Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. " ನಾನು ನೋಡಿದ ಅತ್ಯಂತ ಅನೈತಿಕ ಪತ್ರಕರ್ತ...

" ನಾನು ನೋಡಿದ ಅತ್ಯಂತ ಅನೈತಿಕ ಪತ್ರಕರ್ತ ಅರ್ನಬ್ ಗೋಸ್ವಾಮಿ ": ಯೋಧನ ಪುತ್ರ, ಕೇರಳ ಸಂಸದನ ಫೇಸ್ ಬುಕ್ ಪೋಸ್ಟ್ ವೈರಲ್

ವಾರ್ತಾಭಾರತಿವಾರ್ತಾಭಾರತಿ30 May 2017 2:24 PM IST
share
 ನಾನು ನೋಡಿದ ಅತ್ಯಂತ ಅನೈತಿಕ ಪತ್ರಕರ್ತ ಅರ್ನಬ್ ಗೋಸ್ವಾಮಿ : ಯೋಧನ ಪುತ್ರ, ಕೇರಳ ಸಂಸದನ ಫೇಸ್ ಬುಕ್ ಪೋಸ್ಟ್ ವೈರಲ್

ಪಾಲಕ್ಕಾಡ್,ಮೇ 30 : ಅರ್ನಬ್ ಗೋಸ್ವಾಮಿಯ ರಿಪಬ್ಲಿಕ್ ಟಿವಿಯಲ್ಲಿನ ಚರ್ಚಾ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿರುವ ಕೇರಳದ ಪಾಲಕ್ಕಾಡ್ ಕ್ಷೇತ್ರದ ಸಂಸದ ಎಂ ಬಿ ರಾಜೇಶ್ ಅರ್ನಬ್ ಗೆ ಬಹಿರಂಗ ಪತ್ರವೊಂದನ್ನು ಬರೆದು ಅದನ್ನು ಫೇಸ್ ಬುಕ್ ನಲ್ಲಿಯೂ ಪೋಸ್ಟ್ ಮಾಡಿ ‘‘ನಾನು ನೋಡಿದ ಅತ್ಯಂತ ಅನೈತಿಕ ಪತ್ರಕರ್ತ ಅರ್ನಬ್ ಗೋಸ್ವಾಮಿ’’ ಎಂದು ಅವರನ್ನು ಜರಿದಿದ್ದಾರೆ. ಅರ್ನಬ್ ಅವರ ಅನಾಗರಿಕ ವರ್ತನೆಯನ್ನು ಟೀಕಿಸಿರುವ ರಾಜೇಶ್ ಅವರು ಬದ್ಧತೆ ಮತ್ತು ವಿಶ್ವಸನೀಯತೆಯ ಕೊರತೆ ಅನುಭವಿಸುತ್ತಿದ್ದಾರೆ ಎಂದು ಹೇಳಿದ್ದಾರೆ. ಈ ಪತ್ರ ಇದೀಗ ವೈರಲ್ ಆಗಿದೆ.

ಮೇ 26ರಂದು ರಿಪಬ್ಲಿಕ್ ಟಿವಿಯ ಚರ್ಚಾ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ರಾಜೇಶ್ ಅವರನ್ನು ಆಹ್ವಾನಿಸಲಾಗಿತ್ತು. ಆದರೆ ಅವರಿಗೆ ನರೇಂದ್ರ ಮೋದಿ ಸರಕಾರದ ಮೂರು ವರ್ಷಗಳ ಆಡಳಿತದ ಬಗೆಗಿನ ಚರ್ಚೆಯೆಂದು ಹೇಳಲಾಗಿತ್ತಾದರೂ ಕೊನೆಯ ಕ್ಷಣದಲ್ಲಿ ಚರ್ಚೆಯ ವಿಚಯವನ್ನು ಬದಲಾಯಿಸಿ ಸಿಪಿಎಂ ರಾಜ್ಯ ಕಾರ್ಯದರ್ಶಿ ಕೊಡಿಯೇರಿ ಬಾಲಕೃಷ್ಣನ್ ಅವರು ಸೇನೆಯ ಬಗ್ಗೆ ನೀಡಿದ ಹೇಳಿಕೆಯನ್ನು ಸಮರ್ಥಿಸಲು ಹೇಳಲಾಗಿತ್ತೆಂದು ರಾಜೇಶ್ ತಮ್ಮ ಬಹಿರಂಗ ಪತ್ರದಲ್ಲಿ ಹೇಳಿಕೊಂಡಿದ್ದಾರೆ.

‘‘ನಾನು ಆ ಚರ್ಚಾ ಕಾರ್ಯಕ್ರಮವನ್ನು ಬಹಿಷ್ಕರಿಸಬಹುದಾಗಿತ್ತಾದರೂ ಹಾಗೆ ಮಾಡಿದ್ದೇ ಆದರೆ ನನ್ನ ಅನುಪಸ್ಥಿತಿಯಲ್ಲಿ ನಾನು ಕಾರ್ಯಕ್ರಮದಿಂದ ಓಡಿ ಹೋದೆ ಎಂದು ಅವರ ಸತತವಾಗಿ ಅರಚಬಹುದೆಂದು ತಿಳಿದಿದ್ದೆ. ಇಂತಹ ಒಂದು ಸನ್ನಿವೇಶವನ್ನು ತಪ್ಪಿಸಲೆಂದೇ ನಾನು ಆ ಕಾರ್ಯಕ್ರಮದಲ್ಲಿದ್ದು ನನ್ನ ಅಭಿಪ್ರಾಯ ವ್ಯಕ್ತಪಡಿಸಿದೆ’’ ಎಂದು ರಾಜೇಶ್ ಬರೆದಿದ್ದಾರೆ.

ಬಾಲಕೃಷ್ಣನ್ ಅವರ ಹೇಳಿಕೆ ಸೇನೆಯ ವಿರುದ್ಧವಲ್ಲ, ಬದಲಾಗಿ ಸೇನಾ ಪಡೆಗಳ ವಿಶೇಷ ರಕ್ಷಣಾ ಕಾಯಿದೆಯನ್ವಯ ನಡೆಯುವ ದೌರ್ಜನ್ಯದ ವಿರುದ್ಧವಾಗಿತ್ತು ಎಂದರು.

‘‘ನಿಮ್ಮ ಇತಿಹಾಸದ ಜ್ಞಾನ ಪ್ರಾಥಮಿಕ ಶಾಲೆಯ ಮಗುವಿನ ಜ್ಞಾನಕ್ಕಿಂತಲೂ ಕಡಿಮೆಯಾಗಿದೆ’’ ಎಂದು ರಾಜೇಶ್ ಅರ್ನಬ್ ಅವರನ್ನು ಟೀಕಿಸಿದ್ದಲ್ಲದೆ ತಾನೊಬ್ಬ ಮಾಜಿ ಯೋಧನ ಹೆಮ್ಮೆಯ ಪುತ್ರ ಎಂದು ಹೇಳಿಕೊಂಡಿದ್ದಾರೆ. ಸೇನೆಯ ಹೆಸರಿನಲ್ಲಿ ಇಷ್ಟೆಲ್ಲಾ ಮಾಡಿರುವ ನೀವು ಸೇನೆಗಾಗಿ ಏನು ಮಾಡಿದ್ದೀರಿ?’’ ಎಂದೂ ರಾಜೇಶ್ ಅರ್ನಬ್ ಅವರನ್ನು ಪ್ರಶ್ನಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X