Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪತಂಜಲಿ ಉತ್ಪನ್ನ ಗುಣಮಟ್ಟದ...

ಪತಂಜಲಿ ಉತ್ಪನ್ನ ಗುಣಮಟ್ಟದ ಪರೀಕ್ಷೆಯಲ್ಲಿ ವಿಫಲ

ವಾರ್ತಾಭಾರತಿವಾರ್ತಾಭಾರತಿ29 May 2017 8:38 PM IST
share
ಪತಂಜಲಿ ಉತ್ಪನ್ನ ಗುಣಮಟ್ಟದ ಪರೀಕ್ಷೆಯಲ್ಲಿ ವಿಫಲ

ಹರಿದ್ವಾರ, ಮೇ 29: ಬಾಬಾ ರಾಮ್‌ದೇವ್ ಅವರ ಪತಂಜಲಿ ಉತ್ಪನ್ನಗಳು ಸೇರಿದಂತೆ ಸುಮಾರು ಶೇ.40ರಷ್ಟು ಆಯುರ್ವೇದ ಉತ್ಪನ್ನಗಳು ಕೆಳದರ್ಜೆಯ ಗುಣಮಟ್ಟ ಹೊಂದಿರುವುದಾಗಿ ಹರಿದ್ವಾರದ ಆಯುರ್ವೇದ ಮತ್ತು ಯುನಾನಿ ಕಚೇರಿ ತಿಳಿಸಿದೆ.

   2013ರಿಂದ 2016ರವರೆಗಿನ ಅವಧಿಯಲ್ಲಿ 82 ಮಾದರಿಗಳನ್ನು ಪರೀಕ್ಷಿಸಲಾಗಿದ್ದು ಇದರಲ್ಲಿ ಪತಂಜಲಿಯ ‘ದಿವ್ಯ ಆಮ್ಲ ಜ್ಯೂಸ್, ಶಿವ್‌ಲಿಂಗಿ ಬೀಜ’ ಸೇರಿದಂತೆ 32 ಉತ್ಪನ್ನಗಳು ಗುಣಮಟ್ಟ ಪರೀಕ್ಷೆಯಲ್ಲಿ ವಿಫಲವಾಗಿವೆ ಎಂದು ಮಾಹಿತಿ ಹಕ್ಕು ಕಾಯ್ದೆಯಡಿ ಪಡೆಯಲಾದ ಮಾಹಿತಿಯಿಂದ ತಿಳಿದ ಬಂದಿದೆ.

        ಪತಂಜಲಿ ಸಂಸ್ಥೆಯ ನೆಲ್ಲಿಕಾಯಿ ಜ್ಯೂಸ್ ನಿರ್ಧಿಷ್ಟ ಗುಣಮಟ್ಟವನ್ನು ಹೊಂದಿಲ್ಲ ಎಂದು ಕಳೆದ ತಿಂಗಳು ಪ.ಬಂಗಾಲದ ಸಾರ್ವಜನಿಕ ಸ್ವಾಸ್ಥ ಪ್ರಯೋಗಾಲಯ ನಡೆಸಿದ ಪರೀಕ್ಷೆಯಿಂದ ತಿಳಿದು ಬಂದ ಬಳಿಕ ಇವುಗಳ ಮಾರಾಟಕ್ಕೆ ಸಶಸ್ತ್ರ ದಳಗಳ ಕ್ಯಾಂಟೀನ್ ಸ್ಟೋರ್ಸ್ ಡಿಪಾರ್ಟ್‌ಮೆಂಟ್ ನಿಷೇಧ ಹೇರಿತ್ತು. ಪತಂಜಲಿ ಉತ್ಪನ್ನಗಳಲ್ಲಿ ನೀರಿನಲ್ಲಿ ಕರಗಬಲ್ಲ ಹುಳಿಯ ಅಂಶ ನಿಗದಿತ ಅಂಶಕ್ಕಿಂತ ಕಡಿಮೆ ಇರುವುದು ಪತ್ತೆಯಾಗಿದೆ. ಈ ಅಂಶ ಕಡಿಮೆಯಾಗಿದ್ದರೆ ಅಸಿಡಿಟಿ ಮುಂತಾದ ಸಮಸ್ಯೆಗಳಿಗೆ ಕಾರಣವಾಗುತ್ತದೆ. ಅಲ್ಲದೆ ‘ಶಿವಲಿಂಗಿ ಬೀಜ’ದಲ್ಲಿ ಶೇ.31.68ರಷ್ಟು ವಿದೇಶಿ ಪದಾರ್ಥ ಇರುವುದು ದೃಢಪಟ್ಟಿದೆ.

ಆದರೆ ಪ್ರಯೋಗಾಲಯದ ವರದಿಯನ್ನು ರಾಮ್‌ದೇವ್ ಸಹವರ್ತಿ ಮತ್ತು ಪತಂಜಲಿ ಸಂಸ್ಥೆಯ ಆಡಳಿತ ನಿರ್ದೇಶಕ ಆಚಾರ್ಯ ಬಾಲಕೃಷ್ಣ ನಿರಾಕರಿಸಿದ್ದಾರೆ. ಶಿವಲಿಂಗಿ ಬೀಜ ಒಂದು ಪ್ರಾಕೃತಿಕ ಬೀಜ. ಅದನ್ನು ಕಲಬೆರೆಕೆ ಮಾಡಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿರುವ ಅವರು, ಪತಂಜಲಿ ಸಂಸ್ಥೆಯ ಹೆಸರು ಕೆಡಿಸಲು ಮಾಡಿರುವ ಪ್ರಯತ್ನ ಇದಾಗಿದೆ ಎಂದಿದ್ದಾರೆ.

ಪತಂಜಲಿ ಉತ್ಪನ್ನಗಳಲ್ಲದೆ, ಅವಿಪಟ್ಟಿಕರ ಚೂರ್ಣ, ತಲಿಸದ್ಯ ಚೂರ್ಣ, ಪುಷ್ಯಾನುಗ ಚೂರ್ಣ, ಲವಣ ಭಾಸ್ಕರ ಚೂರ್ಣ, ಯೋಗರಾಜ ಗುಗ್ಗುಲು, ಲಕ್ಷ ಗುಗ್ಗುಲು ಮುಂತಾದ ಆಯುರ್ವೇದ ಉತ್ಪನ್ನಗಳೂ ಕಡಿಮೆ ಗುಣಮಟ್ಟ ಹೊಂದಿರುವುದಾಗಿ ವರದಿಯಲ್ಲಿ ತಿಳಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X