ರಂಪ್ ತಂತ್ರಜ್ಞಾನ ಸೇವಾ ಸಂಸ್ಥೆಗಳಲ್ಲಿ ಅನವಶ್ಯಕವಾಗಿ ಸಮಸ್ಯೆಯನ್ನು ಉತ್ತೇಜಿಸಿದ್ದಾರೆ ಮತ್ತು ಕೆಲಸ ಕಡಿತಕ್ಕೆ ಕಾರಣವಾಗಿದ್ದಾರೆ ಎಂದು ಉದ್ಯೋಗಿಗಳು ದೂರುತ್ತಿದ್ದಾರೆ. ಇದುವರೆಗೆ ಐಟಿ ಕ್ಷೇತ್ರದಲ್ಲಿ ಕಾರ್ಮಿಕರ ಯೂನಿಯನ್ ಬಗ್ಗೆ ಯಾರೂ ಮಾತನಾಡುತ್ತಿರಲಿಲ್ಲ. ಯಾಕೆಂದರೆ ಈ ಕ್ಷೇತ್ರದಲ್ಲಿ ಸಿಬ್ಬಂದಿಗಳಿಗೆ ಸಾಕಷ್ಟು ಸಂಬಳ ದೊರೆಯುತ್ತಿತ್ತು . ಆದರೆ ಈಗ ಐಟಿ ಕ್ಷೇತ್ರದಲ್ಲೂ ಕಾರ್ಮಿಕರ ಯೂನಿಯನ್ ಸ್ಥಾಪಿಸುವ ಬಗ್ಗೆ ಚಿಂತನೆ ನಡೆಯುತ್ತಿದೆ.

  ಇದೀಗ ಯುರೋಪ್ ಮತ್ತು ಅಮೆರಿಕದಲ್ಲಿ ರಾಜಕೀಯ ಮತ್ತು ಆರ್ಥಿಕ ಕ್ಷೇತ್ರದಲ್ಲಿ ಸಾಕಷ್ಟು ಗೊಂದಲದ ಸ್ಥಿತಿಯಿದೆ. ಅದೇನಿದ್ದರೂ ತಂತ್ರಜ್ಞಾನ ಸೇವೆಗಿರುವ ಬೇಡಿಕೆ ನಿರಂತರವಾಗಿ ಮುಂದುವರಿಯಲಿದೆ. ಇದೀಗ ಇರುವ ಅನಿಶ್ಚಿತತೆಯ ಸ್ಥಿತಿ ದೂರವಾಗಿ , ಗುರಿಯೆಡೆಗೆ ಸಾಗುವ ದಾರಿಯೊಂದು ಗೋಚರವಾಗಲಿದೆ ಎಂಬ ಆಶಾವಾದ ಇದೆ ಎಂದು ವಿನೀತ್ ನಯ್ಯರ್ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X