ಜಾನುವಾರು ಮಾರಾಟ ನಿಷೇಧದ ವಿರುದ್ಧ ಮೇ 31ರಂದು ಎಸ್.ಡಿ.ಪಿ.ಐ. ಪ್ರತಿಭಟನೆ

ಮಂಗಳೂರು, ಮೇ 30: ಮಾಂಸದ ಉದ್ದೇಶಕ್ಕಾಗಿರುವ ಜಾನುವಾರು ಮಾರುಕಟ್ಟೆಯಲ್ಲಿ ದನ, ಎಮ್ಮೆ, ಕೋಣ, ಕರು, ಹೋರಿ ಹಾಗೂ ಒಂಟೆಗಳ ಮಾರಾಟವನ್ನು ನಿಷೇಧಿಸಿ ಕೇಂದ್ರ ಸರಕಾರ ಅಧಿಸೂಚನೆ ಹೊರಡಿಸಿರುವುದನ್ನು ಖಂಡಿಸಿ ಮೇ 31ರಂದು ಸಂಜೆ 3:30ಕ್ಕೆ ದ.ಕ. ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ದ.ಕ ಜಿಲ್ಲಾ ಸಮಿತಿ ಪ್ರತಿಭಟನಾ ಸಭೆ ಹಮ್ಮಿಕೊಳ್ಳಲಾಗಿದೆ ಎಂದು ಪಕ್ಷಧ ಜಿಲ್ಲಾ ಕಾರ್ಯದರ್ಶಿ ಇಕ್ಬಾಲ್ ಬೆಳ್ಳಾರೆ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story





