Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಸಿಆರ್‌ಪಿಎಫ್ ಅಧಿಕಾರಿ ವಿರುದ್ಧ...

ಸಿಆರ್‌ಪಿಎಫ್ ಅಧಿಕಾರಿ ವಿರುದ್ಧ ಬಂಧನಾದೇಶ ಹೊರಡಿಸಲು ಕೆನಡ ನ್ಯಾಯಾಲಯ ನಕಾರ

ವಾರ್ತಾಭಾರತಿವಾರ್ತಾಭಾರತಿ30 May 2017 9:11 PM IST
share
ಸಿಆರ್‌ಪಿಎಫ್ ಅಧಿಕಾರಿ ವಿರುದ್ಧ ಬಂಧನಾದೇಶ ಹೊರಡಿಸಲು ಕೆನಡ ನ್ಯಾಯಾಲಯ ನಕಾರ

ಟೊರಾಂಟೊ, ಮೇ 30: ಕೆನಡ ಭೇಟಿಯಲ್ಲಿರುವ ಭಾರತದ ನಿವೃತ್ತ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಸಮನ್ಸ್ ಅಥವಾ ಬಂಧನಾದೇಶ ಹೊರಡಿಸಬೇಕು ಎಂದು ಕೋರಿ ‘ಸಿಖ್ಸ್ ಫಾರ್ ಜಸ್ಟಿಸ್’ ಎಂಬ ಸಂಘಟನೆ ಸಲ್ಲಿಸಿದ ಅರ್ಜಿಯನ್ನು ಕೆನಡದ ನ್ಯಾಯಾಲಯವೊಂದು ತಿರಸ್ಕರಿಸಿದೆ.
ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್ (ಸಿಆರ್‌ಪಿಎಫ್)ನ ಹಿರಿಯ ಅಧಿಕಾರಿಯಾಗಿ ನಿವೃತ್ತರಾದ ತೇಜಿಂದರ್ ಸಿಂಗ್ ಧಿಲ್ಲೋನ್ ಕೆನಡದಲ್ಲಿರುವ ಬಗ್ಗೆ ‘ಸಿಖ್ಸ್ ಫಾರ್ ಜಸ್ಟಿಸ್’ ಸರಿಯಾದ ಸಾಕ್ಷವನ್ನು ಒದಗಿಸಿಲ್ಲ ಎಂಬ ಕಾರಣವನ್ನು ನ್ಯಾಯಾಲಯ ತನ್ನ ನಿರ್ಧಾರಕ್ಕೆ ನೀಡಿದೆ.

ಆರಂಭದಲ್ಲಿ ತೇಜಿಂದರ್ ಸಿಂಗ್‌ಗೆ ಕೆನಡ ಪ್ರವೇಶವನ್ನು ನಿರಾಕರಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಅವರು ಭಾರತಕ್ಕೆ ವಾಪಸಾಗಿದ್ದರು. ಬಳಿಕ ಹೊಸದಿಲ್ಲಿಯಲ್ಲಿರುವ ಕೆನಡ ರಾಯಭಾರ ಕಚೇರಿಯು ಹೊಸ ವೀಸಾ ಮತ್ತು ವಿಮಾನ ಟಿಕೆಟ್ ನೀಡಿದ ಹಿನ್ನೆಲೆಯಲ್ಲಿ ಅವರು ಮತ್ತೆ ಕೆನಡಕ್ಕೆ ಹೋದರು.
ಅವರು ಸೋಮವಾರ ಕೆನಡದಿಂದ ಹೊರಡುವುದೆಂದು ಆರಂಭದಲ್ಲಿ ನಿಗದಿಯಾಗಿತ್ತಾದರೂ, ರವಿವಾರ ರಾತ್ರಿಯೇ ಟೊರಾಂಟೊ ವಿಮಾನ ನಿಲ್ದಾಣದ ಮೂಲಕ ಕೆನಡ ತೊರೆದಿದ್ದಾರೆ.

‘ಸಿಖ್ಸ್ ಫಾರ್ ಜಸ್ಟಿಸ್’ ಶುಕ್ರವಾರ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಿದ ಹಿನ್ನೆಲೆಯಲ್ಲಿ ಅವರು ಬೇಗನೆ ಭಾರತಕ್ಕೆ ವಾಪಸಾಗಿರಬಹುದು ಎಂದು ಭಾವಿಸಲಾಗಿದೆ.

ಅರ್ಜಿಯ ವಿಚಾರಣೆಯು ಸೋಮವಾರ ಟೊರಾಂಟೊದಲ್ಲಿರುವ ಒಂಟಾರಿಯೊ ನ್ಯಾಯಾಲಯದಲ್ಲಿ ವಿಚಾರಣೆಗೆ ಬಂತು. ತೇಜಿಂದರ್ ಸಿಂಗ್ ಕೆನಡದಲ್ಲಿರುವ ಬಗ್ಗೆ ಖಚಿತ ಮಾಹಿತಿಯಿಲ್ಲದಿರುವ ಹಿನ್ನೆಲೆಯಲ್ಲಿ, ಅವರ ವಿರುದ್ಧ ಸಮನ್ಸ್ ಅಥವಾ ಬಂಧನಾದೇಶ ಹೊರಡಿಸಲು ನ್ಯಾಯಾಲಯ ನಿರಾಕರಿಸಿತು.

ತೇಜಿಂದರ್ ಸಿಂಗ್ ಜಲಂಧರ್ ವಲಯದ ಡಿಐಜಿ ಆಗಿದ್ದಾಗ, ಅವರ ಅಧೀನದಲ್ಲಿದ್ದ ಪೊಲೀಸ್ ಅಧಿಕಾರಿಗಳು ಖಾಲಿಸ್ತಾನ ಪರವಾಗಿ ಪ್ರಚಾರ ಮಾಡುತ್ತಿದ್ದ ‘ರಾಷ್ಟ್ರೀಯವಾದಿ’ಗಳನ್ನು ಹಿಂಸಿಸಿದ್ದರು ಎಂಬುದಾಗಿ ‘ಸಿಖ್ಸ್ ಫಾರ್ ಜಸ್ಟಿಸ್’ ತನ್ನ ಅರ್ಜಿಯಲ್ಲಿ ಆರೋಪಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X