Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಕೃತಿ ಪರಿಚಯ
  4. ಅದೃಶ್ಯ ಲೋಕದ ಅಗೋಚರ ಜೀವಿಗಳ ಬೆನ್ನು...

ಅದೃಶ್ಯ ಲೋಕದ ಅಗೋಚರ ಜೀವಿಗಳ ಬೆನ್ನು ಹತ್ತಿ

ಈ ಹೊತ್ತಿನ ಹೊತ್ತಿಗೆ

ಕಾರುಣ್ಯಾಕಾರುಣ್ಯಾ29 May 2017 11:54 PM IST
share
ಅದೃಶ್ಯ ಲೋಕದ ಅಗೋಚರ ಜೀವಿಗಳ ಬೆನ್ನು ಹತ್ತಿ

ಈ ಜಗತ್ತು ಗೋಚರ ಜೀವಿಗಳಿಗೆ ಸೀಮಿತವಾಗಿರುವುದಲ್ಲ. ಅಥವಾ ತನ್ನ ಕಣ್ಣಿಗೆ ಗೋಚರವಾಗುವುದಷ್ಟೇ ಅಸ್ತಿತ್ವದಲ್ಲಿದೆ ಎಂದು ನಂಬುವ ಕಾಲ ಇಂದು ಇಲ್ಲವಾಗಿದೆ. ಕಣ್ಣಿಗೆ ಅಗೋಚರವಾದ ಜೀವಜಗತ್ತು ಮನುಷ್ಯನಿಗಿಂತ ಪ್ರಬಲವಾಗಿ, ಸಂಘಟಿತವಾಗಿ ಬದುಕು ನಡೆಸುತ್ತಿರುವುದು ಅವನ ಗಮನಕ್ಕೆ ಬಂದಿದೆ. ಅದನ್ನು ಎದುರಿಸಿದಷ್ಟು ಅದು ಇನ್ನಷ್ಟು ಪ್ರಬಲವಾಗುತ್ತಿವೆ. ಅಥವಾ ಅದು ಮತ್ತೊಂದು ರೂಪದಲ್ಲಿ ಅವನ ಮೇಲೆ ಎರಗುತ್ತಿವೆ. ಈ ಅದೃಶ್ಯಲೋಕದ ಅಗೋಚರ ಜೀವಿಗಳ ಬಗ್ಗೆ ಸರಳ ಭಾಷೆಯಲ್ಲಿ, ಕುತೂಹಲಕರವಾಗಿ ಬರೆದಿದ್ದಾರೆ ಡಾ. ನಾ. ಸೋಮೇಶ್ವರ. ವೈದ್ಯ ಸಾಹಿತಿಯಾಗಿ ಗುರುತಿಸಿಕೊಂಡಿರುವ ಇವರು ಈಗಾಗಲೇ ‘ಮನಸ್ವಿ’ ‘ನಮ್ಮ ಆಹಾರ ಹೇಗಿರಬೇಕು?’ ‘ನೆಮ್ಮದಿಯ ಬದುಕಿಗೆ ಲೈಂಗಿಕ ಸ್ವಚ್ಛತೆ’ ಮೊದಲಾದ ಕೃತಿಗಳನ್ನು ಬರೆದಿದ್ದಾರೆ. ಇಲ್ಲಿ ಮನುಷ್ಯನ ದುರಹಂಕಾರ ಮತ್ತು ಅವನ ಮುಂದೆ ಸವಾಲಾಗಿರುವ ರೋಗಕಾರಕ ಅಗೋಚರ ಶಕ್ತಿಗಳ ಬಗ್ಗೆ ಇವರು ಬರೆದಿದ್ದಾರೆ. ‘ಅದೃಶ್ಯ ಲೋಕದ ಅಗೋಚರ ಜೀವಿಗಳು’ ಕೃತಿ ಮನುಷ್ಯನಿಗೆ ಆರೋಗ್ಯದ ಬಗ್ಗೆ ಮಾಹಿತಿ ನೀಡುವ ಜೊತೆ ಜೊತೆಗೇ ತನ್ನ ಪರಿದಿಯಾಚೆಗಿರುವ ಜಗತ್ತೊಂದನ್ನು ತೆರೆದುಕೊಡುತ್ತದೆ ಮತ್ತು ಅದರ ಸಂಶೋಧನೆಗಳ ಇತಿಹಾಸ, ವರ್ತಮಾನಗಳನ್ನು ವಿವರಿಸುತ್ತದೆ.
ಇದು ಕೇವಲ ರೋಗಾಣುಗಳ ಕುರಿತಂತೆ ಚರ್ಚಿಸುವ ಕೃತಿಯಲ್ಲ. ಒಟ್ಟು ಜೀವರಾಶಿ ಮತ್ತು ಅದರ ನಿಗೂಢತೆಗಳನ್ನು ಅನ್ವೇಶಿಸುವ ಕೃತಿ. ಆದುದರಿಂದಲೇ ಭೂಮಿ ಮತ್ತು ಜೀವರಾಶಿಯ ಹುಟ್ಟಿನಿಂದ ಅವರು ಆರಂಭಿಸುತ್ತಾರೆ. ಈ ವಿಶ್ವದ ಅಗಣಿತ ಜೀವರಾಶಿ, ಜೀವಜಗತ್ತಿನ ಅಲಿಖಿತ ನಿಯಮಗಳು, ಸೂಕ್ಷ್ಮ ಜೀವಿಗಳ ಅನಾವರಣ, ಪ್ರಾಚೀನ ಜೀವಿಗಳ ಸಾಮ್ರಾಜ್ಯ, ವೈರಸ್‌ಗಳ ವಿಭಿನ್ನ ಲೋಕ, ಶಿಲೀಂಧ್ರಗಳ ಸಾಮ್ರಾಜ್ಯ, ವಿಶೇಷ ಅಗೋಚರ ಜೀವಿಗಳು...ಹೀಗೆ ಬೇರೆ ಬೇರೆ ಮಗ್ಗುಲುಗಳ ಕುರಿತಂತೆ ಲೇಖನದಲ್ಲಿ ಚರ್ಚಿಸುತ್ತಾರೆ. ಈ ಭೂಮಿಯ ಮೇಲೆ ಬದುಕುವ ಏಕೈಕ ಅಧಿಕಾರ ನಮಗಿದೆ ಎಂಬ ಭಾವನೆಯನ್ನು ಮನುಷ್ಯ ತೊರೆಯಬೇಕು ಎಂದು ಈ ಕೃತಿ ಒತ್ತಾಯಿಸುತ್ತದೆ. ಇಲ್ಲಿ ಬದುಕಲು ನಮಗೆಷ್ಟು ಅಧಿಕಾರವಿದೆಯೋ ಅಷ್ಟೇ ಅಧಿಕಾರವು ಪ್ರತಿಯೊಂದು ಕ್ರಿಮಿ, ಕೀಟ, ಸಸ್ಯ, ಪ್ರಾಣಿಗಳಿಗಿವೆ. ಇದನ್ನು ನಾವು ಗೌರವಿಸುತ್ತಿಲ್ಲ. ಈ ಜೀವಜಾಲದ ಒಂದು ಕೊಂಡಿ ಮುರಿಯಿತೆಂದರೆ, ಅದರ ದುಷ್ಪರಿಣಾಮ ಪ್ರತ್ಯಕ್ಷವಾಗಿಯೋ, ಪರೋಕ್ಷವಾಗಿಯೋ ಈ ಪ್ರಕೃತಿಯ ಮೇಲಾಗುತ್ತದೆ ಎಂದು ಕೃತಿ ಎಚ್ಚರಿಸುತ್ತದೆ. ನವಕರ್ನಾಟಕ ಪ್ರಕಾಶನ ಹೊರತಂದಿರುವ ಈ ಕೃತಿಯ ಮುಖಬೆಲೆ 80 ರೂಪಾಯಿ.

share
ಕಾರುಣ್ಯಾ
ಕಾರುಣ್ಯಾ
Next Story
X